• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಜೆಟ್‌ ಅಧಿವೇಶನಕ್ಕೆ ಬಂದ ಶಾಸಕಿ ಎಂಟು ತಿಂಗಳ ಗರ್ಭಿಣಿ! 

by
March 1, 2020
in ದೇಶ
0
ಬಜೆಟ್‌ ಅಧಿವೇಶನಕ್ಕೆ ಬಂದ ಶಾಸಕಿ ಎಂಟು ತಿಂಗಳ ಗರ್ಭಿಣಿ! 
Share on WhatsAppShare on FacebookShare on Telegram

ಎರಡು ವರ್ಷಗಳ ಹಿಂದೆ, ಆಸ್ಟ್ರೇಲಿಯಾದ ಸಂಸದೆ ಎರಡು ತಿಂಗಳ ಮಗುವಿಗೆ ಸಂಸತ್‌ನಲ್ಲಿ ಎದೆಹಾಲು ಕುಡಿಸಿದ ಫೋಟೋ ಜಗತ್ತಿನಾದ್ಯಂತ ಮೆಚ್ಚುಗೆ ಗಳಿಸಿತ್ತು, ಕೆಲಸದ ಬಗ್ಗೆ ಆಕೆಗೆ ಇರುವ ಬದ್ಧತೆಯನ್ನ ಎಲ್ಲರೂ ಕೊಂಡಾಡಿದ್ದರು, ಆಸ್ಟ್ರೇಲಿಯಾದ ಗ್ರೀನ್‌ ಪಾರ್ಟಿಯಿಂದ ಆಯ್ಕೆಯಾಗಿದ್ದ ಲಾರಿಸ್ಸಾ ವಾಟರ್ಸ್‌ ಗೆ ಅಂದು ಮಹತ್ವದ ದಿನವಾಗಿತ್ತು, ಹಸಿರು ನೀತಿ ಕುರಿತಾದ ಮಸೂದೆಯನ್ನ ತನ್ನ ಪಕ್ಷ ಮಂಡಿಸಿತ್ತು, ಮಸೂದೆಗೆ ಈಕೆಯ ಮತ ಬಹಳ ಮುಖ್ಯವಾಗಿತ್ತು, ಹಾಗಾಗಿ ತನ್ನ ಎರಡು ತಿಂಗಳ ಮಗಳು ಆಲಿಯಾ ಜಾಯ್‌ನೊಂದಿಗೆ ಸಂಸತ್‌ ಕಲಾಪದಲ್ಲಿ ಪಾಲ್ಗೊಂಡಿದ್ದಳು.

ADVERTISEMENT

ಇದಾಗಿ ವರ್ಷ ಕಳೆದಿತ್ತು, ನಾವೆಲ್ಲಾ ನೋಡುತ್ತಾ ಕುಳಿತ್ತಿದ್ವಿ, ನಮ್ಮ ರಾಜ್ಯದಲ್ಲಿ ಸರ್ಕಾರ ಏರುಪೇರಾಗಿ ಕಲಾಪಕ್ಕೆ ಹದಿನೇಳು ಶಾಸಕರು ಗೈರಾದರು, ಕೊನೆಗೆ ಸರ್ಕಾರವನ್ನೇ ಕೆಡುವಿಕೊಂಡು ಹೊಸ ಸರ್ಕಾರ ರಚಿಸಿದರು, ಈಗ ಹೊಸ ಹುರುಪಿನೊಂದಿಗೆ ಬಜೆಟ್‌ ಅಧಿವೇಶನಕ್ಕೆ ಕಾತರರಾಗಿದ್ದಾರೆ, ಇದರಲ್ಲಿ ಎಷ್ಟು ಶಾಸಕರು ಪಾಲ್ಗೊಳ್ಳುತ್ತಾರೆ, ಬಜೆಟ್‌ ಮೇಲೆ ಸುದೀರ್ಘ ಚರ್ಚೆಯಲ್ಲಿ ಎಷ್ಟು ಮಂದಿ ಇರುತ್ತಾರೋ ಗೊತ್ತಿಲ್ಲ, ಆದರೆ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಮಹಿಳಾ ಶಾಸಕಿಯೊಬ್ಬರು ಎಂಟು ತಿಂಗಳ ಗರ್ಭೀಣಿಯಾಗಿದ್ದರೂ ಬಜೆಟ್‌ ಅಧಿವೇಶನಕ್ಕೆ ಆಗಮಿಸಿ ಹೊಸ ಭಾಷ್ಯ ಬರೆದಿದ್ದಾರೆ.

ನಮಿತಾ ಮುಂಡದ ಮಹಾರಾಷ್ಟ್ರದ ಭೀಡ್‌ ಜಿಲ್ಲೆಯ ಕೈಜ್‌ ತಾಲೂಕಿನ ಶಾಸಕಿ, ಎಂಟು ತಿಂಗಳ ಗರ್ಭಿಣಿ. ಬಜೆಟ್‌ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಸಾಕಷ್ಟು ಸಮಸ್ಯೆಗಳನ್ನ ಸದನದ ಗಮನಕ್ಕೆ ತರಬೇಕಿದೆ, ಈ ಅಧಿವೇಶನ ಬಿಟ್ಟರೆ ಮುಂಗಾರು ಅಧಿವೇಶನಕ್ಕೆ ಬರಲು ಸಾಧ್ಯವಾಗದೇ ಇರಬಹುದು ಎಂಬ ಕಾರಣಕ್ಕೆ ಅಧಿವೇಶನಕ್ಕೆ ಹಾಜರಾಗುತ್ತಿದ್ದಾರೆ. ಸಂಸತ್‌ ಅಧಿವೇಶನ ಇರಬಹುದು, ವಿಧಾನಸಭಾ ಅಧಿವೇಶನಗಳಿರಬಹುದು, ಮೊದಲ ದಿನದಿಂದಲೇ ಚಕ್ಕರ್‌ ಹಾಕುವ ಜನಪ್ರತಿನಿಧಿಗಳ ಮಧ್ಯೆ ಮಹಿಳಾ ಶಾಸಕಿಯೊಬ್ಬರ ಮಾದರಿ ಕೆಲಸ ಎಲ್ಲರಿಗೂ ಅನುಕರಣೀಯವಾಗಬೇಕು.

ಮಾಧ್ಯಮಗಳೂ ನಮಿತಾರನ್ನ ಪ್ರಶ್ನೆ ಮಾಡಿವೆ. ಇದಕ್ಕೆ ಆಕೆ ಪ್ರತಿಕ್ರಿಯಿಸಿ, ಈ ಅಧಿವೇಶನ ನನಗೆ ಬಹಳ ಮುಖ್ಯವಾದದ್ದು, ನನ್ನ ಕ್ಷೇತ್ರದ ಸಮಸ್ಯೆಗಳನ್ನ ನಾನು ಹೇಳಿ ಕೊಳ್ಳಲೇಬೇಕು. ಹೌದು ನಾನು ಗರ್ಭಿಣಿಯಾಗಿದ್ದೇನೆ ಆದರೆ ಅದು ಮಹಾವ್ಯಾದಿ ಎಂದೇಕೆ ಪರಿಗಣಿಸಬೇಕು, ಸಮಯ ಸಿಕ್ಕಾಗ ಸಭಾಂಗಣದ ಹೊರಗೆ ವಾಕ್‌ ಮಾಡುತ್ತೇನೆ, ಸರಿಯಾದ ಸಮಯಕ್ಕೆ ಊಟ ಮಾಡುತ್ತೇನೆ, ಚಕ್ಕರ್‌ ಹಾಕುವಷ್ಟು ಸಮಸ್ಯೆ ಏನಿಲ್ಲ, ಏಪ್ರಿಲ್‌ ನಲ್ಲಿ ನಾನು ತಾಯಿಯಾಗುತ್ತೇನೆ, ಮುಂದಿನ ಮಾನ್‌ಸೂನ್‌ ಅಧಿವೇಶನಕ್ಕೆ ನನಗೆ ಭಾಗವಹಿಸಲು ಆಗದೇ ಇರಬಹುದು ಹಾಗಾಗಿ ನಾನು ಬರಲೇಬೇಕಿತ್ತು ಎನ್ನುತ್ತಾರೆ. ನಮಿತಾ ಶಿಶುಹತ್ಯೆಗೆ ಕುಖ್ಯಾತಿ ಪಡೆದ ಭೀಡ್ ಜಿಲ್ಲೆಯವರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿಯಿಂದ ಬಿಜೆಪಿಗೆ ಪಲ್ಲಟಗೊಂಡು ವಿಧಾನಸಭೆಗೆ ಆಯ್ಕೆಯಾಗಿದ್ದರು, ಈಕೆಯ ತಾಯಿ ಎನ್‌ಸಿಪಿಯಿಂದ ಮಂತ್ರಿಯಾಗಿದ್ದವರು.

ನಮಿತಾ ಕಥೆ ಇಷ್ಟಾದರೆ, ನಮ್ಮ ಪುರುಷ ಶಾಸಕರು ತದ್ವಿರುದ್ಧ, ಇನ್ನೇನು ಮಾರ್ಚ್‌ ೫ ಬಂದೇ ಬಿಡ್ತು, ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪನವರ ಬಹು ನಿರೀಕ್ಷಿತ ಬಜೆಟ್‌ ಮಂಡನೆಗೆ ಚಾತಕ ಪಕ್ಷಿಗಳಂತೆ ಜನರೂ ಕಾದು ಕುಳಿತಿದ್ದಾರೆ, ಎಷ್ಟು ಜನ ಅಧಿವೇಶನದಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುತ್ತಾರೆ, ಎಷ್ಟು ಗೈರಾಗುತ್ತಾರೆ, ಎಷ್ಟು ಜನರು ನಿದ್ದೆ ಮಾಡುತ್ತಾರೋ ಗೊತ್ತಿಲ್ಲ, ಈಗಾಗಲೇ ದೊರೆಸ್ವಾಮಿ ಮೇಲೆ ಬಸನಗೌಡ ಪಾಟೀಲ ಯತ್ನಾಳ ನೀಡಿರುವ ಹೇಳಿಕೆಯನ್ನ ಬಲವಾಗಿ ಹಿಡಿದುಕೊಂಡಿರುವ ಕಾಂಗ್ರೆಸ್‌ ಈಗಾಗಲೇ ಸದನ ಭಹಿಷ್ಕರಿಸುವ ಮಾತನ್ನಾಡಿದೆ. ಸದನದ ಪ್ರಾಮುಖ್ಯತೆಯನ್ನ ಕಳೆದುಕೊಂಡು ಸಿಎಎ, ಮೋದಿ, ದೊರೆಸ್ವಾಮಿ ಎಂದು ಕೆಸರೆರಚಾಡಲು ಸಿದ್ಧರಿರುವ ನಮ್ಮ ಶಾಸಕರನ್ನ ನೋಡಿದಾಗ ತುಂಬು ಗರ್ಭಿಣಿ ನಮಿತಾ ನೆನಪಾಗದೇ ಇರಲಾರಳು.

Tags: budgetNamitha MundadaSessionನಮಿತಾ ಮುಂಡದಬಜೆಟ್‌ ಅಧಿವೇಶನ
Previous Post

ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸಿದ ಬಿಜೆಪಿಯಿಂದ ಈಗ ತೇಪೆ ಹಚ್ಚುವ ಪ್ರಯತ್ನ 

Next Post

ಸಾಮಾಜಿಕ ತಾಣಗಳಲ್ಲಿ ನಕಲಿ ಸುದ್ದಿಗಳದ್ದೇ ಕಾರು ಬಾರು

Related Posts

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
November 3, 2025
0

  ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಗೆ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ...

Read moreDetails

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಸಾಮಾಜಿಕ ತಾಣಗಳಲ್ಲಿ ನಕಲಿ ಸುದ್ದಿಗಳದ್ದೇ ಕಾರು ಬಾರು

ಸಾಮಾಜಿಕ ತಾಣಗಳಲ್ಲಿ ನಕಲಿ ಸುದ್ದಿಗಳದ್ದೇ ಕಾರು ಬಾರು

Please login to join discussion

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada