• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಗ್ಗತ್ತಲಲಿ ಕ್ರಾಂತಿವೀರನ ಪ್ರತಿಮೆ ಅನಾವರಣ: ಬೆಳಗಾವಿ ಉದ್ವಿಗ್ನ

by
August 28, 2020
in ಕರ್ನಾಟಕ
0
ಕಗ್ಗತ್ತಲಲಿ ಕ್ರಾಂತಿವೀರನ ಪ್ರತಿಮೆ ಅನಾವರಣ: ಬೆಳಗಾವಿ ಉದ್ವಿಗ್ನ
Share on WhatsAppShare on FacebookShare on Telegram

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ‌ಮೂರ್ತಿ‌‌ ಪ್ರತಿಷ್ಠಾಪನೆ ವಿಚಾರ ರಾಜ್ಯದಲ್ಲಿ ಹೊಸ ವಿವಾದ ಹುಟ್ಟುಹಾಕಿದೆ. ನಿನ್ನೆಯಷ್ಟೇ ಬೃಹತ್‌ ಹೋರಾಟ ನಡೆಸಿದ್ದ ಕನ್ನಡ ಹೋರಾಟಗಾರರು, ರಾತ್ರೋ ರಾತ್ರಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಸದ್ಯಕ್ಕೆ ಪೀರನವಾಡಿ ವೃತ್ತದಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಆಗಿದೆ. ಆದರೆ ರಾತ್ರೋರಾತ್ರಿ ಕರುನಾಡಲ್ಲಿ ಕ್ರಾಂತಿವೀರನ ಪ್ರತಿಮೆ ಪ್ರತಿಷ್ಠಾಪಿಸಿದ್ದು ಯಾಕೆ ಎನ್ನುವ ಪ್ರಶ್ನೆ ಮೂಡಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಧ್ಯರಾತ್ರಿ 2:30 ರ ಸುಮಾರಿಗೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಇರಲಿಲ್ಲ ಎನ್ನಲಾಗಿದೆ. ಬೇರೆ ಕಡೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಪರಿಶೀಲನೆಗಾಗಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ಸಮಯವನ್ನೇ ಬಳಸಿಕೊಂಡ ಕನ್ನಡ ಪರ ಹೋರಾಟಗಾರರು ಪೊಲೀಸರು ವಾಪಸ್‌ ಬರೋದರ ಒಳಗೆ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಿದ್ದರು. ಮೊದಲೇ ಸಿದ್ಧಪಡಿಸಿದ್ದ ಕಾಂಕ್ರೀಟ್ ಬೇಸ್ ಮೇಲೆ 5 ಅಡಿ ಎತ್ತರದ ರಾಯಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದರು. ವಿಷಯ ತಿಳಿದು ಬೆಳಗ್ಗಿನ ಜಾವ 3.15 ಕ್ಕೆ ಬಂದ ಪೊಲೀಸರು, ಪ್ರತಿಮೆಯನ್ನು ಏನು ಮಾಡಬೇಕೆಂದು ದಿಕ್ಕು ತೋಚದೆ ಸುಮ್ಮನಾದರು. ಕಡೇ ಬಜಾರ್ ಎಸಿಪಿ ಶಿವಾರೆಡ್ಡಿ ಭೇಟಿ, ಪರಿಶೀಲನೆ ಮಾಡಿದರು. ಆ ಬಳಿಕ ಮತ್ತೆ ಬೆಳಗ್ಗೆ 5.30 ಕ್ಕೆ ಬಂದ ಕನ್ನಡಪರ ಸಂಘಟನೆಯವರು ಘೋಷಣೆ ಕೂಗಿ ವಾಪಸ್ ತೆರಳಿದರು.

ಈ ನಡುವೆ ಪೀರನವಾಡಿ ವೃತ್ತದಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಯತ್ನ ನಡೆದಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಿದ್ದ ಸ್ಥಳಕ್ಕೆ ಬಂದ ಶಿವಾಜಿ ಅಭಿಮಾನಿಗಳು, ಬಾಲ ಶಿವಾಜಿ ಮೂರ್ತಿ ಕೂರಿಸಲು ಯತ್ನ ನಡೆಸಿದ್ದು, ಇದು ಶಿವಾಜಿ ಸರ್ಕಲ್ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಯಾವುದಕ್ಕೂ ಅನುಮತಿ ಕೊಡದ ಪೊಲೀಸರು, ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ಗ್ರಾಮೀಣ ಎಸಿಪಿ ಸೇರಿದಂತೆ ಪೊಲೀಸ್‌ ಬಂದೋಬಸ್ತ್‌ ಹೆಚ್ಚಳ ಮಾಡಲಾಗಿದೆ.

ಈ ನಡುವೆ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಹಿನ್ನೆಲೆ, ಸಂಗೊಳ್ಳಿ ‌ರಾಯಣ್ಣ ಮೂರ್ತಿ‌ ಬಳಿಗೆ ಕನ್ನಡ ಹೋರಾಗಾರರು ಆಗಮಿಸಿದ್ದು ಸ್ಥಳದಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣ ಮಾಡಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ ಮಾಡಿದ್ದಾರೆ. ಒಂದೇ ವೃತ್ತದಲ್ಲಿ 2 ಪ್ರತಿಮೆ ಬೇಡ ಎಂದು ಶಿವಾಜಿ ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಆದರೆ ಪೀರನವಾಡಿಯಲ್ಲಿ ಸೇರಿರುವ ರಾಯಣ್ಣ ಪ್ರತಿಮೆ ಇರಲೇಬೇಕೆಂದು ಕನ್ನಡ ಸಂಘಟನೆಯವರು ಜೈಕಾರ ಹಾಕಿದರು. ಬಳಿಕ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಪಿ. ತ್ಯಾಗರಾಜನ್, ಮೂರ್ತಿ ಪ್ರತಿಷ್ಠಾಪನೆ ಸ್ಥಳ ಪರಿಶೀಲನೆ ಮಾಡಿದ್ದಾರೆ. ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶಿವಾಜಿ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪೀರನವಾಡಿಯಲ್ಲಿ ರಾತ್ರೋರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರಿಂದ ನೂರಾರು ಮರಾಠಾ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರನ್ನು ಸಮಾಧಾನ ಮಾಡಲು ಡಿಸಿಪಿ ಹಾಗೂ ಹಿರಿಯ ಅಧಿಕಾರಿಗಳು ಎಷ್ಟೇ ಪ್ರಯತ್ನ ಮಾಡಿದರು ಬಗ್ಗದ ಯುವಕರು ನಮಗೂ ಶಿವಾಜಿ ಮೂರ್ತಿಯನ್ನು ಸ್ಥಾಪಿಸಲು ಅವಕಾಶ ಮಾಡಿ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಪರಿಸ್ಥಿತಿ ತಿಳಿಯಾಗುವುದು ಅನುಮಾನ ಎಂದು ಗೊತ್ತಾದ ಬಳಿಕ ಪೀರನವಾಡಿ ವೃತ್ತದಲ್ಲಿ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನೆ ಮಾಡದಂತೆ ಮನವಿ ಮಾಡಿದರೂ ಕೇಳದ ಗುಂಪನ್ನು ಲಾಠಿ ಚಾರ್ಜ್‌ ಮಾಡಿ ಖಾಕಿ ಪಡೆ ಚದುರಿಸಿದೆ.

ಬೆಳಗಾವಿಯಲ್ಲಿ ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಕಲ್ಲು ತೂರಾಟ ನಡೆಸಿದ ಉದ್ರಿಕ್ತರ ಮೇಲೆ ಲಾಠಿ ಚಾರ್ಚ್ ಮಾಡಲಾಗಿದೆ. ಕೆಲವರು ಯುವಕರ ಗುಂಪಿನಿಂದ ಪ್ರಚೋದನೆ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯಿಂದ ಶಿವಾಜಿ ವೃತ್ತದ ಹೆಸರಿಗೆ ಧಕ್ಕೆ ಆಗುತ್ತದೆ ಎನ್ನುವ ಆತಂಕದಿಂದ ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಯಾವುದೇ ವೃತ್ತದಲ್ಲಿ, ಮಹಾನಾಯಕರ ಹೆಸರಿಗೆ ಧಕ್ಕೆ ಆಗಲ್ಲ. ನಗರದ ಆಯಾ ಕಟ್ಟಿನ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಂಗೊಳ್ಳಿ ರಾಯಣ್ಣ ‌ಮೂರ್ತಿ ಸ್ಥಾಪನೆ ಅನಧಿಕೃತ. ಈ ಬಗ್ಗೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಘರ್ಷಣೆ ನಡೆದಿರುವ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಏನು ಆಗಿದೆ ಎಂಬುದನ್ನು ಜಿಲ್ಲಾಧಿಕಾರಿಗಳಿಂದ ತಿಳಿದು ಕೊಂಡು ಶಾಂತ ರೀತಿಯಲ್ಲಿ ಸಮಸ್ಯೆ ಬಗೆ ಹರಿಸಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಬೆಳಗಾವಿ ಡಿಸಿ ಜೊತೆಗೆ ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದು ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ ಎಂದು ಡಿಸಿಗೆ ಸೂಚನೆ ನೀಡಿದ್ದಾರೆ.

ರಾತ್ರೋರಾತ್ರಿ ಮೂರ್ತಿ ಸ್ಥಾಪನೆ ಸರಿಯೇ..?

ಸಂಗೊಳ್ಳಿ ರಾಯಣ್ಣ ದೇಶ ಕಂಡ ಅಪ್ರತಿಮ ಹೋರಾಟಗಾರ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಿರುವುದರಲ್ಲಿ ತಪ್ಪೇನು ಇಲ್ಲ. ಆದರೆ ರಾತ್ರೋರಾತ್ರಿ ಪ್ರತಿಮೆ ಸ್ಥಾಪಿಸಬೇಕಾದ ಅಗತ್ಯ ಏನಿತ್ತು. ಬೆಳಗ್ಗೆ ಸಮಯದಲ್ಲೇ ಪ್ರತಿಮೆ ಸ್ಥಾಪನೆ ಮಾಡಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು. ಪೊಲೀಸರ ರಕ್ಷಣೆಯಲ್ಲೇ ಈ ಕೆಲಸ ಆಗಬೇಕಿತ್ತು ಎನ್ನುವುದು ಸಾಕಷ್ಟು ಕನ್ನಡಿಗರ ಅಭಿಪ್ರಾಯವಾಗಿದೆ. ಆದರೂ ಈಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಆಗಿದೆ. ಸದ್ಯದ ಪರಿಸ್ಥಿತಿಯನ್ನು ಗಮನಿಸಿದಲ್ಲಿ, ಪೊಲೀಸ್‌ ಆಯುಕ್ತರು ಅನಧಿಕೃತ ಎಂದು ಪ್ರತಿಮೆ ಸ್ಥಳಾಂತರ ಮಾಡಲು ಮುಂದಾದರೆ ಉದ್ವಿಗ್ನ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಮರಾಠಿ-ಕನ್ನಡಿಗ ಎನ್ನುವ ವಿವಾದ ಶುರುವಾಗಲಿದ್ದು, ಕನ್ನಡ ನಾಡಿನಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣಕ್ಕೆ ವಿರೋಧ ಮಾಡಿದರೆ ಸಂಕಷ್ಟ ಉಲ್ಬಣ ಆಗಲಿದೆ ಎನ್ನುವುದನ್ನು ಸರ್ಕಾರ ಮನಗಂಡು ಸೂಕ್ತ ರಕ್ಷಣೆ ಕೊಡುವ ಕೆಲಸ ಆಗಬೇಕಿದೆ.

Tags: ಕನ್ನಡಛತ್ರಪತಿ ಶಿವಾಜಿಬೆಳಗಾವಿಮರಾಠಿಸಂಗೊಳ್ಳಿ ರಾಯಣ್ಣ
Previous Post

ರಾಜಕಾರಣಿಗಳ ಇತಿಹಾಸ ತಿರುಚುವ ಷಡ್ಯಂತ್ರಕ್ಕೆ ಬಲಿಯಾದನೇ ಟಿಪ್ಪು?

Next Post

ಭೂಸುಧಾರಣೆ ಸುಗ್ರೀವಾಜ್ಞೆ ಹಿಂಪಡೆಯುವಂತೆ ಕೋರಿ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

Related Posts

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಗೌರವ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಮೃದುವಾಗಿ ಮಾತನಾಡಿ. ಇಂದು ಸಾಲದ ವಸೂಲಾತಿಗೆ ಉತ್ತಮ ದಿನ....

Read moreDetails
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಭೂಸುಧಾರಣೆ ಸುಗ್ರೀವಾಜ್ಞೆ ಹಿಂಪಡೆಯುವಂತೆ ಕೋರಿ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

ಭೂಸುಧಾರಣೆ ಸುಗ್ರೀವಾಜ್ಞೆ ಹಿಂಪಡೆಯುವಂತೆ ಕೋರಿ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada