• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಜನತಾ ಮೈತ್ರಿ ಮೇಲುಗೈ; ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

by
December 25, 2020
in ದೇಶ
0
ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಜನತಾ ಮೈತ್ರಿ ಮೇಲುಗೈ; ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ
Share on WhatsAppShare on FacebookShare on Telegram

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಪರಿಚ್ಛೇಧ 370 ಮತ್ತು 35(ಎ) ರದ್ದುಗೊಳಿಸಿ ಆದೇಶಿತ್ತು. ಈ ಕಾರಣದಿಂದ ಜಮ್ಮು-ಕಾಶ್ಮಿರ ರಾಜ್ಯ ಕೇಂದ್ರದ ಅಧೀನಕ್ಕೆ ಒಳಪಡಬೇಕಾಯ್ತು. ಬಳಿಕ ಕೇಂದ್ರ ಸರ್ಕಾರವೇ ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಲಡಾಕ್ ಅನ್ನು ಜಮ್ಮು-ಕಾಶ್ಮೀರದಿಂದ ಪ್ರತ್ಯೇಕಗೊಳಿಸಿತು. ಜಮ್ಮು-ಕಾಶ್ಮೀರವೂ ಕೂಡ ದಿಲ್ಲಿಯಂತೆಯೇ ಕೇಂದ್ರಾಡಳಿತ ಪ್ರದೇಶವಾದವು. ಹೀಗಾಗಿ 370ನೇ ವಿಧಿ ರದ್ದು ಬಳಿಕ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಚುನಾವಣೆ ನಡೆದರೂ ಅದು ಜನತಾ ಅಭಿಪ್ರಾಯ ಸಂಗ್ರಹಣೆ ಎಂದೇ ಪರಿಗಣಿಸಲಾಗುತ್ತಿತ್ತು.

ADVERTISEMENT

ಹೀಗಿರುವಾಗಲೇ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಸಮಿತಿ (DDC) ಚುನಾವಣೆ ನಡೆಯಿತ್ತು. ಇದೀಗ ಈ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನ್ಯಾಷನಲ್ ಕಾನ್ಫೆರೆನ್ಸ್ ನೇತೃತ್ವದ ಗುಪ್ಕರ್ ಮೈತ್ರಿಕೂಟ ಸ್ಪಷ್ಟ ಮೇಲುಗೈ ಸಾಧಿಸಿದೆ. ಒಟ್ಟು 280 ಡಿಡಿಸಿ ಸ್ಥಾನಗಳ ಪೈಕಿ ಗುಪ್ಕರ್ ಮೈತ್ರಿಕೂಟದ ಪಕ್ಷಗಳು 112 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. 280 ಸ್ಥಾನಗಳ ಪೈಕಿ ಬಿಜೆಪಿಯೊಂದೇ 74 ಸ್ಥಾನಗಳನ್ನ ಜಯಿಸಿ ಮೊದಲನೇ ಸ್ಥಾನದಲ್ಲಿದ್ದರೇ, ಜಮ್ಮುಕಾಶ್ಮೀರ ನ್ಯಾಷನಲ್ ಕಾನ್ಫೆರೆನ್ಸ್ ಪಕ್ಷ 67 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಗುಪ್ಕರ್ ಮೈತ್ರಿಕೂಟದ ಭಾಗವಾಗಿರುವ ಪಿಡಿಪಿ 27 ಸ್ಥಾನಗಳನ್ನ ಗೆದ್ದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು, ಸ್ವತಂತ್ರ ಅಭ್ಯರ್ಥಿಗಳು 49 ಸ್ಥಾನಗಳನ್ನು ಗೆಲ್ಲುವ ಮೂಲಕ ಯಾವುದೇ ಪಕ್ಷವಾದರೂ ಅಧಿಕಾರ ಹಿಡಿಯಲು ಇವರ ಸಹಾಯ ಕೇಳುವ ಪರಿಸ್ಥಿತಿ ನಿರ್ಮಿಸಿದ್ದಾರೆ. ಮೆಹಬೂಬಾ ಮುಫ್ತಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 27 ಸ್ಥಾನ ಗಳಿಸಿದೆ. ಇನ್ನೊಂದೆಡೆ ಕಾಂಗ್ರೆಸ್ 26 ಸ್ಥಾನ ಗೆದ್ದರೆ, ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷಕ್ಕೆ 12 ಸ್ಥಾನಗಳು ಸಿಕ್ಕಿವೆ. ಸಿಪಿಐ(ಎಂ) 6 ಸ್ಥಾನ ಗೆದ್ದಿದೆ. ಪೀಪಲ್ಸ್ ಕಾನ್ಫರೆನ್ಸ್ 5 ಸ್ಥಾನ, ಜೆಕೆಪಿಎಂಗೆ 3 ಸ್ಥಾನ, ನ್ಯಾಷನಲ್ ಪ್ಯಾಂಥರ್ಸ್ ಪಕ್ಷಕ್ಕೆ 2 ಸ್ಥಾನ, ಪಿಡಿಎಫ್ ಮತ್ತು ಬಿಎಸ್‌ಪಿಗೆ ತಲಾ ಒಂದು ಸ್ಥಾನ ಸಿಕ್ಕಿದೆ.

ಬಿಜೆಪಿ ಜಮ್ಮು ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ತಲಾ 11, ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ತಲಾ 13 ಸ್ಥಾನಗಳನ್ನು ಗೆದ್ದಿದೆ. ರಿಯಾಸಿಯಲ್ಲಿ ಬಿಜೆಪಿ 7 ಸ್ಥಾನಗಳನ್ನು, ದೋಡಾದಲ್ಲಿ 8 ಸ್ಥಾನಗಳನ್ನು ಗಳಿಸಿತು. ಸ್ವತಂತ್ರರು 8 ಸ್ಥಾನಗಳಲ್ಲಿ ಬಹುಮತ ಪಡೆದ ಏಕೈಕ ಜಿಲ್ಲೆ ಪೂಂಚ್. ರಜೌರಿ ಮತ್ತು ರಾಂಬನ್ ಜಿಲ್ಲೆಗಳಿಂದ ಬಿಜೆಪಿಗೆ ತಲಾ ಮೂರು ಸ್ಥಾನಗಳು ದೊರೆತಿವೆ.

ಜಮ್ಮು ವಲಯದಲ್ಲಿ ಅಂದರೆ ಉಧಂಪುರ್, ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಪಡೆದಿದೆ. ಕಾಶ್ಮೀರದಲ್ಲೂ ಬಿಜೆಪಿ ತಕ್ಕ ಮಟ್ಟಿಗೆ ಪೈಪೋಟಿ ನೀಡಿದೆ. ಗುಪ್ಕರ್ ಜನತಾ ಮೈತ್ರಿಕೂಟ ಕಾಶ್ಮೀರದ 9 ಡಿಡಿಸಿಗಳನ್ನ ಜಯಿಸಿದೆ. ಒಟ್ಟಾರೆ 49 ಸ್ಥಾನಗಳನ್ನ ಗೆದ್ದಿರುವ ಪಕ್ಷೇತರರು 5 ಅತಂತ್ರ ಡಿಡಿಸಿಗಳಲ್ಲಿ ಕಿಂಗ್ ಮೇಕರ್ಸ್ ಆಗಲಿದ್ದಾರೆ.

ಗುಪ್ಕರ್ ಮೈತ್ರಿಕೂಟ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಈ ಫಲಿತಾಂಶವನ್ನ ಸ್ವಾಗತಿಸಿವೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಸಂದ ಜಯ ಎಂದು ಬಣ್ಣಿಸಿವೆ. ಈ ಫಲಿತಾಂಶವು ಕೇಂದ್ರದ 370ನೇ ವಿಧಿ ರದ್ದತಿ ಕ್ರಮದ ವಿರುದ್ಧವಾಗಿ ಬಂದ ಜನತಾ ತೀರ್ಪು ಎಂದು ಜನತಾ ಮೈತ್ರಿಕೂಟ ಅಭಿಪ್ರಾಯಪಟ್ಟಿದೆ. ಕಾಂಗ್ರೆಸ್ ಕೂಡ ಇದೇ ಅನಿಸಿಕೆ ವ್ಯಕ್ತಪಡಿಸಿದೆ.

ಜಮ್ಮು-ಕಾಶ್ಮೀರದ ಜನರು ಗುಪ್ಕರ್ ಮೈತ್ರಿಗೆ ಜನ ಬೆಂಬಲ ನೀಡಿದ್ದಾರೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಕೇಂದ್ರ ಸರ್ಕಾರದ ತಮಗೆ ನಿರಂತರ ತೊಂದರೆ ನೀಡುತ್ತಿರುವಾಗ ಜನ ತಮಗೆ ಮತ ಹಾಕಿರುವುದು ಬಲ ತುಂಬಿದಂತಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ತಿಳಿಸಿದ್ದಾರೆ.

ಫಲಿತಾಂಶ ಘೋಷಿತ ಸ್ಥಾನಗಳು: 276
ಬಿಜೆಪಿ: 74
ನ್ಯಾಷನಲ್ ಕಾನ್ಫೆರೆನ್ಸ್: 67
ಪಿಡಿಪಿ: 27
ಕಾಂಗ್ರೆಸ್: 26
ಅಪ್ನಿ ಪಾರ್ಟಿ: 12
ಜೆಕೆಪಿಸಿ: 8
ಸಿಪಿಐ(ಎಂ): 5
ಜೆಕೆಪಿಎಂ: 3
ಪಿಡಿಎಫ್ 2
ಜೆಕೆಎನ್ಪಿಪಿ: 2
ಬಿಎಸ್ಪಿ: 1
ಪಕ್ಷೇತರರು: 49

Tags: ಕಥುವಾಜನತಾ ಮೈತ್ರಿಜಮ್ಮು ಕಾಶ್ಮೀರಬಿಜೆಪಿ
Previous Post

ತುರ್ತು ನಿರ್ವಹಣೆ ಕಾಮಗಾರಿ ಹಿನ್ನಲೆ: ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯ

Next Post

ರಾತ್ರಿ ಕರ್ಫ್ಯೂ: ಸುಧಾಕರ್ ಗೆ ಡಿ.ಕೆ ಶಿವಕುಮಾರ್ ತರಾಟೆ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ರಾತ್ರಿ ಕರ್ಫ್ಯೂ: ಸುಧಾಕರ್ ಗೆ ಡಿ.ಕೆ ಶಿವಕುಮಾರ್ ತರಾಟೆ

ರಾತ್ರಿ ಕರ್ಫ್ಯೂ: ಸುಧಾಕರ್ ಗೆ ಡಿ.ಕೆ ಶಿವಕುಮಾರ್ ತರಾಟೆ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada