• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶದ ಇನ್ನೋರ್ವ ಸಚಿವ ಕರೋನಾದಿಂದ ಸಾವು..!

by
August 16, 2020
in ದೇಶ
0
ಉತ್ತರ ಪ್ರದೇಶದ ಇನ್ನೋರ್ವ ಸಚಿವ ಕರೋನಾದಿಂದ ಸಾವು..!
Share on WhatsAppShare on FacebookShare on Telegram

ದೇಶದಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಚೇತನ್‌ ಚೌವ್ಹಾಣ್‌ ಕೋವಿಡ್‌ 19 ಸೋಂಕಿಗೆ ಬಲಿಯಾಗಿದ್ದಾರೆ. ಜುಲೈ 12ರಂದು ಕೋವಿಡ್‌ 19 ಸೋಂಕಿನ ಗುಣಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಂಜಯ್‌ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಶನಿವಾರ ಸಚಿವರ ಆರೋಗ್ಯ ಸ್ಥಿತಿ ಏರುಪೇರು ಆಗಿತ್ತು. ನಂತರ ಕಿಡ್ನಿ ಫೇಲ್ಯೂರ್‌ ಆಗಿತ್ತು. ಜೀವರಕ್ಷಕ ಸಾಧನ ಅಳವಡಿಕೆ ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.

ಚೇತನ್‌ ಚೌವ್ಹಾಣ್‌ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರನಾಗಿದ್ದು, 12 ವರ್ಷಗಳ ಕಾಲ ಭಾರತಕ್ಕಾಗಿ ಆಟವಾಡಿದ ಚೇತನ್‌ ಚೌವ್ಹಾಣ್‌, 22 ವರ್ಷದವನಾಗಿದ್ದಾದ ನ್ಯೂಜಿಲೆಂಡ್‌ ಪಾದಾರ್ಪಣೆ ಮಾಡಿದ್ದರು. ಒಟ್ಟು 40 ಟೆಸ್ಟ್‌ ಪಂದ್ಯಗಳನ್ನಾಡಿ ನಿವೃತ್ತಿ ಹೊಂದಿದ ಬಳಿಕ 1981ರಲ್ಲಿ ನಿವೃತ್ತಿ ಪಡೆದಿದ್ದರು. ಆ ಬಳಿಕ 1981ರಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದರು. 31.57 ಸರಾಸರಿಯಲ್ಲಿ 2084 ರನ್‌ ಗಳಿಸಿದ್ದರು. 16 ಅರ್ಧ ಶತಕ ಹಾಗೂ ಆಸ್ಟ್ರೇಲಿಯಾ ವಿರುದ್ಧ ಗಳಿಸಿದ್ದ 97 ರನ್‌ ಅತ್ಯಧಿಕ ಗರಿಷ್ಠ ಸ್ಕೋರ್‌ ಆಗಿದೆ.

73 ವರ್ಷದ ಚೇತನ್‌ ಚೌವ್ಹಾಣ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಭಾರತೀಯ ಕ್ರಿಕೆಟ್‌ ಹಾಗೂ ರಾಜಕೀಯಲ್ಲಿ ತನ್ನದೇ ಆದ ಸೇವೆ ಸಲ್ಲಿಸಿದ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ. ನಿಮ್ಮಿಂದ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಗೆ ಶಕ್ತಿ ಬಂದಿತ್ತು. ನಿಮ್ಮ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ನಿಮ್ಮ ಕುಟುಂಬಕ್ಕೆ ಕರುಣಿಸಲಿ ಎಂದಿದ್ದಾರೆ.

Shri Chetan Chauhan Ji distinguished himself as a wonderful cricketer and later as a diligent political leader. He made effective contributions to public service and strengthening the BJP in UP. Anguished by his passing away. Condolences to his family and supporters. Om Shanti.

— Narendra Modi (@narendramodi) August 16, 2020


ADVERTISEMENT

ಚೇತನ್‌ ಚೌವ್ಹಾಣ್‌ ಕರೋನಾ ಸೋಂಕಿನಿಂದ ಅಸುನೀಗುವ ಮೊದಲೇ ತಾಂತ್ರಿಕ ಶಿಕ್ಷಣ ಸಚಿವೆ ಕಮಲಾ ರಾಣಿ ವರುಣ್‌ ಕೂಡ ಕೋವಿಡ್‌ 19ನಿಂದಲೇ ಸಾವನ್ನಪ್ಪಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಎರಡನೇ ಮಂತ್ರಿ ಕರೋನಾಗೆ ಬಲಿಯಾಗಿದ್ದಾರೆ. 15 ದಿನಗಳ ಅಂತರದಲ್ಲಿ ಯೋಗಿ ಆದಿತ್ಯನಾಥ್‌ ಕ್ಯಾಬಿನೆಟ್‌ನ ಇಬ್ಬರು ಸಚಿವರು ಸಾವನ್ನಪ್ಪಿರುವುದು ಆತಂಕಕಾರಿಯಾಗಿದೆ.

Previous Post

ಕರ್ನಾಟಕ: 7040 ಹೊಸ ಕರೋನಾ ಪ್ರಕರಣಗಳು ಪತ್ತೆ

Next Post

ಹಿಂದುತ್ವದ ಧ್ವೇಷವನ್ನು ಫೇಸ್ಬುಕ್ ಬೆಂಬಲಿಸುತ್ತಿದೆ- ವಾಲ್ ಸ್ಟ್ರೀಟ್ ಜರ್ನಲ್ ವರದಿ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಹಿಂದುತ್ವದ ಧ್ವೇಷವನ್ನು ಫೇಸ್ಬುಕ್ ಬೆಂಬಲಿಸುತ್ತಿದೆ- ವಾಲ್ ಸ್ಟ್ರೀಟ್ ಜರ್ನಲ್ ವರದಿ

ಹಿಂದುತ್ವದ ಧ್ವೇಷವನ್ನು ಫೇಸ್ಬುಕ್ ಬೆಂಬಲಿಸುತ್ತಿದೆ- ವಾಲ್ ಸ್ಟ್ರೀಟ್ ಜರ್ನಲ್ ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada