• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೆ ಆರ್ ಮಾರುಕಟ್ಟೆ ತೆರೆಯುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ

by
August 24, 2020
in ಕರ್ನಾಟಕ
0
ಕೆ ಆರ್ ಮಾರುಕಟ್ಟೆ ತೆರೆಯುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ
Share on WhatsAppShare on FacebookShare on Telegram

ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಇತರ ರೈತ ಸಂಘಟನೆಗಳ ಆಶ್ರಯದಲ್ಲಿ ಬೆಂಗಳೂರಿನ ಕೆ ಆರ್ ಮಾರುಕಟ್ಟೆ ಮುಂಬಾಗ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕರೋನಾ ಸೋಂಕಿನ ಕಾರಣ ನೀಡಿ ಇನ್ನೂ ಸೀಲ್ಡೌನ್ ಮಾಡಲಾಗಿರುವ ಕೆಆರ್ ಮಾರ್ಕೆಟ್ ಅನ್ನು ಮತ್ತೆ ತೆರೆಯಬೇಕು ಎಂಬ ಆಗ್ರಹದೊಂದಿಗೆ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ರೈತರು ಹಾಗೂ ವ್ಯಾಪರಸ್ಥರು ಪಾಲ್ಗೊಂಡಿದ್ದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೃಷ್ಣರಾಜ ಮಾರುಕಟ್ಟೆ ತೆರೆಯುವವರೆಗೂ ಇಲ್ಲಿಂದ ಕದಲುವ ಪ್ರಶ್ನೆಯೇ ಇಲ್ಲ. ಬಿಬಿಎಂಪಿ ಆಯುಕ್ತರು ಮತ್ತು ಮೇಯರ್ ಖುದ್ದಾಗಿ ಹಾಜರಾಗಿ ಇಂದೇ ಮಾರುಕಟ್ಟೆಯನ್ನು ತೆರೆದು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು. ಮಾರುಕಟ್ಟೆ ತೆರೆಯದಿದ್ದಲ್ಲಿ ಪ್ರತಿಯೊಬ್ಬರಿಗೆ ತಲಾ ಐದು ಸಾವಿರ ರೂಪಾಯಿಯಂತೆ ಪ್ರತೀ ತಿಂಗಳು ಸರ್ಕಾರ ನೀಡಬೇಕು. ಇಲ್ಲವಾದರೆ, ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಸ್ಥಳಕ್ಕಾಗಮಿಸಿದ ಬಿಬಿಎಂಪಿಯ ವಿಶೇಷ ಅಧಿಕಾರಿಗಳು ರೈತ ಮುಖಂಡರ ಮನವೊಲಿಸಲು ಪ್ರಯತ್ನಿಸಿದ್ದಾರೆ, ಆದರೆ ಅದು ಯಶಸ್ವಿಯಾಗಲಿಲ್ಲ. ತಮ್ಮ ಪಟ್ಟು ಸಡಿಲಿಸಲು ಒಪ್ಪದ ರೈತ ಮತ್ತು ವ್ಯಾಪಾರಿ ಮುಖಂಡರು, ಮಾರುಕಟ್ಟೆಯನ್ನ ತಕ್ಷಣದಿಂದ ತೆರೆಯಲು ಅವಕಾಶ ನೀಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಳಿಕ, ರೈತರ ಮನವೊಲಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳು ಪ್ರಯತ್ನಿಸಿದ್ದಾರೆ, ಅದು ಕೂಡಾ ಸಫಲವಾಗಲಿಲ್ಲ. ಪೊಲೀಸರು ಬಂಧಿಸುವುದಾದರೆ ಬಂಧಿಸಲಿ ಮಾರ್ಕೆಟ್ ತೆರೆಯುವವರೆಗೂ ನಾವು ಜೈಲಿನಲ್ಲಿ ಇರಲು ಸಿದ್ದ ಎಂದು ರೈತ ಮುಖಂಡರು ಒಕ್ಕೊರಳಿನಿಂದ ಹೇಳಿದ್ಗಾರೆ.

ಬಿಬಿಎಂಪಿ ಆಯುಕ್ತರು ರೈತ ಮುಖಂಡರನ್ನು ಭೇಟಿಯಾಗಲು ಒಪ್ಪಿದ ಕಾರಣಕ್ಕೆ, ಸುಮಾರು ಹತ್ತು ಜನ ರೈತ ಮತ್ತು ವ್ಯಾಪಾರಸ್ಥರ ಸಂಘಗಳ ಪ್ರತಿನಿಧಿಗಳು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರನ್ನು ಭೇಟಿಯಾಗಲು ಪೊಲೀಸ್ ವಾಹನಗಳ ಮೂಲಕ ಹೊರಟಿದ್ದಾರೆ. ಸಭೆಯ ನಂತರ ಪ್ರತಿಧ್ವನಿಗೆ ಮಾಹಿತಿ ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಸೆಪ್ಟೆಂಬರ್ ಒಂದನೇ ತಾರೀಕಿನ ವರೆಗೆ ಬಿಬಿಎಂಪಿಯವರು ಸಮಯ ಕೇಳಿದ್ದಾರೆ. ಸ್ಯಾನಿಟೈಸೇಷನ್, ಮಾರ್ಷಲ್ಗಳ ನಿಯೋಜನೆ ಮಾಡಲು ಕಾಲಾವಕಾಶ ಕೇಳಿದ್ದಾರೆ. ನಾವು ಕೂಡಾ ಒಪ್ಪಿಕೊಂಡಿದ್ದೇವೆ. ಒಂದು ವೇಳೆ ಒಂದನೇ ತಾರೀಕಿನಂದು ಕೆ ಆರ್ ಮಾರ್ಕೆಟ್ ತೆರೆಯದಿದ್ದಲ್ಲಿ, ಎರಡನೇ ತಾರೀಕು ಬೆಳಿಗ್ಗೆ ನಾವು ಖುದ್ದಾಗಿ ಹೋಗಿ ಮಾರ್ಕೆಟ್ ತೆರೆಯುವ ಎಚ್ಚರಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಸಂಪೂರ್ಣ ಬೆಂಗಳೂರು ಸೀಲ್‌ಡೌನ್ ಮತ್ತು ಲಾಕ್‌ಡೌನ್‌ನಿಂದ ಹೊರ ಬಂದಿದ್ದರೂ, ಇನ್ನೂ ಅದೇ ಕೂಪದಲ್ಲಿ ನರಳುತ್ತಿರುವ ಕೆ ಆರ್ ಮಾರುಕಟ್ಟೆ ತೆರೆಯುತ್ತದೆಯೋ ಇಲ್ಲವೋ ಎಂಬುದಕ್ಕೆ ಸೆಪ್ಟೆಂಬರ್ ಒಂದರ ವರೆಗೆ ಕಾಯಬೇಕಾಗಿದೆ.

Tags: ಕಲಾಸಿಪಾಳ್ಯಕೃಷ್ಣ ರಾಜೇಂದ್ರ ಮಾರುಕಟ್ಟೆಕೆ ಆರ್‌ ಮಾರುಕಟ್ಟೆರೈತ ಪ್ರತಿಭಟನೆಲಾಕ್‌ಡೌನ್‌
Previous Post

20 ಸಾವಿರ ವಲಸೆ ಕಾರ್ಮಿಕರಿಗೆ ಉದ್ಯೋಗದೊಂದಿಗೆ ವಸತಿ ನೀಡಿದ ಸೋನು ಸೂದ್

Next Post

ಲೋಕಸಭಾ ಚುನಾವಣೆಗೆ ಮುನ್ನ ಮತಯಂತ್ರ ತಪಾಸಣೆಯಲ್ಲೇ ಗಂಭೀರ ದೋಷ!

Related Posts

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
0

ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಲಭ್ಯವಿದ್ದ ಜಲಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಪುನರಜ್ಜೀವಗೊಳಿಸುವ ಮೂಲಕ ನೀರಿನ ಕೊರತೆಯನ್ನು ನೀಗಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆಯಲ್ಲದೆ, ಆರ್.ಒ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ವಿಶೇಷ...

Read moreDetails

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025
Next Post
ಲೋಕಸಭಾ ಚುನಾವಣೆಗೆ ಮುನ್ನ ಮತಯಂತ್ರ ತಪಾಸಣೆಯಲ್ಲೇ ಗಂಭೀರ ದೋಷ!

ಲೋಕಸಭಾ ಚುನಾವಣೆಗೆ ಮುನ್ನ ಮತಯಂತ್ರ ತಪಾಸಣೆಯಲ್ಲೇ ಗಂಭೀರ ದೋಷ!

Please login to join discussion

Recent News

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada