• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೊಂಡರೂ ನಿಲ್ಲದ ಸಾ.ರಾ ಮಹೇಶ್ ಆರೋಪ: ಸಿಂಧೂರಿ ತಿರುಗೇಟು

Any Mind by Any Mind
June 10, 2021
in ಕರ್ನಾಟಕ
0
ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೊಂಡರೂ ನಿಲ್ಲದ  ಸಾ.ರಾ ಮಹೇಶ್ ಆರೋಪ: ಸಿಂಧೂರಿ ತಿರುಗೇಟು
Share on WhatsAppShare on FacebookShare on Telegram

ADVERTISEMENT

ಮೈಸೂರಿನಲ್ಲಿ ಜಿಲ್ಲಾದಿಕಾರಿ ಆಗಿದ್ದ  ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರೂ  ಕೆ ಆರ್‌ ನಗರ ಕ್ಷೇತ್ರದ ಶಾಸಕ  ಸಾ ರಾ ಮಹೇಶ್‌ ಅವರ ಕೋಪ ಮಾತ್ರ ತಣ್ಣಗಾಗಿಲ್ಲ. ಬುಧವಾರವೂ ಕೂಡ  ಮಹೇಶ್‌ ಸಿಂಧೂರಿ ಅವರ ವಿರುದ್ದ ಆರೋಪ ಮಾಡಿದರು ಅಷ್ಟೇ ಅಲ್ಲ  ತಾವೂ ಚಿತ್ರ ನಿರ್ಮಾಣಕ್ಕೆ ಇಳಿಯುವ ಬಯಕೆ ವ್ಯಕ್ತಪಡಿಸಿದರು. ಇಂದು ಸುದ್ದಿ ಗೋಷ್ಟಿಯಲ್ಲಿ  ಮಾತನಾಡಿದ ‘ಮಹೇಶ್‌ ಅವರು  ಆಂಧ್ರ ಮೂಲದ ಐಎಎಸ್ ಅಧಿಕಾರಿಯೊಬ್ಬರ ಜೀವನದ ಕುರಿತು ಚಲನಚಿತ್ರ ನಿರ್ಮಾಣಕ್ಕೆ ಸಿದ್ಧತೆ ನಡೆದಿರುವುದು ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಬಡ ರೈತನ ಮಗನೊಬ್ಬ ಐಎಎಸ್ ಆದ ಕಥೆಯನ್ನಾಧರಿಸಿ ನಾನೂ ಒಂದು ಸಿನಿಮಾ ಮಾಡುತ್ತೇನೆ’ ಎಂದು  , ಹೆಸರು ಹೇಳದೆಯೇ ರೋಹಿಣಿ ಸಿಂಧೂರಿ ಅವರನ್ನು ಕುಟುಕಿದರು.  ಅವರ ಬಗ್ಗೆ ನಿರ್ಮಾಣ ಆಗುತ್ತಿರುವ ಸಿನಿಮಾ ಬಿಡುಗಡೆ ಆಗಲಿ. ಆ ಬಳಿಕ ನಾವೂ ನಿರ್ಮಾಣಕ್ಕೆ ಇಳಿಯುವೆವು. ಬಡ ರೈತನ ಮಗನೊಬ್ಬ ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಾದದ್ದು, ಅವರ ಜೀವನ ಹೇಗೆ ದುರಂತ ಅಂತ್ಯ ಕಂಡಿತು ಎಂಬ ಕುರಿತು ಸಿಬಿಐ ವರದಿಯನ್ನಾಧರಿಸಿ ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದರು.

ಭೂ ಹಗರಣ: ಯಾರೆಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಷಾಮೀಲಾಗಿದ್ದಾರೆ? ತನಿಖೆಯಿಂದ ಹೊರಬರಬೇಕು -ಸಿದ್ದರಾಮಯ್ಯ

  ಈ ಹಿಂದಿನ ಜಿಲ್ಲಾಧಿಕಾರಿಗಳು ಇದ್ದ ಅವಧಿಯಲ್ಲಿ ಅವರ ನಿವಾಸದ ವಿದ್ಯುತ್ ಬಿಲ್ ಗರಿಷ್ಠ ಎಂದರೆ ತಿಂಗಳಿಗೆ ₹ 7 ರಿಂದ 8 ಸಾವಿರದವರೆಗೆ ಬರುತ್ತಿತ್ತು. ಆದರೆ ಇವರು ಬಂದ ಬಳಿಕ ತಿಂಗಳಿಗೆ ₹ 50 ಸಾವಿರಕ್ಕೂ ಅಧಿಕ ವಿದ್ಯುತ್ ಬಿಲ್ ಬಂದಿದೆ ಎಂದು ಆರೋಪಿಸಿದರು. ಜಿಲ್ಲಾಧಿಕಾರಿಗಳ ನಿವಾಸಕ್ಕೆ ಒಟ್ಟು ಮೂರು ವಿದ್ಯುತ್ ಮೀಟರ್ಗಳು ಇವೆ. ಅವುಗಳಲ್ಲಿ ಎರಡು ಮೀಟರ್ಗಳಲ್ಲಿ ಮೇ ತಿಂಗಳಲ್ಲಿ ₹ 42,371 ಹಾಗೂ ಜೂನ್ ತಿಂಗಳಲ್ಲಿ ₹ 36,406 ಬಿಲ್ಗಳು ಬಂದಿವೆ. ಇನ್ನೊಂದು ಮೀಟರ್ಗೆ ಬಂದಿರುವ ಬಿಲ್ಅನ್ನೂ ಸೇರಿಸಿದರೆ ತಿಂಗಳ ಒಟ್ಟು ಬಿಲ್ ₹ 50 ಸಾವಿರ ದಾಟುತ್ತದೆ. ಜಿಮ್, ಈಜುಕೊಳ ನಿರ್ಮಾಣ ಆಗಿರುವುದೇ ಇದಕ್ಕೆ ಕಾರಣ ಎಂದರು. ‘ಮೈಸೂರಿನ ಜನರಿಗೆ ಬೇಸಿಗೆಯಲ್ಲಿ ಕುಡಿಯಲು ನೀರು ಇರುವುದಿಲ್ಲ. ಆದರೆ ಜಿಲ್ಲಾಧಿಕಾರಿ ನಿವಾಸದಲ್ಲಿ ನಿರ್ಮಾಣವಾಗಿರುವ ಈಜುಕೊಳಕ್ಕೆ ಕುಡಿಯುವ ನೀರು ಬಳಸಲಾಗಿದೆ. ಅವರನ್ನು ವರ್ಗಾವಣೆ ಮಾಡುವ ಬದಲು ಅಮಾನತು ಮಾಡಬೇಕಿತ್ತು’ ಎಂದು ಕಿಡಿಕಾರಿದರು.‘ಮೈಸೂರಿನಿಂದ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ವಿರುದ್ಧ ನಾನು ಮಾಡಿರುವ 10 ಆರೋಪಗಳ ಕುರಿತು ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಎಲ್ಲ ದಾಖಲೆಗಳನ್ನೂ ಒದಗಿಸಿದ್ದೇನೆ. ಇವುಗಳ ಬಗ್ಗೆ ಸಮಗ್ರ ತನಿಖೆ ಆಗಲಿ. ಇದೇ ವಿಷಯಗಳನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸುತ್ತೇನೆ’ ಎಂದರು.   

IAS ಅಧಿಕಾರಿಗಳ ವರ್ಗಾವಣೆಯಿಂದ ಬಯಲಿಗೆ ಬಂದ ರಿಯಲ್‌ ಎಸ್ಟೇಟ್‌ ಮಾಫಿಯಾ

ಕಳೆದ ಒಂದು ತಿಂಗಳಿನಿಂದಲೂ  ಸತತವಾಗಿ  ರೋಹಿಣಿ ಸಿಂಧೂರಿ ಅವರ ವಿರುದ್ದ ವೈಯಕ್ತಿಕ ಆರೋಪಗಳನ್ನೇ ಮಾಡುತ್ತಾ ಬಂದಿದ್ದ  ಶಾಸಕ ಸಾ ರಾ ಮಹೇಶ್‌ ಅವರ ಇದಕ್ಕೆ ರೋಹಿಣಿ ತಿರುಗೇಟು ನೀಡಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ  ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು  ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಹಾಗೂ ಸಾ.ರಾ.ಮಹೇಶ್ ಪಾಲುದಾರಿಕೆಯಲ್ಲಿ ಭೂ ಮಾಫಿಯಾ ಸಕ್ರಿಯವಾಗಿದೆ ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅವರು, ‘ಭೂ ಮಾಫಿಯಾದವರು ಸೇರಿ ನನ್ನನ್ನು ವರ್ಗಾವಣೆ ಮಾಡಿಸಿದರು. ವರ್ಗಾವಣೆಯಾದ ಮೇಲೂ ನನ್ನ ಮೇಲೆ ಮುಗಿಬೀಳುತ್ತಿದ್ದಾರೆ. ತನಿಖೆ ನಡೆಯಬಹುದು ಎಂದು ಭಯ ಪಡುತ್ತಿದ್ದಾರೆ. ಎಲ್ಲದಕ್ಕೂ ಸಾ.ರಾ.ಮಹೇಶ್ ಪ್ರಮುಖ ಪಾತ್ರಧಾರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.’ಮೈಸೂರು ನಗರದಲ್ಲಿನ ರಾಜಕಾಲುವೆ ಮೇಲೆ ಸಾ.ರಾ.ಚೌಲ್ಟ್ರಿ ನಿರ್ಮಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ಮಾಹಿತಿ ಕೇಳಿದೆ. ಆ ಕಾರಣ ನನ್ನ ಮೇಲೆ ಸಾ.ರಾ.ಮಹೇಶ್ ಮುಗಿಬಿದ್ದರು’ ಎಂದು ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

‘ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಹಾಗೂ ಸಾ.ರಾ.ಮಹೇಶ್ ಪಾಲುದಾರಿಕೆಯಲ್ಲಿ ಭೂ ಮಾಫಿಯಾ ಸಕ್ರಿಯವಾಗಿದೆ. ಕ್ರಮ ಕೈಗೊಳ್ಳುವ ಹಕ್ಕು, ಅಧಿಕಾರ ಜಿಲ್ಲಾಧಿಕಾರಿಗೆ ಇರುತ್ತದೆ. ನಾನು ರಾಜ್ಯಪಾಲರಿಗೆ ಏಕೆ ಪತ್ರ ಬರೆಯಬೇಕು?’ ಎಂದು ರೋಹಿಣಿ ಸಿಂಧೂರಿ ಪ್ರಶ್ನಿಸಿದ್ದಾರೆ.  ‘ಖಾಸಗಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸಾ.ರಾ.ಮಹೇಶ್ ಪಾಲುದಾರಿಕೆ ಹೊಂದಿದ್ದಾರೆ. ಅವರೊಂದಿಗೆ ಶಿಲ್ಪಾ ನಾಗ್ ಕೂಡ ಕೈಜೋಡಿಸಿದ್ದರು. ಹೀಗಾಗಿ, ಮೈಸೂರು ನಗರದಲ್ಲಿ ಸರ್ಕಾರಿ ಕೋವಿಡ್ ಕೇರ್ ಕೇಂದ್ರ ತೆರೆಯಲಿಲ್ಲ’ ಎಂದು ಅವರು ಹೇಳಿದ್ದಾರೆ. ‘ಎಲ್ಲರೂ ಷಡ್ಯಂತ್ರ ಮಾಡಿ ನನ್ನನ್ನು ವರ್ಗಾವಣೆ ಮಾಡಿಸಿದರು. ಸಾ.ರಾ.ಮಹೇಶ್ ನನ್ನನ್ನು ಮಾಡೆಲ್ ಎಂದು ಕರೆದು ವೈಯಕ್ತಿಕ ಟೀಕೆಗಿಳಿದರು. ಆದರೆ, ನಾನು ಮೌನವಾಗಿದ್ದೆ’ ಎಂದರು. ಒಟ್ಟಿನಲ್ಲಿ ಯಾರದು ತಪ್ಪು ಯಾರದು ಸರಿ ಎಂದು  ತಿಳಿಯಲು ಸರ್ಕಾರ ತನಿಖೆ ನಡೆಸಬೇಕಿದೆ.

Previous Post

ಏಪ್ರಿಲ್ 2020ರ ನಂತರ 3500ಕ್ಕೂ ಹೆಚ್ಚು ಮಕ್ಕಳು ಅನಾಥರಾಗಿದ್ದಾರೆ: ಎನ್‌ಸಿಪಿಸಿಆರ್

Next Post

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆಯಾ ಬಿಜೆಪಿ?

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆಯಾ ಬಿಜೆಪಿ?

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆಯಾ ಬಿಜೆಪಿ?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada