• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನ್ಯಾಯಾಂಗ ನಿಂದನೆ ಪ್ರಕರಣ; ಕ್ಷಮೆ ಕೇಳಲು ಪ್ರಶಾಂತ್‌ ಭೂಷಣ್‌ ಮತ್ತೆ ನಿರಾಕರಣೆ

by
August 25, 2020
in ದೇಶ
0
ನ್ಯಾಯಾಂಗ ನಿಂದನೆ ಪ್ರಕರಣ; ಕ್ಷಮೆ ಕೇಳಲು ಪ್ರಶಾಂತ್‌ ಭೂಷಣ್‌ ಮತ್ತೆ ನಿರಾಕರಣೆ
Share on WhatsAppShare on FacebookShare on Telegram

ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಾಲಯದ ನಿಂದನೆ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಪ್ರಕರಣದ ತೀರ್ಪನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 2 ರಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನಿವೃತ್ತಿಯಾಗುವ ಮುನ್ನ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು ಎಂದು ವರದಿಯಾಗಿದೆ.

ADVERTISEMENT

ವಿಚಾರಣೆಯ ವೇಳೆ ಪ್ರಶಾಂತ್ ಭೂಷಣ್ ಅವರಿಗೆ ಕ್ಷಮೆಯಾಚಿಸುವಂತೆ ಕೇಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ, ಕ್ಷಮೆಯಾಚಿಸುವುದರ ಬಗ್ಗೆ ಯೋಚಿಸಲು ಅರ್ಧ ಘಂಟೆಯ ಸಮಯ ನೀಡಿದ್ದರು. ಮಧ್ಯಾಹ್ನ ಪ್ರಶಾಂತ್ ಭೂಷಣ್ ಪರ ಹಾಜರಾದ ವಕೀಲರು, ಪ್ರಶಾಂತ್‌ ಭೂಷಣ್ ಕ್ಷಮೆಯಾಚಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅವರು ಧೃಡ ನಂಬಿಕೆಯಿಂದ ಆರೋಪಗಳನ್ನು ಮಾಡಿದ್ದರು, ಹಾಗಾಗಿ ವಿಷಯಕ್ಕಾಗಿ ಕ್ಷಮೆಯಾಚಿಸಲು ಬಯಸುವುದಿಲ್ಲ. ಕ್ಷಮೆಯಾಚಿಸಲು ನ್ಯಾಯಾಲಯ ಒತ್ತಾಯಿಸುವುದು ಅಸಂವಿಧಾನಿಕ ಎಂದು ಭೂಷಣ್‌ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಹಿಂದೆ ಈ ಪ್ರಕರಣದಲ್ಲಿ ಕ್ಷಮೆಯಾಚಿಸಲು ನ್ಯಾಯಾಲಯವು ಪ್ರಶಾಂತ್‌ ಭೂಷಣ್ ಅವರಿಗೆ ಸೋಮವಾರ ತನಕ ಕಾಲಾವಕಾಶ ನೀಡಿತ್ತು. ತಾನು ಕ್ಷಮೆಯಾಚಿಸಲು ಸಿದ್ಧವಿಲ್ಲ ಎಂದು ಪ್ರಶಾಂತ್ ಭೂಷಣ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತೀರ್ಪನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು.

ಪ್ರಾಮಾಣಿಕತೆ ಇಲ್ಲದೆ ಕ್ಷಮೆಯಾಚಿಸುವುದು ಕಪಟ ಮತ್ತು ಆತ್ಮ ವಂಚನೆ ಎಂದು ನ್ಯಾಯಾಲಯಕ್ಕೆ ಪ್ರಶಾಂತ್‌ ಭೂಷಣ್‌ ಹೇಳಿದ್ದರು. ಸೋಮವಾರ ಸಲ್ಲಿಸಿದ ಎರಡು ಪುಟಗಳ ಹೇಳಿಕೆಯಲ್ಲಿ, ಭೂಷಣ್, ಈ ತಿಂಗಳ 20 ರಂದು ಸುಪ್ರೀಂ ಕೋರ್ಟ್‌ಗೆ ನೀಡಿದ ಹೇಳಿಕೆಯಲ್ಲಿ ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟಿನಲ್ಲಿ ಭೂಷಣ್‌ ಪರ ವಾದಿಸಲು ಹಾಜರಾದ ಹಿರಿಯ ವಕೀಲ ರಾಜೀವ್‌ ಧವನ್‌ ಪ್ರಶಾಂತ್‌ ಭೂಷಣ್‌ ಅವರನ್ನು ನ್ಯಾಯಾಲಯ ಶಿಕ್ಷಿಸಬಾರದು ಎಂದು ವಾದ ಮಾಡಿದ್ದರು. ಭೂಷಣ್ ಅವರ ಹೇಳಿಕೆಯನ್ನು ಒಟ್ಟಾರೆಯಾಗಿ ಓದಿದರೆ, ಅವರಿಗೆ ನ್ಯಾಯಾಂಗದ ಬಗ್ಗೆ ಹೆಚ್ಚಿನ ಗೌರವವಿದೆ ಎಂದು ತಿಳಿದು ಬರುತ್ತದೆ. ಆದರೆ ಅದು ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ವಿಮರ್ಶಾತ್ಮಕ ಅಭಿಪ್ರಾಯವನ್ನು ಹೊಂದಿದೆ. ಕಳೆದ 6 ವರ್ಷಗಳಲ್ಲಿ ಈ ನ್ಯಾಯಾಲಯದಲ್ಲಿ ಏನೇನಾಗಿದೆ ಎಂದು ನಾವೆಲ್ಲರೂ ಚಿಂತೆಗೀಡಾಗಿದ್ದೇವೆ. ನ್ಯಾಯಾಲಯದ ಅನೇಕ ತೀರ್ಪುಗಳ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ, ಅದೇ ವೇಳೆ ಇನ್ನೂ ಅನೇಕ ತೀರ್ಪುಗಳ ಬಗ್ಗೆ ಹೆಮ್ಮೆಪಡುತ್ತಿಲ್ಲ,” ಎಂದು ಧವನ್ ಹೇಳಿದ್ದಾರೆ.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಯಾಚಿಸಲು ಒಪ್ಪದ ವಕೀಲ ಪ್ರಶಾಂತ್ ಭೂಷಣ್

ನ್ಯಾಯಾಲಯವು ಟೀಕೆಗಳಿಂದ ಮುಕ್ತವಾಗಿಲ್ಲ ಮತ್ತು ಜವಾಬ್ದಾರಿಯುತ ಟೀಕೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದಿರುವ ಧವನ್‌, ಸ್ಪೈಕ್ಯಾಚರ್ ಪ್ರಕರಣದಲ್ಲಿ ಇಂಗ್ಲೆಂಡಿನ ನ್ಯಾಯಾಧೀಶರುಗಳನ್ನು “ಯೂ ಫೂಲ್ಸ್” ಎಂದು ಕರೆದಿದ್ದ ‘ಡೈಲಿ ಮಿರರ್’ ಪತ್ರಿಕೆಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಶಾಂತ್ ಭೂಷಣ್ ಹೇಳಿಕೆಗಳು ನ್ಯಾಯಾಲಯದ ಸುಧಾರಣೆಯ ದೃಷ್ಟಿಯಿಂದ ಹೇಳಿರುವಂತಹುದು. ಆದ ಕಾರಣ ನ್ಯಾಯಾಲಯ ಕ್ಷಮೆ ನೀಡಬೇಕು ಎಂದು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಹೇಳಿದ್ದಾರೆ.

ಜೂನ್ 27 ಮತ್ತು 29 ರಂದು ಸುಪ್ರೀಂ ಕೋರ್ಟ್ ಮತ್ತು ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ಅವರನ್ನು ಟೀಕಿಸುವ ಎರಡು ಟ್ವೀಟ್‌ಗಳು ಭೂಷಣ್ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್‌ಗೆ ಪ್ರೇರೇಪಿಸಿತ್ತು. ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅದು ತೀರ್ಮಾನವಾಗುವವರೆಗೂ ಶಿಕ್ಷೆ ವಿಧಿಸಬಾರದು ಎಂಬ ಭೂಷಣ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

Also Read: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದ ಗಾಂಧಿ ಹೇಳಿಕೆ!

ಟ್ವೀಟ್‌ ಪ್ರಕರಣ ಮಾತ್ರವಲ್ಲದೆ ಭೂಷಣ್ ಮತ್ತೊಂದು ಪ್ರಕರಣವನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿದ್ದಾರೆ. 2009 ರಲ್ಲಿ ತೆಹಲ್ಕಾ ನಿಯತಕಾಲಿಕೆಗೆ ನೀಡಿದ ಸಂದರ್ಶನವನ್ನು ಆಧರಿಸಿದ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಕೊನೆಯ 16 ಮುಖ್ಯ ನ್ಯಾಯಮೂರ್ತಿಗಳಲ್ಲಿ ಅರ್ಧದಷ್ಟು ಜನರು ಭ್ರಷ್ಟರಾಗಿದ್ದಾರೆಂದು ಭೂಷಣ್‌ ಹೇಳಿದ್ದರು. ಈ ಕುರಿತಾಗಿ ಇಂದು ವಾದ ಮಂಡಿಸಿದ ಪ್ರಶಾಂತ್‌ ಭೂಷಣ್ ಪರ ವಕೀಲರು, ವಾಕ್‌ ಸ್ವಾತಂತ್ರ್ಯ ಮತ್ತು ನ್ಯಾಯಾಂಗ ನಿಂದನೆಯ ವಿಚಾರದಲ್ಲಿ ಆಳವಾದ ಚರ್ಚೆ ನಡೆಯುವ ಅಗತ್ಯವಿದೆ. ಹಾಗಾಗಿ ಈ ಪ್ರಕರಣವನ್ನು ಸೂಕ್ತ ಪೀಠಕ್ಕೆ ವರ್ಗಾಯಿಸಬೇಕೆಂದು ಕೇಳಿಕೊಂಡರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳು, ಈ ಪ್ರಕರಣದ ವಿಚಾರಣೆಯನ್ನು ವರ್ಗಾಯಿಸಲು ಒಪ್ಪಿಕೊಂಡರು.

Also Read: ಆರೋಪ ಪ್ರತ್ಯಾರೋಪಕ್ಕೆ ಕಾರಣವಾಯಿತು ಸಿಜೆಐ ಬೈಕ್ ಏರಿದ್ದು

Tags: ಪ್ರಶಾಂತ್ ಭೂಷಣ್ಸುಪ್ರೀಂ ಕೋರ್ಟ್
Previous Post

ಸ್ವಾತಂತ್ರ್ಯೋತ್ಸವದ ನಂತರ ಪ್ರಧಾನಿ ಮೋದಿ ಪೆಟ್ರೋಲ್ ರೇಟ್ ಎಷ್ಟು ಏರಿಸಿದ್ದಾರೆ?

Next Post

ಕ್ಯಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಸು- ಮೊಟು ದಾಖಲಿಸಿದ ಪ್ರೆಸ್ ಕೌನ್ಸಿಲ್

Related Posts

Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್‌ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡಲಾಯಿತು. ಈ ವೇಳೆ ನ್ಯಾಯಾಧೀಶರು ಕೇಳಿದ ಪ್ರಶ್ನೆಗೆ ನಾವು ಹತ್ಯೆ ಮಾಡಿಲ್ಲ ಎಂದು...

Read moreDetails

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
Next Post
ಕ್ಯಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಸು- ಮೊಟು ದಾಖಲಿಸಿದ ಪ್ರೆಸ್ ಕೌನ್ಸಿಲ್

ಕ್ಯಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಸು- ಮೊಟು ದಾಖಲಿಸಿದ ಪ್ರೆಸ್ ಕೌನ್ಸಿಲ್

Please login to join discussion

Recent News

Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada