• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಯುದ್ಧಕ್ಕೂ ಮುನ್ನ ಬಿಜೆಪಿ ಶಸ್ತ್ರತ್ಯಾಗವೇ?

by
January 18, 2020
in ದೇಶ
0
ದೆಹಲಿಯಲ್ಲಿ ಯುದ್ಧಕ್ಕೂ ಮುನ್ನ ಬಿಜೆಪಿ ಶಸ್ತ್ರತ್ಯಾಗವೇ?
Share on WhatsAppShare on FacebookShare on Telegram

ದೇಶದ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಳೆದ ಬಾರಿ ಹೀನಾಯವಾಗಿ ಸೋಲನುಭವಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಮಂತ್ರಿ ಅಮಿತ್ ಶಾ ನೇತೃತ್ವದ ಬಿಜೆಪಿ ಈ ಬಾರಿ ಗೆಲುವು ಸಾಧಿಸಲಿದೆಯೇ? ಅದಕ್ಕಾಗಿ ತಯಾರಿ ನಡೆಸುತ್ತಿದೆಯೇ? ಅಥವಾ ಚುನಾವಣೆ ಪೂರ್ವ ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೇರಲಿದೆ ಎಂಬ ಭೀತಿಯಿಂದ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಲಿದೆಯೇ?

ADVERTISEMENT

ಇಂತಹದ್ದೊಂದು ಅನುಮಾನ ದಟ್ಟವಾಗತೊಡಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದರೂ ಅವರ ಅಲೆ 2015 ರಲ್ಲಿ ಕಿಂಚಿತ್ತೂ ಕಂಡುಬಂದಿರಲಿಲ್ಲ. ಹಾಗೊಂದು ವೇಳೆ ಬಂದಿದ್ದೇ ಆಗಿದ್ದರೆ ಬಿಜೆಪಿ ಆಪ್ ವಿರುದ್ಧ ಜಯಗಳಿಸಿ ಅಧಿಕಾರಕ್ಕೆ ಬರಬಹುದಾಗಿತ್ತು. ಆದರೆ, ಮೋದಿ ಅಲೆಯಾಗಲೀ ಅಥವಾ ಹವಾ ಆಗಲಿ ದೆಹಲಿಯ ಯಾವುದೇ ಮೂಲೆಯಲ್ಲೂ ಬೀಸಲೇ ಇಲ್ಲ. ಹೀಗಾಗಿ ಹೀನಾಯ ಸೋಲು ಕಂಡ ಕಮಲ ಪಾಳಯ ಕೇವಲ ಮೂರು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

ಐದು ವರ್ಷಗಳ ನಂತರ ಇದೀಗ ದೆಹಲಿ ಅಸೆಂಬ್ಲಿಗೆ ಮತ್ತೆ ಚುನಾವಣೆ ಎದುರಾಗಿದೆ. ಫೆಬ್ರವರಿ 8 ರಂದು ನಡೆಯಲಿರುವ ಚುನಾವಣೆಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಿದ್ದರೆ, ಎಂದಿನಂತೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲಿ ತಲೆಕೆಡಿಸಿಕೊಂಡಿದೆ. ಆದರೆ, ಕೇಂದ್ರದಲ್ಲಿ ಆಡಳಿತಾರೂ ಬಿಜೆಪಿ ಮಾತ್ರ ಚುನಾವಣೆ ತಾಲೀಮು ಆರಂಭಿಸಿದೆಯಾದರೂ ಮೋದಿ, ಅಮಿತ್ ಶಾ ಸೇರಿದಂತೆ ಪಕ್ಷದ ಯಾವುದೇ ಘಟಾನುಘಟಿಗಳ ಮುಖದಲ್ಲಿಯೂ ಗೆಲುವಿನ ಚೆಹರೆಯೇ ಕಂಡುಬರುತ್ತಿಲ್ಲ.

ಎಲೆಕ್ಷನ್ ಮೀಟಿಂಗ್ ಮಾಡಬೇಕು, ಅದಕ್ಕಾಗಿ ಎಲ್ಲರೂ ಒಂದೆಡೆ ಕುಳಿತು ಚುನಾವಣೆ ಬಗ್ಗೆ ಕೆಲವು ವಿಚಾರಗಳನ್ನು ಚರ್ಚಿಸುವುದನ್ನು ಬಿಟ್ಟರೆ ಇಡೀ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಕಳೆದ ಐದು ವರ್ಷಗಳಲ್ಲಿ ಕೇಜ್ರಿವಾಲ್ ಸರ್ಕಾರ ಜಾರಿಗೆ ತಂದಿರುವ ಅನೇಕ ಜನಪರ ಕಾರ್ಯಕ್ರಮಗಳ ಎದುರು ಬಿಜೆಪಿಗೆ ಜನರ ಮುಂದಿಡಲು ಯಾವುದೇ ವಿಚಾರಗಳು ಸಿಗುತ್ತಿಲ್ಲ. ಆಡಳಿತ ವಿರೋಧಿ ಎಂದು ಹೇಳಿಕೊಳ್ಳುವಂತಹ ಸರಕು ಬಿಜೆಪಿಗೆ ಸಿಗುತ್ತಿಲ್ಲ. ಇನ್ನು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಸರ್ಕಾರ ಹೊಗಳಿಕೊಳ್ಳುವಂತಹ ಅಥವಾ ಜನ ಮೆಚ್ಚುವಂತಹ ಕೆಲಸವನ್ನೇನೂ ಮಾಡಿಲ್ಲ. ಹಾಗೊಂದು ವೇಳೆ ಅದೇ CAA, NRC ಅಂತ ಜನರ ಮುಂದಿಟ್ಟರೆ ಥೂ ಛೀ ಎಂದು ಉಗಿಯುವುದು ಗ್ಯಾರಂಟಿ. ಹೀಗಾಗಿ ಬಿಜೆಪಿ ನಾಯಕರು ದೆಹಲಿ ಚುನಾವಣೆಯಲ್ಲಿ ಅಡಕತ್ತರಿಗೆ ಸಿಲುಕಿಕೊಳ್ಳುವಂತಹ ಸಂದಿಗ್ಧತೆ ಎದುರಾಗಿದೆ. ಈ ಎಲ್ಲಾ ನಕಾತಾತ್ಮಕ ಅಂಶಗಳಿಂದಲೇ ಬಿಜೆಪಿ ದೆಹಲಿ ಚುನಾವಣೆಯಲ್ಲಿ ಶಸ್ತ್ರತ್ಯಾಗ ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಇದಕ್ಕೆ ಮುನ್ನುಡಿ ಬರೆದಿರುವುದು ಮುಖ್ಯಮಂತ್ರಿ ಹುದ್ದೆ. ಈ ಬಾರಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸದೇ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ನಿರ್ಧರಿಸಿದೆ.

ಇತ್ತೀಚೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಗೃಹಮಂತ್ರಿ ಅಮಿತ್ ಶಾ ಅವರು ಚುನಾವಣೆ ಪೂರ್ವಸಿದ್ಧತಾ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ.

ಇಷ್ಟೇ ಅಲ್ಲ, ಈ ಬಾರಿ 40-45 ಹೊಸಮುಖಗಳಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಈ ಪೈಕಿ ನಾಲ್ವರು ಹಾಲಿ ಸಂಸದರಿಗೂ ಟಿಕೆಟ್ ಕೊಟ್ಟು ಅವರನ್ನು ಗೆಲ್ಲಿಸಿ ಹೋಗಬಹುದಾದ ಹೆಚ್ಚಿನ ಮರ್ಯಾದೆಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲು ಚಿಂತಿಸಿದೆ.

2015 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 70 ಸೀಟುಗಳ ಪೈಕಿ 67 ಸೀಟುಗಳನ್ನು ಗೆದ್ದು ಪ್ರತಿಪಕ್ಷಕ್ಕೆ ಅಧಿಕೃತ ಸ್ಥಾನವೇ ಇಲ್ಲದಂತೆ ಮಾಡಿತ್ತು. ಐದು ವರ್ಷಗಳ ನಂತರ ಬಂದಿರುವ ಈ ಚುನಾವಣೆಯಲ್ಲಿಯೂ ಹಿಂದಿನ ಫಲಿತಾಂಶವನ್ನು ಮರುಕಳಿಸಲು ಆಮ್ ಆದ್ಮಿ ಪಾರ್ಟಿಗೆ ಸ್ವಲ್ಪ ಕಷ್ಟವಾಗಬಹುದು. ಸರ್ಕಾರವೇನೋ ಉತ್ತಮ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರೂ ಸ್ಥಳೀಯವಾಗಿ ಕೆಲವು ಶಾಸಕರು ತಮ್ಮ ದರ್ಪ ಮತ್ತಿತರೆ ಕಾರಣಗಳಿಂದ ಹೆಸರು ಕೆಡಿಸಿಕೊಂಡಿದ್ದಾರೆ. ಹೀಗಾಗಿ ಇಂತಹ ಶಾಸಕರು ಇರುವ ಕಡೆಗೆ ಹೊಸ ಮುಖಗಳಿಗೆ ಟಿಕೆಟ್ ಕೊಡಲು ಆಪ್ ನಿರ್ಧರಿಸಿದೆ.

ಉಚಿತ ಕುಡಿಯುವ ನೀರು, ಸಬ್ಸಿಡಿ ವಿದ್ಯುತ್, ಮೊಹಲ್ಲಾ ಕ್ಲಿನಿಕ್, ಸರ್ಕಾರಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೇಜ್ರಿವಾಲ್ ಸರ್ಕಾರ ನೀಡಿದೆ. ಈ ಕಾರ್ಯಕ್ರಮಗಳೇ ಬಿಜೆಪಿಗೆ ಈ ಬಾರಿ ಮುಳುವಾಗಲಿವೆ ಮತ್ತು ಬಹುದೊಡ್ಡ ಸವಾಲಾಗಿ ಪರಿಣಮಿಸಿವೆ. ಇಂತಹ ಕಾರ್ಯಕ್ರಮಗಳಿಗೆ ವಿರುದ್ಧವಾಗಿ ಸಿಎಎ, ಎನ್ಆರ್ ಸಿ ಜಾರಿಗೆ ತರುತ್ತಿದ್ದೇವೆ ಎಂದು ಹೇಳಿಕೊಂಡರೆ ಬರುವ ಮತಗಳೂ ಬರುವುದಿಲ್ಲ ಎಂಬ ಖಾತರಿ ಬಿಜೆಪಿ ನಾಯಕರಿಗೆ ಬಂದಾಗಿದೆ. ಅಲ್ಲದೇ, ಈಗಾಗಲೇ ದೇಶಾದ್ಯಂತ ಈ ಕಾನೂನುಗಳ ವಿರುದ್ಧ ಪ್ರತಿಭಟನೆಗಳು ನಡೆದು ವಿವಾದ ಸೃಷ್ಟಿಯಾಗಿರುವುದರಿಂದ ದೆಹಲಿ ಮತದಾರರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿಗೆ ಚುನಾವಣೆ ನುಂಗಲಾರದ ತುತ್ತಾಗಿದೆ. ಕೇಜ್ರಿವಾಲ್ ಜನಪ್ರಿಯತೆ ಎದುರು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಯಾರನ್ನೂ ಬಿಂಬಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ.

ಕೇಜ್ರಿವಾಲ್ ಅವರ ಜನಪ್ರಿಯತೆ ಮುಂದೆ ಆಡಳಿತ ವಿರೋಧಿ ವಿಚಾರ ಮಸುಕಾಗಲಿದೆ. ಏಕೆಂದರೆ ಅವರು ಜನರ ನಡುವೆ ಕೆಲಸ ಮಾಡುವ ಮೂಲಕ ಜನರ ವಿಶ್ವಾಸವನ್ನು ಗಳಿಸಿದ್ದಾರೆ. ಇನ್ನೇನಿದ್ದರೂ ಸ್ಥಳೀಯ ಮಟ್ಟದಲ್ಲಿ ಅಂದರೆ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಶಾಸಕರ ಆಡಳಿತ ವಿರೋಧಿ ಅಲೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಬೇಕಾದ ಅನಿವಾರ್ಯತೆ ಬಿಜೆಪಿಗಿದೆ. ಆದರೆ, ಇದಕ್ಕೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಸಣ್ಣ ಪುಟ್ಟ ಆಡಳಿತ ವಿರೋಧಿ ಅಲೆಯಲ್ಲಿರುವ 30 ರಿಂದ 35 ಶಾಸಕರಿಗೆ ಈ ಬಾರಿ ಟಿಕೆಟ್ ನೀಡದಿರಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಇವರಲ್ಲಿ ಮೂವರು ಮಂತ್ರಿಗಳೂ ಇದ್ದಾರೆ. ಈ ಮೂಲಕ ಆಮ್ ಆದ್ಮಿ ಪಾರ್ಟಿಯು ಬಿಜೆಪಿಗೆ ಇದ್ದ ಏಕೈಕ ಪ್ರಚಾರದ ಸರಕನ್ನೂ ಕಿತ್ತುಕೊಳ್ಳಲಿದೆ.

ಇನ್ನು ದೆಹಲಿಯಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಇಲ್ಲಿ ಶೇ.13 ರಷ್ಟು ಮುಸ್ಲಿಂ ಮತದಾರರಿದ್ದಾರೆ. ಓಖ್ಲಾ, ಸೀಲಂಪುರ, ಮಾತಿಯಾ ಮಹಲ್, ಬಲ್ಲಿಮರನ್, ಮುಸ್ತಾಫಾಬಾದ್ ಮತ್ತು ಚಾಂದಿನಿ ಚೌಕ್ ಸೇರಿದಂತೆ 15 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಸ್ಲಿಂ ಮತದಾರರು ಅಭ್ಯರ್ಥಿಯ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕರಾಗಿದ್ದಾರೆ. ಆದರೆ, ಇವರೆಲ್ಲರೂ ಆಮ್ ಆದ್ಮಿ ಪಾರ್ಟಿ ಪರವಾಗಿ ನಿಲ್ಲುತ್ತಾರೆ ಎನ್ನಲು ಸಾಧ್ಯವಿಲ್ಲ. ಏಕೆಂದರೆ, ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಆಮ್ ಆದ್ಮಿ ಪಾರ್ಟಿ ಮೃದು ಧೋರಣೆ ತಳೆದಿದೆಯಲ್ಲದೇ, ತಮ್ಮ ಹೋರಾಟಕ್ಕೆ ಸಾಥ್ ನೀಡಲಿಲ್ಲ ಎಂಬ ಅಸಮಾಧಾನ ಮುಸ್ಲಿಂ ಸಮುದಾಯದ ಒಂದು ವರ್ಗದಲ್ಲಿದೆ. ಹೀಗಾಗಿ ಇಂತಹ ಅತೃಪ್ತ ಮತಗಳು ಕಾಂಗ್ರೆಸ್ ಪಕ್ಷಕ್ಕೆ ನೆರವಾಗಬಹುದು.

ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಹಾಲಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ಜಾಟ್ ಸಮುದಾಯದ ನಾಯಕರಾಗಿದ್ದು, ಆ ವರ್ಗದ ಮತಗಳನ್ನು ಸೆಳೆಯಬಲ್ಲರು, ಬನಿಯಾ ಸಮುದಾಯಕ್ಕೆ ಸೇರಿದ ರಾಜ್ಯಸಭೆ ಸದಸ್ಯ ವಿಜಯ್ ಗೋಯಲ್ ಈ ಸಮುದಾಯದ ಮತಗಳನ್ನು ಸೆಳೆಯಬಹುದಾಗಿದ್ದು, ಗುಜ್ಜಾರ್ ಸಮುದಾಯಕ್ಕೆ ಸೇರಿರುವ ರಮೇಶ್ ಬಿಧೂರಿ ಅವರನ್ನು ಕಣಕ್ಕಿಳಿಸಿ ಆ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಲೆಕ್ಕಾಚಾರ ಹಾಕಿದೆ. ಅದೇರೀತಿ ಸಿಖ್ಖರ ಮತಗಳನ್ನು ಸೆಳೆಯಲು ಆರ್.ಪಿ.ಸಿಂಗ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಆಲೋಚನೆ ನಡೆಸಿದೆ.

ಈ ಎಲ್ಲಾ ಸಂಸದರನ್ನು ಕಣಕ್ಕಿಳಿಸಿ ಬಹುಮತ ಬರುವಷ್ಟು ಕ್ಷೇತ್ರಗಳನ್ನು ಗೆದ್ದುಕೊಂಡು 16 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಲೆಕ್ಕಾಚಾರಗಳು ನಡೆಯುತ್ತಿವೆ ಎನ್ನುತ್ತವೆ ಬಿಜೆಪಿ ಮೂಲಗಳು.

Tags: Amit Shahassembly electionBJPcampaigncandidateschief ministernational capitalstrategyಅಭ್ಯರ್ಥಿಗಳುಅಮಿತ್ ಶಾಅಸೆಂಬ್ಲಿ ಚುನಾವಣೆಕಾರ್ಯತಂತ್ರಪ್ರಚಾರಬಿಜೆಪಿಮುಖ್ಯಮಂತ್ರಿರಾಷ್ಟ್ರ ರಾಜಧಾನಿ
Previous Post

NRC ಪಿತಾಮಹ ಯಾರು?

Next Post

ಗಣರಾಜ್ಯೋತ್ಸವದ ಧ್ವಜಾರೋಹಣ ಭಾಗ್ಯವಿಲ್ಲ ನೂತನ ಸಚಿವರಿಗೆ!

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಗಣರಾಜ್ಯೋತ್ಸವದ ಧ್ವಜಾರೋಹಣ ಭಾಗ್ಯವಿಲ್ಲ ನೂತನ ಸಚಿವರಿಗೆ!

ಗಣರಾಜ್ಯೋತ್ಸವದ ಧ್ವಜಾರೋಹಣ ಭಾಗ್ಯವಿಲ್ಲ ನೂತನ ಸಚಿವರಿಗೆ!

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada