• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾಲತಾಣದ ನಕಲಿ ಸುದ್ದಿ, ಪ್ರಚೋದನಾತ್ಮಕ ಸಂದೇಶಗಳಿಗೆ ಕಡಿವಾಣ ಹಾಕಲು ‘ಕೇಂದ್ರ’ ನಿರಾಸಕ್ತಿ!

by
March 15, 2020
in ದೇಶ
0
ಜಾಲತಾಣದ ನಕಲಿ ಸುದ್ದಿ
Share on WhatsAppShare on FacebookShare on Telegram

ಸಾಮಾಜಿಕ ಮಾಧ್ಯಮ ಅನ್ನೋದು ಅತ್ಯಂತ ಕ್ಷಿಪ್ರ ಗತಿಯಲ್ಲಿ ಬೆಳೆದು ನಿಂತಿರುವ ಮಾಧ್ಯಮ. ಸಾಮಾಜಿಕ ಬದ್ಧತೆ ಕಡಿಮೆ ಇದ್ದರೂ ಅದನ್ನೇ ನಂಬಿ ಬಿಡುವಷ್ಟು ಜನ ಮರುಳಾಗಿದ್ದಾರೆ. ಲೋಕಸಭೆ, ರಾಜ್ಯಸಭೆಗಳಲ್ಲೂ ಇದರ ಬಗ್ಗೆ ಈ ಹಿಂದೆಯೂ ಹಲವು ಗಂಭೀರ ಚರ್ಚೆಗಳು ನಡೆದಿದ್ದಾವೆ. ಅದಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ನಕಲಿ ಸುದ್ದಿಗಳನ್ನ ತಡೆಗಟ್ಟುವುದು ಹೇಗೆ ಅನ್ನುವುದನ್ನು ತಿಳಿಯದೇ ಇಂಟರ್‌ನೆಟ್ ಬಂದ್ ಮಾಡುವ ಅನಿವಾರ್ಯತೆಗೂ ಸರ್ಕಾರ ಬಂದು ನಿಂತಿದೆ. ದೇಶ ಮಾಹಿತಿ ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರಿದರೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ನಕಲಿ ಹಾಗೂ ಪ್ರಚೋದನಾತ್ಮಕ ಸುದ್ದಿಗಳನ್ನ, ವೀಡಿಯೋಗಳನ್ನ ತಡೆಗಟ್ಟಲು ಸಾಧ್ಯವಾಗಿಲ್ಲ ಅನ್ನೋದು ಸಾಬೀತಾಗುತ್ತಲೇ ಬಂದಿದೆ. ಪರಿಣಾಮ ದೆಹಲಿ ಗಲಭೆಯ ಹಿಂದೆ ಕೆಲಸ ಮಾಡಿದ್ದ ಇದೇ ಸಾಮಾಜಿಕ ಜಾಲತಾಣದ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಅನಿವಾರ್ಯವಾಗಿ ಮೊಬೈಲ್ ಇಂಟರ್‌ನೆಟ್ ಸ್ಥಗಿತಗೊಳಿಸುವ ಮೂಲಕ ಸರ್ಕಾರ ಜಾಲತಾಣದ ಪ್ರಸಾರವಾಗುವ ಪ್ರಚೋದನಾತ್ಮಕ ಸಂದೇಶ ಹಾಗೂ ನಕಲಿ ಸುದ್ದಿಗಳ ಮೇಲೆ ಕಡಿವಾಣ ಹಾಕಲು ಮುಂದಾಗುತ್ತಿದೆ.

ADVERTISEMENT

ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಸುಮಾರು ಆರು ತಿಂಗಳ ಕಾಲ ಆ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಸಿಎಎ ವಿರೋದಿ ಪ್ರತಿಭಟನೆ ಸಂದರ್ಭ ಅಸ್ಸಾಂ, ಮೇಘಾಲಯ, ದೆಹಲಿ, ಕರ್ನಾಟಕ ಮುಂತಾದ ಕಡೆಗಳಲ್ಲೂ ಮೊಬೈಲ್ ಇಂಟರ್‌ನೆಟ್ ಮೇಲೆ ಕತ್ತರಿ ಬಿದ್ದಿತ್ತು. ಆದರೆ ಕೇಂದ್ರ ಸರಕಾರಕ್ಕೆ ಇದುವರೆಗೂ ಸಾಮಾಜಿಕ ಜಾಲತಾಣದಿಂದಾಗುವ ಹಾನಿಯ ಬಗ್ಗೆ ತಡೆಗಟ್ಟಲು ಸಾಧ್ಯವಾಗಿಲ್ಲ ಅನ್ನುವುದನ್ನು ಒಪ್ಪಿಕೊಳ್ಳಬೇಕಾದ ವಿಚಾರ.

ಕಳೆದ ತಿಂಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಕುರಿತು ಈಗಾಗಲೆ ಸಂಸತ್ ಜಂಟಿ ಅಧಿವೇಶನದಲ್ಲಿ ಸಾಕಷ್ಟು ಚರ್ಚೆ ನಡೆದಿವೆ. ಅದರಲ್ಲೂ ಜಾಲತಾಣ ನಿಯಂತ್ರಣದ ಬಗ್ಗೆಯೂ ಹತ್ತು ಹಲವು ಚರ್ಚೆಗಳು ನಡೆದವು. ಜಾಲತಾಣದಲ್ಲಿ ಪ್ರಸಾರವಾದ ನಕಲಿ ಸುದ್ದಿಗಳ ಬಗ್ಗೆಯೂ ಗಂಭೀರ ವಾದಗಳು ನಡೆದವು. ಅಂತೆಯೆ ರಾಜ್ಯಸಭೆ ಸದಸ್ಯ ದಿಗ್ವಜಯ್ ಸಿಂಗ್ ಜಾಲತಾಣದಲ್ಲಿ ಪ್ರಸಾರವಾದ ನಕಲಿ ಸುದ್ದಿ ಹಾಗೂ ಪ್ರಚೋದನಾತ್ಮಕ ಸಂದೇಶಗಳ ಬಗ್ಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಮಾಹಿತಿ ಕೇಳಿದ್ದಾರೆ.

ಆದರೆ ಈ ರೀತಿಯಾಗಿ ಪ್ರಚೋದನಾತ್ಮಕ ಸಂದೇಶವಿರಲಿ ಇಲ್ಲವೇ ನಕಲಿ ಸುದ್ದಿಗಳಿರಲಿ ಅದನ್ನ ಪ್ರಸಾರ ಮಾಡುವ ಖಾತೆಗಳ ಬಗ್ಗೆ ತನಿಖೆ ಕೈಗೊಳ್ಳುವಂತೆ ಇದುವರೆಗೂ ಯಾವುದೇ ಆದೇಶ ನೀಡಲಾಗಿಲ್ಲ ಅನ್ನೋದನ್ನ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ಸಂಜಯ್ ಧೋತ್ರಿ ಲಿಖಿತ ರೂಪದಲ್ಲಿಯೇ ಮಾಹಿತಿ ನಿಡಿದ್ದಾರೆ. ಅಲ್ಲದೇ ಸೈಬರ್ ಅಪರಾಧ ಅನ್ನೋದು ಜಾಗತಿಕ ವಿಚಾರ ಅನ್ನೋದನ್ನು ಉಲ್ಲೇಖಿಸಿದ್ದಾರೆ. ಅಲ್ಲದೇ ಈ ಹಿಂದೆ ಜಾಲತಾಣದಿಂದಾದ ಗುಂಪು ಥಳಿತಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಐಟಿ ಕಾಯ್ದೆ ಉಲ್ಲೇಖಿಸಿ ಅದರಂತೆ ಸು-ಮೋಟೋ ಕೇಸು ದಾಖಲಿಸುವ ಅವಕಾಶದ ಬಗ್ಗೆ ತಿಳಿಸಿದ್ದಾರೆ.

ಇನ್ನು ಸೈಬರ್ ಅಪರಾಧ ತಡಗಟ್ಟುವುದಕ್ಕೆ ಮಾಹಿತಿ ತಂತ್ರಜ್ಞಾನ ಇಲಾಖೆ ಜೊತೆ ಕೇಂದ್ರ ಗೃಹ ಸಚಿವಾಲಯವೂ ಕೈ ಜೋಡಿಸುತ್ತಿದೆ. ಆದರೂ ಇದುವರೆಗೂ ಕ್ಷಣಮಾತ್ರದಲ್ಲಿ ಪ್ರಸಾರವಾಗುವ ನಕಲಿ ಸುದ್ದಿಗಳನ್ನು, ವಿಶೇಷವಾಗಿ ಪ್ರಚೋದನಾತ್ಮಕ ಬರಹಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಅಲ್ಲದೇ ಒಂದೊಮ್ಮೆ ಸರಕಾರದ ಪ್ರತಿನಿಧಿಗಳೇ ಇದನ್ನ ನಂಬಿ ಭಾಷಣ ಬಿಗಿಯುವ ಪರಿಸ್ಥಿತಿಯೂ ಇತ್ತೀಚಿನ ದಿನಗಳಲ್ಲಿ ನಿರ್ಮಾಣವಾಗಿದೆ. ಜನ ಎಷ್ಟೇ ಮುಂದುವರಿದರೂ, ಈ ಜಾಲತಾಣಗಳಲ್ಲಿ ಬರೋ ಸುದ್ದಿಗೆ ಸಿಲುಕಿ ಸತ್ಯ ಯಾವುದು? ಸುಳ್ಳು ಯಾವುದು? ಅನ್ನೋ ಗೊಂದಲಕ್ಕೊಳಗಾಗುತ್ತಾರೆ. ಆದ್ದರಿಂದ ಜಾಲತಾಣದ ಮೇಲಿನ ನಿಯಂತ್ರಣಕ್ಕೆ ಕೇಂದ್ರ ಸೆರಕಾರ ಮುಂದಾಗಬೇಕಿದೆ. ಜಾಲತಾಣಗಳಲ್ಲಿ ಗಲಭೆ ಪ್ರಚೋದಿಸುವವರಿಗೆ ತಕ್ಕ ಶಾಸ್ತಿ ಆಗಿರೋದು ಇದುವರೆಗೂ ಕಡಿಮೆ. ಪರಿಣಾಮ ಜಾಲತಾಣದ ದುರ್ಬಳಕೆ ಮಾಡೋರಿಗೆ ಸರಕಾರದ ಕ್ರಮ ಬಗ್ಗೆಯೂ ಭಯ ಇಲ್ಲದಂತಾಗಿದೆ.

ಈ ಮಧ್ಯೆ ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ಸಂಜಯ್ ಧೋತ್ರಿ ನೀಡಿದ ಲಿಖಿತ ಉತ್ತರದಲ್ಲಿಯೇ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಇನ್‌ಸ್ಟಾಗ್ರಾಮ್, ಟ್ವಿಟ್ಟರ್‌ಗಳಲ್ಲಿ ಪ್ರಸಾರವಾಗುವ ನಕಲಿ ಸುದ್ದಿ, ಪ್ರಚೋದನಾತ್ಮ ಸುದ್ದಿ ಹಬ್ಬಿದವರ ವಿರುದ್ದ ಇದುವರೆಗೂ ತನಿಖೆಗೆ ಆದೇಶಿಸಿಲ್ಲ ಅಂದಿರೋದು ನಿಜಕ್ಕೂ ಆಘಾತಕಾರಿ ಮತ್ತು ಅಚ್ಚರಿ ವಿಚಾರ. ಇತ್ತೀಚೆಗೆ ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ದಾಳಿ ಹಿಂದೆಯೂ ಜಾಲತಾಣಗಳಲ್ಲಿ ಸಂಘಟಿತ ಸಂಚು ನಡೆದಿತ್ತು ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಆದರೂ ಕೇಂದ್ರ ಸರಕಾರ ಇನ್ನೂ ಈ ಕುರಿತು ಎಚ್ಚೆತ್ತುಕೊಂಡಿಲ್ಲ ಅನ್ನೋದು ಸರಕಾರದ ನಡೆಯನ್ನೂ ಸಂಶಯಿಸುವಂತೆ ಮಾಡಿದೆ.

Tags: Central GovernmentFake NewsMinister Sanjay DhotriProvocative MessagesSocial Mediaಜಾಲತಾಣನಕಲಿ ಸುದ್ದಿಪ್ರಚೋದನಾತ್ಮಕ ಸಂದೇಶ
Previous Post

ಡಿಕೆಶಿ ಕೆಪಿಸಿಸಿ ಪಟ್ಟ; ಮಂಡ್ಯ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಕಾಂಗ್ರೆಸ್ Checkmate

Next Post

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada