• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪಶ್ಚಿಮ ಬಂಗಾಳ: ನಬನ್ನಾ ಚಲೋ ಬಹಿರಂಗಪಡಿಸಿದ ಬಿಜೆಪಿಯ ಆಂತರಿಕ ಭಿನ್ನಮತ

by
October 11, 2020
in ರಾಜಕೀಯ
0
ಪಶ್ಚಿಮ ಬಂಗಾಳ: ನಬನ್ನಾ ಚಲೋ ಬಹಿರಂಗಪಡಿಸಿದ ಬಿಜೆಪಿಯ ಆಂತರಿಕ ಭಿನ್ನಮತ
Share on WhatsAppShare on FacebookShare on Telegram

ಇನ್ನು ಕೇವಲ ಆರು ತಿಂಗಳ ಒಳಗಾಗಿ ಚುನಾವಣೆಯನ್ನು ಎದುರಿಸಲು ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲ ಪ್ರದರ್ಶನಕ್ಕೆ ನಿಂತಿದೆ. ಆದರೆ, ಈ ಬಲ ಪ್ರದರ್ಶನಕ್ಕೆ ಕಾರಣವಾಗಬೇಕಿದ್ದ ಪ್ರತಿಭಟನೆ ಪಕ್ಷದೊಳಗಿನ ಭಿನ್ನಮತವನ್ನು ಜಗಜ್ಜಾಹೀರಾಗಿಸಿದೆ. ಇದರೊಂದಿಗೆ ಪೊಲೀಸರ ಲಾಠಿ ಚಾರ್ಜ್‌ಪಶ್ಚಮ ಬಂಗಾಳದಲ್ಲಿ ಬಿಜೆಪಿಯ ಯೋಜನೆಯನ್ನು ತಲೆಕೆಳಗಾಗಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮೊದಲು ಬಿಜೆಪಿಯ ಯೋಜನೆಗೆ ಕೊಡಲಿ ಏಟು ನೀಡಿದ್ದು ಪಶ್ಚಿಮ ಬಂಗಾಳ ಪೊಲೀಸರು. ಪ್ರತಿಭಟನಾ ರ‍್ಯಾಲಿಯನ್ನು ಚದುರಿಸಲು ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನಿಂದಾಗಿ ಪ್ರತಿಭಟನೆಯು ಸಮರ್ಪಕವಾಗಿ ಕೊನೆಗೊಳ್ಳಲಿಲ್ಲ. ಈ ಲಾಠಿ ಚಾರ್ಜ್ ಅನ್ನು ತನ್ನ ಲಾಭಕ್ಕಾಗಿ ಬಳಸಿಕೊಳ್ಳಲು ಬಿಜೆಪಿ ಪ್ರಯತ್ನಿಸಿತಾದರೂ, ಅದು ಅಷ್ಟರ ಮಟ್ಟಿಗಿನ ಯಶಸ್ಸು ನೀಡಲಿಲ್ಲ.

ಇನ್ನು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕರ ಮುನಿಸು ಈ ಪ್ರತಿಭಟನಾ ರ‍್ಯಾಲಿಯನ್ನು ಮಂಕಾಗಿಸಿತು. ಯೋಜನೆಯ ಪ್ರಕಾರ ಬುರ್ರಾಬಜಾ಼ರ್‌, ಹೇಸ್ಟಿಂಗ್ಸ್‌, ಸೆಂಟ್ರಲ್‌ ಅವೆನ್ಯೂ ಹಾಗೂ ಸಂತ್ರಗಾಚಿಯಿಂದ ನಬನ್ನಾವರೆಗೆ ಏಕಕಾಲದಲ್ಲಿ ರ‍್ಯಾಲಿ ನಡೆಸಲು ತೀರ್ಮಾನಿಸಲಾಗಿತ್ತು.

ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಅವರು ಬುರ್ರಾಬಜಾ಼ರ್‌ನಿಂದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರು ನೇರವಾಗಿ ಇತ್ತೀಚಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮುಕುಲ್‌ ರಾಯ್‌ ಅವರೊಂದಿಗೆ ಹೇಸ್ಟಿಂಗ್ಸ್‌ ಪ್ರದೇಶದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಇಲ್ಲಿ ದಿಲೀಪ್‌ ಘೋಷ್‌ ಏಕಾಂಗಿ ನಾಯಕರಾಗಿ ತಮ್ಮ ರ‍್ಯಾಲಿಯನ್ನು ನಡೆಸಿದರು.

ಉಳಿದಂತೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರು ಹೌರಾದಲ್ಲಿದ್ದರು.

ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಕಳೆದ ನಾಲ್ಕು ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಲು ಶ್ರಮಪಟ್ಟಿದ್ದ ರಾಹುಲ್‌ ಸಿನ್ಹಾ ಅವರು, ಸಂಪೂರ್ಣ ರ‍್ಯಾಲಿಯಿಂದ ದೂರ ಉಳಿದಿದ್ದರು. ತಮ್ಮ ಗೈರಿಗೆ ಕಾರಣ ನೀಡಲು ನಿರಾಕರಿಸಿರುವ ರಾಹುಲ್‌, ತಾನು ಮನೆಯಲ್ಲಿದ್ದೆ ಎಂದಷಷ್ಟೇ ಹೇಳಿದ್ದಾರೆ. ಆದರೆ, ಚುನಾವಣೆಗೂ ಮುನ್ನ ಪಕ್ಷದ ಅತೀ ದೊಡ್ಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ಪ.ಬಂ. ಬಿಜೆಪಿಯಲ್ಲಿನ ಬಂಡಾಯವನ್ನು ತೆರೆದಿಟ್ಟಿದೆ.

ಬಿಜೆಪಿ ಮೂಲಗಲ ಪ್ರಕಾರ, ಇದೇ ಮೊದಲ ಬಾರಿಗೆ ರಾಹುಲ್‌ ಅವರು ರಾಜ್ಯ ಮಟ್ಟದ ಕಾರ್ಯಕ್ರಮವೊಂದಕ್ಕೆ ಗೈರಾಗುತ್ತಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೊಗೆಯಲಾಗಿತ್ತು. ಈ ಅಸಮಾಧಾನ ವ್ಯಕ್ತಪಡಿಸಿದ್ದ ರಾಹುಲ್‌, “40 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಬಹುಮಾನ ದೊರೆತಿದೆ. ತೃಣಮೂಲ ಕಾಂಗ್ರೆಸ್‌ನ ನಾಯಕ ಪಕ್ಷಕ್ಕೆ ಸೇರಿದ್ದಾನೆ ಎಂಬ ಕಾರಣಕ್ಕೆ ಅವರಿಗೆ ಅಧಿಕಾರ ದೊರೆತಿದೆ. ಇದಕ್ಕಿಂತ ದುರದೃಷ್ಟ ಇನ್ನೇನಿದೆ?” ಎಂದು ಹೇಳಿದ್ದರು.

ಬಿಜೆಪಿ ಹೈಕಮಾಂಡ್‌ ನ ನಿರ್ಧಾರದಿಂದ ಬೇಸತ್ತು ರಾಹುಲ್‌ ಸಿನ್ಹಾ ಬಿಜೆಪಿ ತೊರೆಯುವ ನಿರ್ಧಾರ ಮಾಡಿದ್ದಾರೆಯ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಈಗ ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಆರ್‌ಎಸ್‌ಎಸ್‌ ಬೆಂಬಲದ ದಿಲೀಪ್‌ ಘೋಷ್‌ ಬಣ ಹಾಗೂ ತೃಣಮೂಲ ಕಾಂಗ್ರೆಸ್‌ನಿಂದ ಬಂದಂತಹ ಮುಕುಲ್‌ ರಾಯ್‌ ಬಣದ ನಡುವಿನ ಸಂಘರ್ಷ ಈಗ ಬಹಿರಂಗವಾಗಿದೆ.

ತೃಣಮೂಲ ಕಾಂಗ್ರೆಸ್‌ ಮೂಲದ ನಾಯಕರ ಹಿಡಿತ:

ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮುಕುಲ್‌ ರಾಯ್‌ ಅವರು ಬಿಜೆಪಿಯಲ್ಲಿ “ತೃಣಮೂಲ ಕಾಂಗ್ರೆಸ್‌” ಬಣದ ನೇತೃತ್ವ ವಹಿಸಿಕೊಂಡಿದ್ದಾರೆ. ಇವರೊಂದಿಗೆ ಶಂಕುದೇವ್‌ ಪಾಂಡಾ, ಸಬ್ಯಸಾಚಿ ದತ್ತ, ಅರ್ಜುನ್‌ ಸಿಂಗ್‌ ಸೇರಿದಂತೆ ಇತರ ಪ್ರಮುಖ ನಾಯಕರು ಇದ್ದಾರೆ.

ಮುಕುಲ್‌ ರಾಯ್‌ ಅವರು ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವಾಗ ತಮಗೂ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಯಾವುದೇ ಸ್ಥಾನ ಸಿಗದ ಕಾರಣಕ್ಕಾಗಿ ನಿರಾಶರಾಗಿ ಮತ್ತೆ ತಮ್ಮ ಮಾತೃ ಪಕ್ಷಕ್ಕೆ ಮರಳುವ ಯೋಚನೆ ಮಾಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್‌ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. ಇದು ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಅವರಿಗಿರುವ ಹಿಡಿತವನ್ನು ಸ್ಪಷ್ಟಪಡಿಸುತ್ತದೆ. ಈ ಘಟನೆಯು ಹಲವು ಮೂಲ ಬಿಜೆಪಿ ನಾಯಕರ ಕಣ್ಣನ್ನು ಕೆಂಪಾಗಿಸಿತ್ತು.

Previous Post

ದೇಶದ ಕೃಷಿ ಇಲಾಖೆಗೆ ತುರ್ತಾಗಿ ಬೇಕಾಗಿದೆ ಸಮಗ್ರ ಅಂಕಿ ಅಂಶ ಸಂಗ್ರಹಣಾ ವ್ಯವಸ್ಥೆ

Next Post

ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada