• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಡಲು ಪ್ಲಾಸ್ಟಿಕ್‌ ಮಯವಾಗಲು ಮೀನುಗಾರರ ಕೊಡುಗೆಯೂ ಅಪಾರ!

by
March 6, 2020
in ಕರ್ನಾಟಕ
0
ಕಡಲು ಪ್ಲಾಸ್ಟಿಕ್‌ ಮಯವಾಗಲು ಮೀನುಗಾರರ ಕೊಡುಗೆಯೂ ಅಪಾರ!
Share on WhatsAppShare on FacebookShare on Telegram

ಮೀನುಗಾರಿಕೆಯಿಂದ ಪ್ಲಾಸ್ಟಿಕ್‌ ತ್ಯಾಜ್ಯ ಕಡಲು ಸೇರುತ್ತಿದೆ ಎಂಬುದು ಗೊತ್ತಿದೆ ಆದರೆ ಇದರ ಪ್ರಮಾಣ ಇಷ್ಟಿದೆ ಎಂಬುದು ಗೊತ್ತಿಲ್ಲ..! ಕೇಂದ್ರ ಸರ್ಕಾರದ ಪ್ಲಾಸ್ಟಿಕ್‌ ನೀತಿ ನಿಯಮಗಳು ತುಸು ಕಠಿಣವಾಗಿಯೇ ಇವೆ. ಆದರೆ ಅವೆಲ್ಲಾ ನಗರದಲ್ಲಿ ಮಾತ್ರ ಹೇರಿಕೆಯಾಗುತ್ತಿವೆ. ನಮ್ಮ ಸುತ್ತಲಿನ ಪರಿಸರ ಇಂತಹದೇ ಕಾರಣದಿಂದ ಹಾಳಾಗುತ್ತಿದೆ ಎಂಬುದು ನಮಗೆ ಗೊತ್ತಿರುತ್ತೆ ಆದರೆ ಬಾಯಿಬಿಡುವುದಿಲ್ಲ. ಅಂತಹದ್ದೇ ಒಂದು ವರದಿ ಮೀನುಗಾರರಿಂದ ಕಡಲು ಮಾಲೀನ್ಯದ ಮೇಲೆ ಬೆಳಕು ಚೆಲ್ಲಿದೆ.

ADVERTISEMENT

ಕರ್ನಾಟಕವೂ ಸಹ ಕಡಲ ತೀರವನ್ನ ಹಂಚಿಕೊಂಡಿದ್ದು ಸಾಕಷ್ಟು ಮೀನುಗಾರರು ಜೀವನ ನಡೆಸುತ್ತಿದ್ದಾರೆ. ಅವರಿಗೆ ಸರ್ಕಾರ ಸಾಕಷ್ಟು ಅನುಕೂಲವನ್ನೂ ಮಾಡಿಕೊಟ್ಟಿದೆ, ಆ ನಾಡಿನಿಂದಲೇ ಬಂದ ಕೋಟಾ ಶ್ರೀನಿವಾಸ ಪೂಜಾರಿಯವರು ಮೀನುಗಾರರ ಜೀವನಮಟ್ಟ ಸುಧಾರಿಸಲು ಪ್ರಯತ್ನ ಪಡುತ್ತಿದ್ದಾರೆ. ಬಜೆಟ್‌ನಲ್ಲೂ ಕೂಡ ಮಹಿಳೆಯರಿಗೆ ಟೂವ್ಹೀಲರ್‌ ಸೌಲಭ್ಯ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿದ್ದಾರೆ. ಆದರೆ ಕಡಲು ಪರಿಸರ ದಿನೇ ದಿನೇ ಹಾಳಾಗುತ್ತಿರುವ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ, ಪರಿಸರ ಸ್ನೇಹಿ ಮೀನುಗಾರಿಕೆ ಬಗ್ಗೆ ಯೋಚಿಸಿದ್ದೇ ಇಲ್ಲ..!

ಮಂಗಳೂರು ಕಡಲಿಗೆ ಮೀನುಗಾರಿಕೆಯಿಂದ ಸೇರುವ ಪ್ಲಾಸ್ಟಿಕ್‌ ತ್ಯಾಜ್ಯ ಪ್ರವಾಸಿಗರ ಬಿಸಾಡುವ ಬಾಟೆಲ್‌ಗಿಂತ ಅಧಿಕವಾಗಿದೆ. ರಾಜ್ಯ ಮೀನುಗಾರರ ಸಂಘದ ಉಪಾಧ್ಯಕ್ಷ ನವೀನ್‌ ಬಂಗೇರ ಕೂಡ ಇದನ್ನ ಒಪ್ಪಿಕೊಳ್ಳುತ್ತಾರೆ, ಡೀಪ್‌ ಸೀ ಬೋಟ್‌ನಲ್ಲಿ ಪ್ಲಾಸ್ಟಿಕ್‌ ಬಲೆಯನ್ನ ಉಪಯೋಗಿಸಿ ಮೀನುಗಾರಿಕೆ ಮಾಡುವಾಗ ಕಲ್ಲು ಬಂಡೆಗಳ ಮಧ್ಯೆ ಇರುವ ಮರಿ ಮೀನುಗಳಿಗೆ ಬಲೆ ಬೀಸುತ್ತಾರೆ. ಆಗ ಕನಿಷ್ಟ 100 ಕೆಜಿಯಷ್ಟು ಬಲೆ ಕಲ್ಲಿಗೆ ಸಿಕ್ಕಿ ನಾಶವಾಗುತ್ತೆ, ಒಟ್ಟು ರಾಜ್ಯದ ಐದು ಸಾವಿರ ಅಧಿಕೃತ ಬೋಟ್‌ಗಳಲ್ಲಿ ಒಮ್ಮೆ ಹೀಗಾದಾಗ ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್‌ ಬಲೆಗಳ ಪ್ರಮಾಣ ಐದು ಲಕ್ಷ ಕೆಜಿಯಷ್ಟಾಯಿತು!

ಹೀಗೆಲ್ಲಾ ಹೇಳಿ ಮೀನುಗಾರಿಕೆಯ ಮೇಲೆ ಬೊಟ್ಟು ಮಾಡುತ್ತಿಲ್ಲ. ಆದರೆ ಪರಿಸರವನ್ನ ಹಾಗೆಯೇ ಕಡಲನ್ನ ಬಳಸಿ ಬಿಸಾಡುವ ಛಾತಿ ಎಲ್ಲರಲ್ಲೂ ಇದೆ. ಕಳೆದ ವಾರ ಪಾಂಡಿಚೆರಿಯಲ್ಲಿ ಈ ಬಿಸಾಡಿದ ಬಲೆಯನ್ನ ಸುತ್ತಿಕೊಂಡು ವೇಲ್‌ ಶಾರ್ಕ್‌ ಪ್ರಾಣಬಿಟ್ಟಿತ್ತು. ಕೇರಳ ಹಾಗೂ ತಮಿಳುನಾಡಿನಲ್ಲಿ ಉದ್ಯಮವಾಗಿ ಬೆಳೆದಿರುವ ಆಳ ಸಮುದ್ರದ ಮೀನುಗಾರಿಕೆ ಜಲಚರಗಳನ್ನ ಅನಾಯಾಸವಾಗಿ ಕೊಲ್ಲುತ್ತಿವೆ ಎಂದು ಕೊಚ್ಚಿಯ ಸೆಂಟ್ರಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫಿಶರೀಸ್ ಟೆಕ್ನಾಲಜಿ ವರದಿ ನೀಡಿದೆ. ಕೇರಳದಲ್ಲಿ ಸುಮಾರು 222 ಕಡಲು ಮೀನುಗಾರಿಕೆ ವಸಾಹತುಗಳಿವೆ, 113 ಒಳನಾಡು ಮೀನುಗಾರಿಕೆ ಹಳ್ಳಿಗಳಿವೆ..! ಕೇರಳವೊಂದರಿಂದಲೇ ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್‌ ಪ್ರಮಾಣ ಎಷ್ಟು ಎಂಬುದನ್ನ ಊಹಿಸಿದರೆ ಆತಂಕವಾಗುತ್ತೆ. ಇವೆಲ್ಲಾ ಸೂಕ್ಷ್ಮ ಹಾಗೂ ಗಹನವಾದ ಸಮಸ್ಯೆಗಳು, ಕೇವಲ ಮೀನುಗಾರರನ್ನ ಹೊಣೆಯಾಗಿಸಿಬಿಡುವ ಬದಲು ಸರ್ಕಾರಗಳೂ ಜಾಗೃತಗೊಳ್ಳಬೇಕಿತ್ತು.

ದೇಶದ ಒಟ್ಟು ಕಡಲಿನ ಕಿನಾರೆಯಲ್ಲಿ ಸಂಗ್ರಹಿಸಿದ ತ್ಯಾಜ್ಯಗಳಲ್ಲಿ 15,360 ವಿವಿಧ ಬಗೆಯ ವಸ್ತುಗಳನ್ನ ವರ್ಗೀಕರಣ ಮಾಡಲಾಗಿದೆ, ಇದರಲ್ಲಿ ಪ್ಲಾಸ್ಟಿಕ್‌ ಪ್ರಮಾಣವೇ ಹೆಚ್ಚಿದೆ. ಈ ಗಾತ್ರದಲ್ಲಿ ಮೀನುಗಾರರಿಂದ ಕಡಲಿಗೆ ಸೇರಿರುವ ಪ್ಲಾಸ್ಟಿಕ್‌ ತ್ಯಾಜ್ಯಗಳ ಪ್ರಮಾಣ ಶೇ.೩೬ರಷ್ಟು ಹಾಗೂ ತೂಕದ ಲೆಕ್ಕಾಚಾರದಲ್ಲಿ ಈ ಪ್ರಮಾಣ ಶೇ.39ರಷ್ಟು ಇದೆ. ಇದರಲ್ಲಿ ಬಲೆ ಹಾಗೂ ಹಗ್ಗಗಳೇ ತುಂಬಿಕೊಂಡಿರುತ್ತವೆ. ತಿಂಗಳಲ್ಲಿ ಇಪ್ಪತ್ತು ದಿನ ಮೀನುಗಾರರು ಕಡಲಲ್ಲಿರುತ್ತಾರೆ. ಕೊಚ್ಚಿ ಮರೈನ್‌ ಫಿಶರೀಸ್‌ ಸಂಶೋಧನಾ ಸಂಸ್ಥೆಯ ಡೇನಿಯಲ್‌ ಹೇಳುವಂತೆ ಮಳೆಗಾಲದಲ್ಲಿ ಅಲೆಗಳ ಎತ್ತರ ಹೆಚ್ಚಿರುತ್ತೆ, ಕಡಲಿನ ಎಲ್ಲಾ ಅವಶೇಷಗಳು ಅಂಚಿಗೆ ಬರುತ್ತವೆ, ಮಳೆಗಾಲ ಕಡಿಮೆಯಾಗುತ್ತಿದ್ದಂತೆ ಭಗ್ನಾವಶೇಷದ ಸಾಲುಗಳನ್ನ ನಾವು ಕಾಣಬಹುದು. ಹೀಗೆ ನಾವು ನಮ್ಮ ಮೀನುಗಾರರ ಸಂಕಷ್ಟ ಅಂತ ಪರಿಹಾರ ಮಾಡಲು ನಿಲ್ಲುತ್ತೇವೆ, ಆದರೆ ಅವರಿಗೆ ಆಸರೆಯಾಗಿರುವ ಕಡಲು ಪರಿಸರ ಹಾಳಾಗುತ್ತಿರುವ ಬಗ್ಗೆ ಮೌನ ವಹಿಸುತ್ತಿದ್ದೇವೆ.

Tags: FishingPlasticPlastic Netಕಡಲು ಪ್ಲಾಸ್ಟಿಕ್‌ಮಯ
Previous Post

ಪ್ರವಾಹ ಪೀಡಿತ ಪ್ರದೇಶಕ್ಕೆ ಬಜೆಟ್‌ನಲ್ಲಿ ಸಿಎಂ ಕೊಟ್ಟಿದ್ದೇನು?

Next Post

ದೆಹಲಿ ಗಲಭೆ ಏಕಪಕ್ಷೀಯ ವರದಿಯ ಆರೋಪ: BBCಯ ಆಹ್ವಾನ ತಿರಸ್ಕರಿಸಿದ ಪ್ರಸಾರ ಭಾರತಿ ಮುಖ್ಯಸ್ಥ 

Related Posts

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
0

ಬೆಳಗಾವಿ: ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ...

Read moreDetails
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ದೆಹಲಿ ಗಲಭೆ ಏಕಪಕ್ಷೀಯ ವರದಿಯ ಆರೋಪ: BBCಯ ಆಹ್ವಾನ ತಿರಸ್ಕರಿಸಿದ ಪ್ರಸಾರ ಭಾರತಿ ಮುಖ್ಯಸ್ಥ 

ದೆಹಲಿ ಗಲಭೆ ಏಕಪಕ್ಷೀಯ ವರದಿಯ ಆರೋಪ: BBCಯ ಆಹ್ವಾನ ತಿರಸ್ಕರಿಸಿದ ಪ್ರಸಾರ ಭಾರತಿ ಮುಖ್ಯಸ್ಥ 

Please login to join discussion

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada