• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳಕ್ಕೆ ಹಬ್ಬಲಿದೆಯೇ ಪೌರತ್ವದ ಕಿಚ್ಚು?

by
March 2, 2020
in ದೇಶ
0
ಪಶ್ಚಿಮ ಬಂಗಾಳಕ್ಕೆ ಹಬ್ಬಲಿದೆಯೇ ಪೌರತ್ವದ ಕಿಚ್ಚು?
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ದೇಶ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಇಲ್ಲೀವರೆಗೂ 43ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ದೆಹಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮತ್ತೆ ಯಾವುದೇ ಕ್ಷಣದಲ್ಲಿ ಗಲಭೆ ನಡೆದರೂ ನಡೆಯಬಹುದು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಭದ್ರತೆ ಹೆಚ್ಚಳ ಮಾಡಿದೆ. ದೆಹಲಿಯಲ್ಲಿ ಅಕ್ಕಪಕ್ಕದ ರಾಜ್ಯಗಳ ಜನರು ತಾತ್ಕಾಲಿಕವಾಗಿ ದೆಹಲಿ ತೊರೆದು ಸ್ವಂತ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಈ ನಡುವೆ ಒಂದೊಂದು ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ದೆಹಲಿಯ ಶಿವ್ ವಿಹಾರ ನಗರದ ಮನೆಯೊಂದರಲ್ಲಿ ಪೆಟ್ರೋಲ್ ಬಾಂಬ್ಗಳು ಪತ್ತೆಯಾಗಿವೆ. ಮನೆ ಒಳಗೆ ಜನರು ಇಟ್ಟಿಗೆ ಕಲ್ಲು, ದೊಣ್ಣೆ ಸಂಗ್ರಹ ಮಾಡಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಹಿಂಸೆಗೆ ತುತ್ತಾದ ಪ್ರದೇಶಗಳಿಗೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ಭೇಟಿ ನೀಡಿದ್ದಾರೆ. ಶಾಂತಿ ಕಾಪಾಡುವಂತೆ ಮುಸ್ಲಿಂ ಸಮುದಾಯದ ಯುವಕರಿಗೆ ಕರೆ ನೀಡಿದ್ದಾರೆ. ಇನ್ನು ಹಿಂದೂ ಸಂಘಟನೆಗಳು ದೆಹಲಿಯ ಶಾಹೀನ್ ಬಾಗ್ನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದರಿಂದು, 144 ಸೆಕ್ಷನ್ ಜಾರಿ ಮಾಡಲಾಗಿದೆ.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಜನರಿಗೆ ಗೋಲಿ ಮಾರೋ ಎಂದಿದ್ದರು ಕೇಂದ್ರ ಹಣಕಾಸು ಸಚಿವ ಅನುರಾಗ್ ಠಾಕೂರ್. ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಈ ಮಾತು ಹೇಳಿದ ಬಳಿಕ ಕೆಲವೇ ದಿನಗಳಲ್ಲಿ ಶೂಟೌಟ್ ನಡೀತು. ಆ ನಂತರ ಇಡೀ ದೆಹಲಿಯೇ ಹೊತ್ತಿ ಉರಿದಿತ್ತು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದು, ಕೋಲ್ಕತ್ತಾದಲ್ಲಿ ಬೃಹತ್ ಱಲಿ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಮಾಡಿರುವ ಅಮಿತ್ ಷಾ, ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಚಿನ್ನದ ಬಂಗಾಳ ಮಾಡಲು ಸಾಧ್ಯವೇ ಇಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡದೆ ಇರಲಿಕ್ಕೂ ಆಗಲ್ಲ ಎಂದು ಸವಾಲು ಎಸೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಕೋಲ್ಕತ್ತಾ ಭೇಟಿಗೆ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ. ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಗೋ ಬ್ಯಾಕ್ ಅಮಿತ್ ಷಾ ಪ್ಲಕಾರ್ಡ್ ತೋರಿಸುವ ಮೂಲಕ ಅಮಿತ್ ಷಾ ಭೇಟಿಯನ್ನು ವಿರೋಧಿಸಿದ್ದಾರೆ. ಇನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಏರ್ಪೋರ್ಟ್ನಲ್ಲೇ ಅಮಿತ್ ಷಾ ಭೇಟಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಅಮಿತ್ ಆಗಮಿಸುತ್ತಿದ್ದಂತೆ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯಕರ್ತರು, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಪ್ಪು ಬಾವುಟ ಹಾರಿಸಿದ್ದಾರೆ. ಜೊತೆಗೆ ಕಪ್ಪು ಬಣ್ಣದ ಬಲೂನ್ಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಿಡಿಕಾರಿದ್ದಾರೆ. ಗೋ ಬ್ಯಾಕ್ ಅಮಿತ್ ಷಾ ಎಂದು ಘೋಷಣೆ ಕೂಗಿದ್ದಾರೆ.

ದೆಹಲಿಯ ಬಳಿಕ ಅಗ್ನಿಕುಂಡವಾಗಿರುವ ಮೇಘಾಲಯದಲ್ಲಿ ಪೌರತ್ವ ತಿದ್ದುಪಡಿ ವಿರೋಧಿಸಿ ಹೋರಾಟ ನಡೆಯುತ್ತಿದೆ. ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಪೂರ್ವ ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಹಿಂಸಾಚಾರ ನಡೆದಿದ್ದು, 37 ವರ್ಷದ ಉಫಾಸ್ ಉದ್ದೀನ್ ಎಂಬ ವ್ಯಕ್ತಿಯನ್ನು ಮೂವರು ಅನಾಮಿಕರು ಹೊಡೆದು ಸಾಯಿಸಿದ್ದಾರೆ. ಇಲ್ಲೀವರೆಗೂ 8 ಜನರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆದರೂ ಅಲ್ಲಲ್ಲಿ ಹೋರಾಟಗಳು ನಡೆಯುತ್ತಲೇ ಇವೆ. ಒಟ್ಟು 11 ಜಿಲ್ಲೆಗಳ ಪೈಕಿ 6 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ರಾಜ್ದಯಾದ್ಯಂತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ದೇಹಲಿ, ಮೇಘಾಲಯದ ಬಳಿಕ ಪಶ್ಚಿಮ ಬಂಗಾಳದಲ್ಲಿ ಗಲಭೆ ಶುರುವಾಗುತ್ತಾ..? ಎನ್ನುವ ಅನುಮಾನ ಮೂಡುವಂತಾಗಿದೆ. ಯಾಕಂದರೆ, ಕೋಲ್ಕತ್ತಾದ ಶಾಹಿದ್ ಮಿನಾರ್ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದ ವೇಳೆ ಅಮಿತ್ ಷಾ ಭಾಷಣ ಮಾಡುತ್ತಿರುವಾಗ, ಬಿಜೆಪಿ ಕಾರ್ಯಕರ್ತರು ಗೋಲಿ ಮಾರೋ ಘೋಷಣೆ ಕೂಗುತ್ತಿದ್ದರು. ಈ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಇದೇ ರೀತಿ ಪ್ರಚೋದನಾ ಹೇಳಿಕೆಯಿಂದಲೇ ದೆಹಲಿಯಲ್ಲಿ ಗಲಭೆ ಶುರುವಾಗಿತ್ತು. ಇದೀಗ ಪಶ್ಚಿಮ ಬಂಗಾಳದಲ್ಲಿ ಕಾರ್ಯಕರ್ತರೇ ಗೋಲಿ ಮಾರೋ ಎಂದು ಘೋಷಣೆ ಕೂಗಿರುವುದು ಮುಂದಿನ ಘಟನೆ ಬಗ್ಗೆ ಅನುಮಾನ ಸೃಷ್ಟಿಸುತ್ತಿದೆ.

Tags: Amith Shaanti-CAA protestersಪಶ್ಚಿಮ ಬಂಗಾಳಪೌರತ್ವದ ಕಿಚ್ಚು
Previous Post

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು; ಭಾರತದಲ್ಲಿ ಈವರೆಗೆ ನೇಣಿಗೆ ಕೊರಳು ಕೊಟ್ಟವರ ಇತಿಹಾಸವೇನು?

Next Post

ಮನುಕುಲಕ್ಕೆ ಮಾರಕವಾಗಿರುವ ವೈರಸ್‌ಗಳು ಯಾವುವು ಗೊತ್ತೇ?

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಮನುಕುಲಕ್ಕೆ ಮಾರಕವಾಗಿರುವ ವೈರಸ್‌ಗಳು ಯಾವುವು ಗೊತ್ತೇ?

ಮನುಕುಲಕ್ಕೆ ಮಾರಕವಾಗಿರುವ ವೈರಸ್‌ಗಳು ಯಾವುವು ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada