• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿರ್ಭಯಾ ಪ್ರಕರಣದ ನಂತರವೂ ಈ ದೇಶ ಹೆಣ್ಣುಮಕ್ಕಳಿಗೆ ಸುರಕ್ಷಿತವಲ್ಲ ಎನ್ನುತ್ತಿವೆ ಅಂಕಿಅಂಶಗಳು

by
March 21, 2020
in ದೇಶ
0
ನಿರ್ಭಯಾ ಪ್ರಕರಣದ ನಂತರವೂ ಈ ದೇಶ ಹೆಣ್ಣುಮಕ್ಕಳಿಗೆ ಸುರಕ್ಷಿತವಲ್ಲ ಎನ್ನುತ್ತಿವೆ ಅಂಕಿಅಂಶಗಳು
Share on WhatsAppShare on FacebookShare on Telegram

ಕಳೆದ 8 ವರ್ಷಗಳಿಂದ ಭಾರತೀಯರು ಕಾತುರದಿಂದ ಕಾಯುತ್ತಿದ್ದ ಆ ಘಳಿಗೆ ಕೊನೆಗೂ ಸಕಾರವಾಗಿದೆ. 2012 ಡಿಸೆಂಬರ್ 16ರಂದು ದೆಹಲಿಯ ರಸ್ತೆಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಕೊನೆಗೂ ಈಡೇರಿಸಲಾಗಿದೆ. ಅಲ್ಲಿಗೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆತಂತಾಗಿದೆ.

ADVERTISEMENT

ಕೊಲೆಗೆ ಕೊಲೆ ಪರಿಹಾರವಲ್ಲ ಎಂಬ ಮಹೋನ್ನತ ಆಶಯವನ್ನು ಹೊಂದಿರುವ ದೇಶ ಭಾರತ. ಇದೇ ಕಾರಣಕ್ಕೆ ಎಷ್ಟೋ ನಟೋರಿಯಸ್‌ ಪಾತಕಿಗಳಿಗೂ ಕ್ಷಮಾಧಾನ ನೀಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಾನೂನು ವ್ಯವಸ್ಥೆಯಲ್ಲಿದೆ. ಕೊಲ್ಲುವುದು ಈ ನೆಲದ ಸಂಪ್ರದಾಯವಲ್ಲ. ಆದರೂ, ಕೆಲವೊಂದು ವಿರಳಾತಿವಿರಳ ಪ್ರಕರಣಗಳು ಕ್ಷಮಾಧಾನಕ್ಕೆ ಅನರ್ಹವಾಗಿರುತ್ತವೆ. ಇಂತಹ ಪ್ರಕರಣಗಳಲ್ಲೊಂದು ನಿರ್ಭಯಾ ಅತ್ಯಾಚಾರ ಪ್ರಕರಣ.

ಸುಪ್ರೀಂ ಕೋರ್ಟ್‌‌ನಿಂದ, ರಾಷ್ಟ್ರಪತಿ ವರೆಗೆ ಎಲ್ಲರೂ ನಿರ್ಭಯಾ ಅತ್ಯಾಚಾರ ಆರೋಪಿಗಳ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿ ಇವರು ಬದುಕಲು ಅರ್ಹರಲ್ಲ ಎಂದು ತೀರ್ಪು ನೀಡಿದ ಬೆನ್ನಿಗೆ ನಾಲ್ವರೂ ಆರೋಪಿಗಳನ್ನು ಇಂದು ಗಲ್ಲಿಗೆ ಏರಿಸಲಾಗಿದೆ. ಈ ನಾಲ್ವರು ನೇಣಿಗೆ ಕೊರಳೊಡ್ಡುವ ಮೂಲಕ ಕಳೆದ 27 ವರ್ಷದಲ್ಲಿ ಭಾರತದಲ್ಲಿ ಗಲ್ಲಿಗೆ ಕೊರಳೊಡ್ಡುತ್ತಿರುವ 5ನೇ ವಿರಳಾತಿ ವಿರಳ ಪ್ರರಕಣ ಎಂದು ಈ ಘಟನೆ ಭಾರತೀಯ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ.

ಅಂದಹಾಗೆ ದೇಶದಲ್ಲಿ ಅತ್ಯಾಚಾರ ಪ್ರಕರಣದ ವಿರುದ್ಧ ಕಾನೂನುಗಳು ಇತ್ತೀಚೆಗೆ ಕಠಿnವಾಗುತ್ತಿದೆ. 2012ರ ದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆಯಾಗಿದೆ. ಇತ್ತೀಚೆಗೆ ತೆಲಂಗಾಣದಲ್ಲಿ ಅತ್ಯಾಚಾರ ಆರೋಪಿಗಳನ್ನು ನಡುರಸ್ತೆಯಲ್ಲೇ ಗುಂಡಿಟ್ಟು ಕೊಲ್ಲಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಉತ್ತರಪ್ರದೇಶದ ಉನ್ನಾವೋ ಕ್ಷೇತ್ರದ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್‍ಗೆ ಜೀವಾವಧಿ ಶಿಕ್ಷೆಯಾಗಿದೆ. ಇಷ್ಟೆಲ್ಲಾ ಆದ ನಂತರ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ತಹಬಂದಿಗೆ ಬಂದಿರಬೇಕು ಎಂದು ನೀವು ಅಂದುಕೊಂಡರೆ ನಿಮ್ಮ ಊಹೆ ಖಂಡಿತ ತಪ್ಪು.

ದೇಶದಲ್ಲಿ ಅತ್ಯಾಚಾರ ಪ್ರಮಾಣ ಎಷ್ಟು ಗೊತ್ತಾ?

ಈ ದೇಶದಲ್ಲಿ ಅನೇಕ ಮೂಢ ನಂಬಿಕೆಗಳು ಇವೆ. ಈ ಪೈಕಿ ಮಹಿಳೆಯರಿಗೆ ದೈವತ್ವ ಕಲ್ಪಿಸಿರುವ ಈ ನಾಡಿನಲ್ಲಿ ಹೆಣ್ಣನ್ನು ದೇವರಂತೆ ಕಾಣಲಾಗುತ್ತದೆ ಎಂಬುದು ಸಹ ಒಂದು. ಆದರೆ, ವಾಸ್ತವದಲ್ಲಿ ಮಹಿಳೆಯರನ್ನು ದೇವರಂತೆ ಕಾಣುವುದು ಇರಲಿ, ಸಹ ಮನುಷ್ಯರಂತೆಯೂ ಇಲ್ಲಿ ಕಾಣಲಾಗುತ್ತಿಲ್ಲ ಎಂಬುದೇ ವಾಸ್ತವ ಸತ್ಯ.

2012ರಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣ ಅಸಲಿಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ವೇಳೆ ದೇಶದಾದ್ಯಂತ ನಡೆದ ಪ್ರತಿಭಟನೆಗಳು ಮತ್ತು ಪೊಲೀಸ್ ಇಲಾಖೆಯ ಗಮನಾರ್ಹ ಕಾರ್ಯಾಚರಣೆಗಳಿಂದಾಗಿ ದೇಶದಲ್ಲಿ ಮಹೆಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಬಿದ್ದಿದೆ ಎಂದೇ ಊಹಿಸಲಾಗಿತ್ತು.

ಆದರೆ, ಕಳೆದ 8 ವರ್ಷದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಗಣನೀಯವಾಗಿ ಏರಿಕೆಯಾಗಿದೆಯೇ ಹೊರತು ಇಳಿದಿಲ್ಲ. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ ನೀಡುವ ಅಂಕಿಅಂಶದ ಪ್ರಕಾರ 2015ರಲ್ಲಿ ಮಾತ್ರ ದೇಶದಲ್ಲಿ ಸುಮಾರು 3.27ಲಕ್ಷ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2011ಕ್ಕೆ ಹೋಲಿಕೆ ಮಾಡಿದರೆ 2015ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಮಾಣ ಶೇ.43ರಷ್ಟು ಏರಿಕೆಯಾಗಿದೆ.

20025 ರಿಂದ 2015 ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಅಡಿಯಲ್ಲಿ ದಾಖಲಾದ ಪ್ರಕರಣಗಳ ಪ್ರಮಾಣ ಶೇ.110.5 ರಷ್ಟು ಏರಿಕೆಯಾಗಿದೆ. 2015ರಲ್ಲಿ ದೆಹಲಿಯಲ್ಲಿ ದಾಖಲಾದ ಒಟ್ಟು ಅಪರಾಧ ಪ್ರಕರಣಗಳಲ್ಲಿ ಶೇ.53.9ರಷ್ಟು ಮಹಿಳೆಯರ ವಿರುದ್ಧದ ಪ್ರಕರಣಗಳಾಗಿವೆ. ಮಹಿಳೆಯರ ಮೇಲಿನ ಅಪರಾಧದಲ್ಲಿ ದೆಹಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.

ಇವು ಲೈಂಗಿಕ ದೌರ್ಜನ್ಯದ ಪ್ರಕರಣಗಳ ಲೆಕ್ಕಾಚಾರವಾದರೆ, ಅತ್ಯಾಚಾರದ ಪ್ರಕರಣವೂ ಕಡಿಮೆ ಏನಿಲ್ಲ. ನಿರ್ಭಯಾ ಪ್ರಕರಣ ದಾಖಲಾದ 2012ರಲ್ಲಿ ದೇಶದಲ್ಲಿ ಒಟ್ಟು 24,923 ಅತ್ಯಾಚಾರ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿತ್ತು. ಇನ್ನೂ 2013ರಲ್ಲಿ 33,707; 2014ರಲ್ಲಿ 36735; 2015ರಲ್ಲಿ 34,651; 2016ರಲ್ಲಿ 38,947 ಹಾಗೂ 2017ರಲ್ಲಿ 33,658 ಅತ್ಯಾಚಾರ ಪ್ರಕರಣಗಳು ಈ ದೇಶದಲ್ಲಿ ದಾಖಲಾಗಿವೆ.

ವರ್ಷದಿಂದ ವರ್ಷಕ್ಕೆ ಅತ್ಯಾಚಾರ ಪ್ರಕರಣಗಳು ಅಧಿಕವಾಗಿರುವುದನ್ನು ನಾವಿಲ್ಲಿ ಗಮನಿಸಬಹುದು. ಪ್ರತಿ 15 ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಹಳ್ಳಿ ಭಾಗದಲ್ಲಿ ಮಾನ ಮರ್ಯಾದೆಗೆ ಅಂಜಿ ದಾಖಲಾಗದೆ ಉಳಿಯುವ ಪ್ರಕರಣಗಳ ಸಂಖ್ಯೆ ಇದರ ಎರಡರಷ್ಟಿದೆ ಎನ್ನಲಾಗುತ್ತಿದೆ.

ನಿರ್ಭಯಾ ದೆಸೆಯಿಂದ ಕಾನೂನಿನಲ್ಲಾದ ಬದಲಾವಣೆ;

ನಿರ್ಭಯಾ ಪ್ರಕರಣದ ನಂತರ ದೇಶದಲ್ಲಿ ಅತ್ಯಾಚಾರದ ವಿರುದ್ದ ದೊಡ್ಡ ಕೂಗು ಎದ್ದಿತ್ತು. ಪರಿಣಾಮ ಕೇಂದ್ರ ಸರ್ಕಾರ ಕ್ರಮಿನಲ್ ಲಾ ಕಾಯ್ದೆ-2018ರ ಅಡಿಯಲ್ಲಿ ಅತ್ಯಾಚಾರಿಗಳಿಗೆ 7 ವರ್ಷದಿಂದ ಜೀವಾವಧಿ ಶಿಕ್ಷೆಗೆ ಏರಿಸಿತು.

ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಮೂಲಕ 12 ವರ್ಷಕ್ಕಿಂತ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗಿದರೆ ಗಲ್ಲುಶಿಕ್ಷೆ ವಿಧಿಸುವ ಅವಕಾಶವನ್ನೂ ಒದಗಿಸಲಾಗಿದೆ. ಇದಲ್ಲದೆ, ಅತ್ಯಾಚಾರದ ಸಂದರ್ಭದಲ್ಲಿ ಎಸಗಲಾಗುವ ಕೌರ್ಯದ ಆಧಾರದ ಮೇಲೆ ಅಪರಾಧಿಗೆ ಗಲ್ಲುಶಿಕ್ಷೆಯನ್ನೂ ನೀಡಲು ಕೇಂದ್ರ ಸರ್ಕಾರ ಹೊಸ ಕಾಯ್ದೆ ರೂಪಿಸಿ 2018ರಿಂದಲೇ ಜಾರಿಗೆ ತಂದಿದೆ.

ಈ ಮೊದಲು ಮಧ್ಯಪ್ರದೇಶ, ರಾಜಸ್ತಾನದಂತಹ ರಾಜ್ಯಗಳಲ್ಲಿ ಮಾತ್ರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲಾಗುತ್ತಿತ್ತು. ಆದರೆ, 2018ರ ನಂತರ ರಾಷ್ಟ್ರವ್ಯಾಪಿ ಎಲ್ಲೇ ಅತ್ಯಾಚಾರ ಎಸಗಿದರೂ ಅಪರಾಧಿಗೆ ಗಲ್ಲು ಖಚಿತ ಎಂಬ ಖಡಕ್ ಸಂದೇಶವನ್ನು ಕೇಂದ್ರ ಸರ್ಕಾರ ರವಾನಿಸಿದೆ. ಈ ಕಾನೂನು ರೂಪ ತಲೆಯುವ ಹಿಂದೆ ನಿರ್ಭಯಾ ಬಲಿದಾನ ಪ್ರಮುಖ ಪಾತ್ರ ವಹಿಸಿರುವುದು ಸುಳ್ಳಲ್ಲ.

ಇದಲ್ಲದೆ, ನಿರ್ಭಯಾ ಪ್ರಕರಣದ ನಂತರ ಅತ್ಯಾಚಾರ ಪ್ರಕರಣಗಳ ನ್ಯಾಯ ವಿತರಣೆಯನ್ನು ವೇಗಗೊಳಿಸುವ ಸಲುವಾಗಿ ಶೀಘ್ರ ವಿಚಾರಣಾ ನ್ಯಾಯಾಲಯಗಳ ಸ್ಥಾಪನೆಗೆ ಅನುಮೋದನೆ ದೊರೆಯಿತು. 2015-2020 ಅವಧಿಯಲ್ಲಿ ಸುಮಾರು 1800 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಇಷ್ಟೆಲ್ಲಾ ಆದರೂ ಸಹ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ತಹಬಂದಿಗೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ ಎಂಬುದೇ ವಿಷಾಧನೀಯ ಸಂಗತಿ.

ಅಂಕಿಅಂಶಗಳ ಪ್ರಕಾರ ಭಾತದಲ್ಲಿ ಪ್ರತಿ 15 ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇದೆ. ವರ್ಷದಿಂದ ವರ್ಷಕ್ಕೆ ಈ ಸಂಖ್ಯೆ ಅಧಿಕವಾಗುತ್ತಲೇ ಇದೆ. ಪ್ರಕರಣಗಳೂ ದಾಖಲಾಗುತ್ತಿವೆ. ಆದರೆ, ಶಿಕ್ಷೆಯಾಗುತ್ತಿರುವುದು ಮಾತ್ರ ಕೇವಲ ಶೇ.32 ರಷ್ಟು ಜನರಿಗೆ ಮಾತ್ರ ಎಂಬುದು ನಮ್ಮ ನ್ಯಾಯ ವ್ಯವಸ್ಥೆಯಲ್ಲಿನ ಹುಳುಕನ್ನು ಎತ್ತಿ ತೋರುತ್ತಿದೆ. ಈ ನಡುವೆ ಯಾವುದೇ ಕಾನೂನುಕಟ್ಟುಪಾಡುಗಳೂ ಸಹ ಮಹಿಳೆಯರ ಘನತೆಯನ್ನು ಉಳಿಸುವಲ್ಲಿ ಸಫಲವಾಗಿಲ್ಲ ಎಂಬುದೂ ವೇದ್ಯವಾಗುತ್ತಿದೆ.

ಹೀಗಾಗಿ ಯಾವುದೇ ಕಾನೂನುಗಳಿಂದ ಮಹಿಳೆಯರನ್ನು ಉಳಿಸುವುದು, ಅತ್ಯಾಚಾರ ಪ್ರಕರಣಗಳ ಸಂಖ್ಯೆಯನ್ನು ಇಳಿಸುವುದು ಸಾಧ್ಯವಿಲ್ಲ. ಬದಲಾಗಿ ಜನರಲ್ಲಿ ಅರಿವು ಮೂಡಿಸಬೇಕು. ಎಲ್ಲರನ್ನೂ ಸುಶಿಕ್ಷಿತರನ್ನಾಗಿ ಶಾಲಾ ಮಟ್ಟದಿಂದಲೇ ಮಕ್ಕಳಿಗೆ ಮಹಿಳೆಯರ ಘನತೆಯ ಕುರಿತು ಮನವರಿಕೆ ಮಾಡದ ಹೊರತಾಗಿ ಅತ್ಯಾಚಾರ ಪ್ರಕರಣವನ್ನು ತಡೆಯುವುದು ಸಾಧ್ಯವಿಲ್ಲ ಎನ್ನುತ್ತಾರೆ ದೇಶದ ಖ್ಯಾತ ಮನಶಾಸ್ತ್ರಜ್ಞರು.

Tags: Kuldeedp Singh sengarKuldeep Singh SengarNirbhaya CaseUnnao rape and murder caseಉನ್ನಾವೋನಿರ್ಭಯಾ ಪ್ರಕರಣಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್‌
Previous Post

ಪರಿಸರ ಮಾರಕ ನಿರ್ಧಾರ ಕೈಗೊಳ್ಳುವುದಾದರೆ ವನ್ಯಜೀವಿ ಮಂಡಳಿ ಅಗತ್ಯವೇನು?

Next Post

ಅಮಿತ್‌ ಶಾ ಹೇಳಿಕೆಗೆ ವಿರುದ್ದವಾಗಿ ಸುಪ್ರೀಂ ಕೋರ್ಟಿನಲ್ಲಿ NRC ಕುರಿತು ಅಫಿಡವಿಟ್ ನೀಡಿದ ಕೇಂದ್ರ ಸರ್ಕಾರ

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025

ಈ ವ್ಯಕ್ತಿಯನ್ನು ಹಣಕಾಸು ಮಂತ್ರಿ ಮಾಡಿದ್ದು ನಾನು: ಹೆಚ್.ಡಿ. ದೇವೇಗೌಡ..!!

November 22, 2025
ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ  ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

November 22, 2025

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

November 22, 2025
Next Post
ಅಮಿತ್‌ ಶಾ ಹೇಳಿಕೆಗೆ ವಿರುದ್ದವಾಗಿ ಸುಪ್ರೀಂ ಕೋರ್ಟಿನಲ್ಲಿ NRC ಕುರಿತು ಅಫಿಡವಿಟ್ ನೀಡಿದ ಕೇಂದ್ರ ಸರ್ಕಾರ

ಅಮಿತ್‌ ಶಾ ಹೇಳಿಕೆಗೆ ವಿರುದ್ದವಾಗಿ ಸುಪ್ರೀಂ ಕೋರ್ಟಿನಲ್ಲಿ NRC ಕುರಿತು ಅಫಿಡವಿಟ್ ನೀಡಿದ ಕೇಂದ್ರ ಸರ್ಕಾರ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada