• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಪ್ರಕರಣದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ED

by
June 10, 2020
in ದೇಶ
0
ನೀರವ್‌ ಮೋದಿ
Share on WhatsAppShare on FacebookShare on Telegram

ಮಹತ್ವದ ಕಾರ್ಯಾಚರಣೆಯಲ್ಲಿ ಜಾರಿ ನಿರ್ದೇಶನಾಲಯವು ದೇಶದ ಬ್ಯಾಂಕಿಂಗ್‌ ಗೆ ವಂಚಿಸಿ, ಅಕ್ರಮ ಹಣ ವರ್ಗಾವಣೆ ನಡೆಸಿ ಪಲಾಯನ ಮಾಡಿದ್ದ ಉದ್ಯಮಿಗಳಾದ ನೀರವ್‌ ಮೋದಿ ಹಾಗೂ ಮೆಹುಲ್‌ ಚೋಕ್ಸಿ ಒಡೆತನದ ಸಂಸ್ಥೆಗಳಿಗೆ ಸೇರಿದ ವಜ್ರ ಮತ್ತು ಮುತ್ತುಗಳನ್ನು ಹಾಂಗ್‌ ಕಾಂಗ್‌ ನಿಂದ ವಾಪಾಸ್‌ ಭಾರತಕ್ಕೆ ಮರಳಿ ತರುವಲ್ಲಿ ಇಡಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ADVERTISEMENT

ಸುಮಾರು 1,350 ಕೋಟಿ ರೂಪಾಯಿಯ 2300 ಕ್ಕೂ ಅಧಿಕ ಕೆಜಿಯ ವಜ್ರ, ಮುತ್ತು ಹಾಗೂ ಚಿನ್ನಾಭರಣಗಳನ್ನ ಇಡಿ ಅಧಿಕಾರಿಗಳು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 108 ಪ್ಯಾಕೇಜ್‌ ಗಳ ರೂಪದಲ್ಲಿ ಮುಂಬೈನ ಬಂದರಿನಲ್ಲಿ ತಂದಿಳಿಸಲಾಯಿತು ಅಂತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪೈಕಿ 32 ಪ್ಯಾಕೆಜ್‌ ಗಳು ನೀರವ್‌ ಮೋದಿ ಸಾಮ್ಯದ ಕಂಪೆನಿಗೆ ಸೇರಿದ್ದರೆ, ಉಳಿದೆಲ್ಲವೂ ಚೋಕ್ಸಿ ಒಡೆತನದ ಕಂಪೆನಿಗೆ ಸೇರಿದ್ದಾಗಿ ಹೇಳಲಾಗಿದೆ. ಇವರಿಬ್ಬರು ಈ ಎಲ್ಲಾ ಸರಕುಗಳ ಜೊತೆಗೆ ಹಾಂಗ್‌ ಕಾಂಗ್‌ ನಿಂದ ದುಬೈಗೆ ಪಲಾಯನ ಮಾಡಲು ಸಿದ್ಧತೆ ನಡೆಸುತ್ತಿದ್ದಂತೆ 2018 ರಲ್ಲಿ ಇಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

48 ರ ಹರೆಯದ ನೀರವ್‌ ಮೋದಿ ಹಾಗೂ 60 ರ ಹರೆಯದ ಮೆಹುಲ್‌ ಚೋಕ್ಸಿ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ನಲ್ಲಿ ನಕಲಿ ಗ್ಯಾರಂಟಿಗಳನ್ನ ಇರಿಸಿ ಸಾಲಗಳನ್ನ ಪಡೆದಿದ್ದರು. ಈ ಕುರಿತು ಸಿಬಿಐ ತನಿಖೆಗೆ ಮುಂದಾಗುತ್ತಲೇ ಇವರಿಬ್ಬರೂ 2018 ರಲ್ಲಿ ದೇಶ ಬಿಟ್ಟು ಪಲಾಯನಗೈದಿದ್ದರು. ಇಬ್ಬರ ಮೇಲೂ ಮುಂಬೈಯ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಗೆ 15 ಸಾವಿರ ಕೋಟಿ ರೂಪಾಯಿ ವಂಚಿಸಿರುವ ಆರೋಪವಿದ್ದು, ಸದ್ಯ ಜಾರಿ ನಿರ್ದೇಶನಾಲಯ (ED) ಅದರ ತನಿಖೆಯಲ್ಲಿ ನಿರತವಾಗಿದೆ.

ನೀರವ್‌ ಮೋದಿಯನ್ನ ಕಳೆದ ವರುಷವೇ ಲಂಡನ್‌ ನಲ್ಲಿ ಬಂಧಿಸಿರುವ ಇಡಿ ಅಧಿಕಾರಿಗಳು, ಭಾರತಕ್ಕೆ ಕರೆತರಲು ಕಾನೂನು ಮೊರೆ ಹೋಗಿದ್ದಾರೆ. ಇನ್ನು ನೀರವ್‌ ಮೋದಿ ಬ್ಯಾಂಕ್‌ ಗೆ ನೀಡಬೇಕಿರುವ ಹಣವನ್ನ ಮರಳಿ ಪಡೆಯುವ ಉದ್ದೇಶದಿಂದ ಈಗಾಗಲೇ ನೀರವ್‌ ಮೋದಿಗೆ ಸೇರಿದ ರಾಲ್ಸ್‌ ರಾಯ್ಸ್‌ ಕಾರು, ಖ್ಯಾತ ಚಿತ್ರಕಾರ ಎಂಎಫ್‌ ಹುಸೇನ್‌ ಹಾಗೂ ಅಮೃತಾ ಶೆರ್ಗಿಲ್ ರಚನೆಯ ಚಿತ್ರಗಳು ಹಾಗೂ ಐಷಾರಾಮಿ ಕೆಲವು ಸರಕುಗಳನ್ನ ಈಗಾಗಲೇ ಹರಾಜು ಹಾಕಿ ಹಣ ಪಡೆಯಲಾಗಿದೆ. ಇದೀಗ ಇಡಿ ಅಧಿಕಾರಿಗಳು 1350 ಕೋಟಿ ರೂಪಾಯಿ ಮೌಲ್ಯದ ಸರಕುಗಳನ್ನ ವಾಪಾಸ್‌ ತರುವಲ್ಲಿ ಸಾಧ್ಯವಾಗಿದ್ದು, ವಿಜಯ್‌ ಮಲ್ಯ ಬಳಿಕ ನೀರವ್‌ ಮೋದಿ ಕೇಸ್‌ ನಲ್ಲೂ ಭಾರತ ಯಶಸ್ಸಿನ ಹೆಜ್ಜೆ ಇರಿಸಿದಂತಾಗಿದೆ.

Tags: EDMehul ChoksiNirav Modiಜಾರಿ ನಿರ್ದೇಶನಾಲಯನೀರವ್ ಮೋದಿಮೆಹುಲ್ ಚೋಕ್ಸಿ
Previous Post

ಕರೋನಾ: ರಾಜ್ಯದಲ್ಲಿ ಇಳಿಕೆ ಕಂಡ ಸಕ್ರಿಯ ಪ್ರಕರಣಗಳ ಸಂಖ್ಯೆ

Next Post

ಕರೋನಾಯ ತಸ್ಮೈ ನಮಃ; ಸಂಸತ್ ಅಧಿವೇಶನವೂ ವರ್ಚ್ಯುಯಲ್!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಕರೋನಾಯ ತಸ್ಮೈ ನಮಃ; ಸಂಸತ್ ಅಧಿವೇಶನವೂ ವರ್ಚ್ಯುಯಲ್!

ಕರೋನಾಯ ತಸ್ಮೈ ನಮಃ; ಸಂಸತ್ ಅಧಿವೇಶನವೂ ವರ್ಚ್ಯುಯಲ್!

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada