• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

by
January 8, 2021
in ದೇಶ
0
ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ
Share on WhatsAppShare on FacebookShare on Telegram

ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ‘ಮತಾಂತರ ನಿಷೇಧ ಕಾಯ್ದೆ 2020’ಯ ಅಡಿಯಲ್ಲಿ ಮೊದಲು ಬಂಧಿತನಾಗಿದ್ದ ನದೀಮ್ ವಿರುದ್ಧ ‘ಬಲವಂತದ ಮತಾಂತರ’ ಮಾಡಿರುವುದಕ್ಕೆ ಯಾವ ಸಾಕ್ಷಿಯೂ ಇಲ್ಲ ಎಂದು ಸ್ವತಃ ಉ.ಪ್ರ ಸರ್ಕಾರ ಅಲಹಾಬಾದ್ ಹೈಕೋರ್ಟ್ ‌ನಲ್ಲಿ ಹೇಳಿಕೆ ನೀಡಿದೆ.

ADVERTISEMENT

ಮುಝಾಫರ್ ನಗರ್‌ನ ಅಕ್ಷಯ್ ಕುಮಾರ್ ಎಂಬವರು ‘ತಮ್ಮ ಪತ್ನಿ ಪಾರುಲ್ ಅವರನ್ನು ನದೀಮ್ ಮತ್ತು ಆತನ ಸಹೋದರ ಸಲ್ಮಾನ್ ಒಟ್ಟು ಸೇರಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದಾರೆ’ ಎಂದು ಸ್ಥಳೀಯ ಠಾಣೆಯಲ್ಲಿ ಎಫ್.ಐ. ಆರ್ ದಾಖಲಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಔಷಧ ಕಂಪೆನಿಯೊಂದರಲ್ಲಿ ಕಾರ್ಮಿಕರ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಅಕ್ಷಯ್ ಕುಮಾರ್ ತ್ಯಾಗಿ ಅವರ ಮನೆಗೆ 32 ವರ್ಷದ ನದೀಮ್ ಆಗಾಗ ಭೇಟಿ ಕೊಡುತ್ತಿದ್ದರು ಮತ್ತು ಅವರ ಹೆಂಡತಿ ಪಾರುಲ್ ಅವರನ್ನು ‘ಪ್ರೀತಿಯ ಜಾಲ’ದಲ್ಲಿ ಸಿಲುಕಿಸಿ ಮತಾಂತರ ಮಾಡಲು ಯತ್ನಿಸಲಾಗಿದೆ ಎಂದು ಆರೋಪಿಸಿದ್ದರು.

ಕಳೆದ ತಿಂಗಳು ನದೀಮ್ ಅವರು ತಮ್ಮ ಮೇಲೆ ದಾಖಲಿಸಿರುವ ಎಫ್ಐಆರ್‌ನ್ನು ರದ್ದು ಪಡಿಸುವಂತೆ ಕೋರಿ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ಮುಂದಿನ ವಿಚಾರಣೆಯವರೆಗೆ ಪೊಲೀಸರು ಆತನ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೇಳಿದ್ದರು. ಗುರುವಾರ ಮತ್ತೊಮ್ಮೆಅವರ ವಿಚಾರಣೆಯನ್ನು ‌ಎತ್ತಿಕೊಂಡಿದ್ದು ವಾದ ವಿವಾದಗಳನ್ನು ಆಲಿಸಿದ ಬಳಿಕ ವಿಚಾರಣೆಯನ್ನು ಜನವರಿ ಹದಿನೈದಕ್ಕೆ ಮುಂದೂಡಿದೆ.

“ಘನತೆವೆತ್ತ ನ್ಯಾಯಾಲಯದ ಮುಂದೆ ಪ್ರಕರಣ ಇವತ್ತು ವಿಚಾರಣೆಗೆ ಬಂದಾಗ ಸರ್ಕಾರ ಸಹೋದರರ ಮೇಲೆ ಮತಾಂತರ ನಿಷೇಧ ಮಸೂದೆಯಡಿಯಲ್ಲಿ ಕೇಸು ದಾಖಲಿಸಿದ್ದು ತಪ್ಪು‌ ನಡೆಯಾಗಿದ್ದು, ತನಿಖೆಯಲ್ಲಿ ಆತ ಬಲವಂತವಾಗಿ ಮತಾಂತರ ನಡೆಸಲು ಯತ್ನಿಸಿದ್ದಕ್ಕೆ ಯಾವ ಕುರುಹೂ ಸಿಗಲಿಲ್ಲ ಎಂದು ಅಫಿಡವಿಟ್ ಸಲ್ಲಿಸಿದೆ” ಎಂದು ನದೀಮ್‌ನ ವಕೀಲರಾದ ಸಯ್ಯದ್ ಫರ್ಮಾನ್ ಅಹ್ಮದ್ ನಖ್ವಿ ತಿಳಿಸಿದ್ದಾರೆ.

ಆದರೆ ಅಫಿಡವಿಟ್‌ನಲ್ಲಿ “ಆರೋಪಿ ನದೀಮ್ ಅಕ್ಷಯ್ ಅವರನ್ನು ಬೆದರಿಸಿದ್ದಾರೆ ಎಂಬುವುದು ತನಿಖಾಧಿಕಾರಿಗೆ ತಿಳಿದು ಬಂದಿದ್ದು ‘ಸಾರ್ವಜನಿಕ ಶಾಂತಿ ಕದಡಿ’ದ್ದಕ್ಕಾಗಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ” ಎಂದು ಉಲ್ಲೇಖಿಸಲಾಗಿದೆ.

ಕೊನೆಯ ವಿಚಾರಣೆಯಲ್ಲಿ “ಬಲವಂತದ ಮತಾಂತರ ನಡೆಸಿರುವುದಕ್ಕೆ ತನ್ನ ಮುಂದೆ ಯಾವುದೇ ದಾಖಲೆ ಸಲ್ಲಿಸಲಾಗಿಲ್ಲ” ಎಂದು ಮಹತ್ವದ ಹೇಳಿಕೆ ನೀಡಿದ ಕೋರ್ಟ್ “ಮಹಿಳೆಯು ವಯಸ್ಕಳಾಗಿದ್ದು ತನ್ನ ಹಿತವನ್ನು ಅರಿತುಕೊಂಡು ಮುನ್ನೆಡೆ ಇಡಲು ಸಮರ್ಥಳು” ಎಂದೂ ಹೇಳಿದೆ.

ಬಲಫಂಥೀಯ ಸಂಘಟನೆಗಳ‌ ಒತ್ತಾಸೆಯಂತೆ ದೇಶದಲ್ಲೇ ಮೊದಲ ಬಾರಿ ಈ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ಉ.ಪ್ರ ಸರ್ಕಾರ ಈ ಕಾಯ್ದೆಯನ್ವಯ ಮೊದಲು ಬಂಧಿಸಿದ್ದ ವ್ಯಕ್ತಿಯ ವಿರುದ್ಧದ ಆರೋಪ ಸಾಬೀತು ಪಡಿಸುವಲ್ಲಿ ಸೋತಿದೆ. ಸ್ವತಃ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ‘ಲವ್ ಜಿಹಾದ್ ಕಾನೂನಿನ ಪ್ರಕಾರ ವ್ಯಾಖ್ಯಾನಕ್ಕೆ ಒಳಪಟ್ಟಿಲ್ಲ’ ಎಂದು ಹೇಳಿಕೆ ನೀಡಿದ್ದರೂ ಬಿಜೆಪಿ ಆಡಳಿತ ಇರುವ ಹಲವು ರಾಜ್ಯಗಳು ಕಪೋಲ ಕಲ್ಪಿತ ‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಹೊರಟಿವೆ.

Tags: UP ಸರ್ಕಾರಲವ್ ಜಿಹಾದ್
Previous Post

ರೈತರ ಪ್ರತಿಭಟನೆಗೆ ಸಾಥ್‌ ನೀಡಲು ಅಮೇರಿಕಾದಿಂದ ಬಂದಿಳಿದ ವಿದ್ಯಾರ್ಥಿ

Next Post

ವಿಶ್ವನಾಥ್‌ ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ – ಸಾರಾ ಮಹೇಶ್‌

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ವಿಶ್ವನಾಥ್‌ ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ – ಸಾರಾ ಮಹೇಶ್‌

ವಿಶ್ವನಾಥ್‌ ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ – ಸಾರಾ ಮಹೇಶ್‌

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada