• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

by
February 5, 2020
in ದೇಶ
0
ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುನಾವಣಾ ಕಣ ರಂಗೇರಿದೆ. ಈ ಬಾರಿ ದೆಹಲಿ ಗದ್ದುಗೆಯಿಂದ ಅರವಿಂದ್ ಕೇಜ್ರಿವಾಲ್ ಕೆಳಕ್ಕಿಳಿಸಿ ಕಮಲ ಪತಾಕೆ ಹಾರಿಸಬೇಕೆಂದು ಪಣ ತೊಟ್ಟಿರುವ ಅಮಿತ್ ಸೇನೆ ಮಾತಿನ ಯುದ್ಧವನ್ನೇ ಸಾರಿದೆ. ಎಲ್ಲಾ ವರ್ಗದ ಜನರೂ ಕೇಜ್ರಿವಾಲ್ ಪರ ವಾಲಿರುವ ಅಂಶ ಸಮೀಕ್ಷೆಗಳ ಮೂಲಕ ಹೊರ ಬೀಳ್ತಿದ್ದು, ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆಯಲ್ಲೂ ಪಕ್ಷದ ಸಾಧನೆ ಹೇಳುವ ಮಟ್ಟಕ್ಕೆ ಇಲ್ಲ ಎನ್ನಲಾಗಿದೆ. ದೆಹಲಿಯಲ್ಲಿ ಬಹುತೇಕ ವಲಸಿಗರೇ ತುಂಬಿಕೊಂಡಿದ್ದು, ಯಾವುದೇ ಚುನಾವಣಾ ಅಸ್ತçದ ಮೂಲಕ ಜನರನ್ನು ಸೆಳೆಯಲು ಸಾಧ್ಯವಾಗ್ತಿಲ್ಲ. ದೆಹಲಿ ಜನರನ್ನು ಸೆಳೆಯುವ ತಂತ್ರ ಹೆಣೆಯಲು ಭಾರೀ ಕಸರತ್ತು ಮಾಡುತ್ತಿರುವ ಕೇಸರಿ ಪಡೆ ಇದೀಗ ರಾಮ ಮಂದಿರ ದಾಳ ಉರುಳಿಸಿದೆ.

ADVERTISEMENT

ದೆಹಲಿಯಲ್ಲಿ ಬಹುತೇಕ ವಲಸಿಗರೇ ತುಂಬಿಕೊಂಡಿದ್ದಾರೆ. ಜೀವನ ಸಾಗಿಸಲು ಕಷ್ಟಪಟ್ಟು ಕೆಲಸ ಮಾಡುವ ಉದ್ದೇಶದಿಂದ ನಾನಾ ರಾಜ್ಯಗಳಿಂದ ದೆಹಲಿ ಪಟ್ಟಣ ಸೇರಿದ್ದಾರೆ. ಈ ಜನರಿಗೆ ಬೇಕಿರುವುದು ರಸ್ತೆ, ನೀರು, ಸಾರಿಗೆ, ವಿದ್ಯುತ್ ಸೌಲಭ್ಯ. ಅದನ್ನು ಬಿಟ್ಟು ಬೇರೇನು ಘೋಷಣೆ ಮಾಡಿದರೂ ಜನರು ಮತ ಹಾಕುವಂತೆ ಮಾಡುವುದು ಸಾಧ್ಯವಿಲ್ಲ. ಇದೇ ಕಾರಣದಿಂದ ದಿನದಿಂದ ದಿನಕ್ಕೆ ಬಿಜೆಪಿ ಹೊಸ ಹೊಸ ದಾಳ ಉರುಳಿಸುತ್ತಿದೆ. ಇವತ್ತು ಅಮಿತ್ ಷಾ ಹಾಗು ನರೇಂದ್ರ ಮೋದಿ ರಾಮಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪಿಸುವ ಹೇಳಿಕೆಯನ್ನು ನೀಡಿದ್ದಾರೆ. ದೆಹಲಿ ಚುನಾವಣೆಗೂ ರಾಮಮಂದಿರ ಟ್ರಸ್ಟ್‍ಗೂ ಎಲ್ಲಿಂದ ಸಂಬಂಧ ಎನ್ನಬಹುದು. ಆದರೆ ದೆಹಲಿಯಲ್ಲಿರುವ ಕೆಳವರ್ಗದ ಜನರನ್ನು ಸೆಳೆಯಲು ಮುಂದಾಗಿರುವ ಅಮಿತ್ ಷಾ ಬಳಗ, 15 ಜನರ ಟ್ರಸ್ಟ್ನಲ್ಲಿ ಓರ್ವ ದಲಿತರನ್ನು ಸೇರ್ಪಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ

ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ಸಾರಿಗೆ, ಶಿಕ್ಷಣ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಬೆರಳು ತೋರಿಸದಂತೆ ಕೆಲಸ ಮಾಡಿದೆ. ಮೊದಲ ಎರಡು ವರ್ಷಗಳ ಕಾಲ ಮೋದಿಯನ್ನು ಟೀಕಿಸುತ್ತಿದ್ದ ಅರವಿಂದ್ ಕೇಜ್ರಿವಾಲ್ ದೆಹಲಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಆ ಬಳಿಕ ಜನgರಿಂದ ದೂರವಾಗುತ್ತಿರುವ ಸುಳಿವು ಕಂಡುಕೊಂಡ ಅರವಿಂದ್ ಕೇಜ್ರಿವಾಲ್, ತಾನು ಮಾತನಾಡುವುದಕ್ಕಿಂತ ಕೆಲಸ ಮಾಡುವುದು ಸೂಕ್ತವೆಂದು ಕೇವಲ ಕೆಲಸಕ್ಕಷ್ಟೇ ಆದ್ಯತೆ ನೀಡುತ್ತಾ ಸಾಗಿದರು. ಅರವಿಂದ್ ಕೇಜ್ರಿವಾಲ್ ಮಾಡಿದ ಈ ತಂತ್ರಗಾರಿಗೆ ದೆಹಲಿ ಜನರ ಮನಸ್ಸು ಸೆಳೆದಿದ್ದು, ಈ ಬಾರಿ ಕೂಡ ನರೇಂದ್ರ ಮೋದಿ ಸೇನೆಗೆ ಸೋಲಾಗುವುದು ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳದಿಂದ ಆಗಮಿಸಿರುವ ಜನರನ್ನು ಜನರನ್ನು ಸೆಳೆಯಲು ಏನೆಲ್ಲಾ ಕಸರತ್ತ ಮಾಡಬೇಕು ಅಷ್ಟನ್ನೂ ಮಾಡಿ ಆಗಿದೆ. ಇದೀಗ ಅಂತಿಮವಾಗಿ ರಾಮ ಮಂದಿರ ಟ್ರಸ್ಟ್‍ನಲ್ಲಿ ದಲಿತರಿಗೆ ಸ್ಥಾನ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಮತ್ತೊಂದು ದಾಳ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ನವೆಂಬರ್ 9 ರಂದು ಅಯೋಧ್ಯೆ ವಿವಾದದ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಮುಂದಿನ ಮೂರು ತಿಂಗಳ ಒಳಗಾಗಿ ರಾಮಮಂದಿರ ನಿರ್ಮಾಣದ ಉಸ್ತುವಾರಿಗಾಗಿ ಟ್ರಸ್ಟ್ ಸ್ಥಾಪನೆ ಮಾಡಿ, ಟ್ರಸ್ಟ್ ಮೂಲವೇ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿತ್ತು. ಇದೀಗ ದೆಹಲಿ ಚುನಾವಣೆ ಮುಗಿದ ಮರುದಿನವೇ ಸುಪ್ರೀಂಕೋರ್ಟ್ ಕೊಟ್ಟಿರುವ ಡೆಡ್‌ಲೈನ್ ಮುಕ್ತಾಯವಾಗಲಿದ್ದು, ಅಂದೇ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪನೆ ಮಾಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ. ಈ ಟ್ರಸ್ಟ್‍ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎಂದು ಹೆಸರಿಡಲಾಗುವುದು ಎಂದೂ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪನೆಯಾಗಲಿದ್ದು, ಅದರಲ್ಲಿ 15 ಮಂದಿ ಸದಸ್ಯರಿರುತ್ತಾರೆ. ಎಲ್ಲಾ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲು ಸ್ವಾತಂತ್ರ್ಯ ಇರಲಿದೆ. ಈ ಕಮಿಟಿಯಲ್ಲಿ ಓರ್ವ ದಲಿತ ಇರುತ್ತಾರೆ ಎನ್ನುವ ಮೂಲಕ ದಲಿತ ಕಾರ್ಡ್ ಪ್ಲೇ ಮಾಡಿದ್ದಾರೆ. ಬಿಜೆಪಿಯ ಚುನಾವಣಾ ರಣತಂತ್ರ ಫೆಬ್ರವರಿ 8ರಂದು ನಡೆಯುವ ಮತದಾನದಲ್ಲಿ ವರ್ಕೌಟ್ ಆಗುತ್ತಾ ಎನ್ನುವುದು ಫೆಬ್ರವರಿ 11ರ ಫಲಿತಾಂಶದಲ್ಲಿ ಗೊತ್ತಾಗಲಿದೆ.

Tags: Delhi Assembly ElectionNarendra ModiRam MandirTrustದೆಹಲಿದೆಹಲಿ ಚುನಾವಣೆಮೋದಿರಾಮ ಮಂದಿರರಾಮ ಮಂದಿರ ಟ್ರಸ್ಟ್
Previous Post

ಗೊಂದಲ ಬಗೆಹರಿದರಷ್ಟೇ 13 ಮಂದಿ, ಇಲ್ಲವಾದರೆ 10 ಮಂದಿಗೆ ಮಾತ್ರ ಸಚಿವ ಸ್ಥಾನ

Next Post

ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada