• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಗಲಭೆ: ದಲಿತ vs ಮುಸ್ಲಿಂ ಆಯಾಮ ನೀಡಿದ ಬಿಎಲ್ ಸಂತೋಷ್‌ಗೆ ಜ಼ಮೀರ್ ಕ್ಲಾಸ್

by
August 13, 2020
in ಕರ್ನಾಟಕ
0
ಬೆಂಗಳೂರು ಗಲಭೆ: ದಲಿತ vs ಮುಸ್ಲಿಂ ಆಯಾಮ ನೀಡಿದ ಬಿಎಲ್ ಸಂತೋಷ್‌ಗೆ ಜ಼ಮೀರ್ ಕ್ಲಾಸ್
Share on WhatsAppShare on FacebookShare on Telegram

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಾಂತ್ಯದಲ್ಲಿ ನಡೆದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಬಿಬಿಎಂಪಿ ಚುನಾವಣೆಯ ಹಿನ್ನಲೆಯಲ್ಲಿ, ಫೇಸ್‌ಬುಕ್‌ ಪೋಸ್ಟ್‌ ವಿಚಾರ ದೊಂಬಿ ಸ್ವರೂಪ ಪಡೆಯಲು ರಾಜಕೀಯ ಶಕ್ತಿಗಳು ಕಾರಣವಾಗಿರಬಹುದೆಂಬ ಗುಮಾನಿ ಸಾರ್ವಜನಿಕ ವಲಯದಲ್ಲಿದೆ.

ಗಲಭೆಯ ಬಳಿಕ, ʼಹೆಣ ರಾಜಕೀಯʼ ಮಾಡುವಲ್ಲಿ ನುರಿತವಾಗಿರುವ ಬಿಜೆಪಿ ಗಲಭೆಯನ್ನು ʼದಲಿತರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಹೆಣಗುತ್ತಿದೆ.

True to his & his organization’s nature, @blsanthosh loves adding fuel to the fire. He has always used social media to poison society rather than douse any flame. Would like to tell him,that his Delhi type plans won’t work in #NammaBengaluru.
Be more responsible.#BangloreRiots https://t.co/8JpAwL3QlW

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 12, 2020


ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌, ʼಅಖಂಡ ಶ್ರೀನಿವಾಸ್‌ ಅವರು ದಲಿತಾರಗಿರುವುದರಿಂದ ಕಾಂಗ್ರೆಸ್‌ ಅವರಿಗೆ ಬೆಂಬಲ ನೀಡುತ್ತಿಲ್ಲʼ ಎಂಬರ್ಥದಲ್ಲಿ ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ʼಅಲ್ಪಸಂಖ್ಯಾತರು ಮಾಡುವ ದೊಂಬಿಗಳಿಗೆ ಕಾಂಗ್ರೆಸ್‌ ಬೆಂಬಲ ನೀಡುತ್ತಿದೆʼ ಎಂದಿದ್ದಾರೆ.

ಬಿ ಎಲ್‌ ಸಂತೋಷ್‌ ಈ ನಡೆ, ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಚಿತ್ತಾಪುರ್‌ ಶಾಸಕ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ. ಬಿ ಎಲ್‌ ಸಂತೋಷ್‌ ಹಾಗೂ ಅವರ ಸಂಘಟನೆ ಯಾವತ್ತಿಗೂ ಬೆಂಕಿಗೆ ಇಂಧನ ಸುರಿಯುವ ಕೆಲಸವನ್ನು ಮಾಡುತ್ತದೆ. ಅವರು ಸಾಮಾಜಿಕ ಜಾಲತಾಣವನ್ನು ಸಮಾಜಕ್ಕೆ ವಿಷ ಹಂಚಲು ಬಳಸುತ್ತಾರೆ ಎಂದಿದ್ದಾರೆ.

ಇನ್ನು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯ ಈ ವರಸೆಗೆ ಪ್ರತಿಕ್ರಿಯಿಸಿದ ಚಾಮರಾಜಪೇಟೆ ಶಾಸಕ ಝಮೀರ್‌ ಅಹಮದ್‌ ಖಾನ್‌, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ? ಎಂದು ಬಿ ಎಲ್‌ ಸಂತೋಷ್‌ ಗೆ ಪ್ರಶ್ನಿಸಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿಯವರು ದಲಿತ ಎಂಬ ಕಾರಣಕ್ಕೆ ನಮ್ಮ ಪಕ್ಷದಲ್ಲಿ ರಕ್ಷಣೆ ನೀಡುತ್ತಿಲ್ಲ ಎಂಬ ಬಿ ಎಲ್‌ ಸಂತೋಷ್‌ ಅವರ ಆರೋಪ ಕೇವಲ ರಾಜಕೀಯ ಲಾಭಕ್ಕಷ್ಟೇ ಸೀಮಿತ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸೋದರತೆ, ಸಮಾನತೆ ಸಾರುವ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವವರು ನೀವೇ ಅಲ್ಲವೇ?

ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತ ಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ದಿ ಹೇಳಿದ್ದೀರಾ @blsanthosh ಅವರೇ? 3/7

— B Z Zameer Ahmed Khan (@BZZameerAhmedK) August 13, 2020


ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತ ಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ದಿ ಹೇಳಿದ್ದೀರಾ?

ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ವಿಧಾನಸಭೆ, ವಿಧಾನ ಪರಿಷತ್, ಬಿಬಿಎಂಪಿ, ಪಂಚಾಯತ್ ರಾಜ್ ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದೀರ? ಹೋಗಲಿ ಸಾಮಾಜಿಕ ನ್ಯಾಯದ ಪರವಾಗಿ ಒಮ್ಮೆಯಾದರೂ ಮಾತಾಡಿದ್ದೀರ? ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳುವುದು ಒಳಿತು ಎಂದು ಝಮೀರ್‌ ಖಾನ್‌ ಮಾತಿನ ಚಾಟಿ ಬೀಸಿದ್ದಾರೆ.

ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಾಧಾರಿತ, ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ನಮ್ಮದು ಸಮಾನತೆ, ಜಾತ್ಯತೀತತೆಯಲ್ಲಿ ನಂಬಿಕೆಯಿರುವ ಪಕ್ಷ. ಕಳೆದ 60 ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರ ಮನಸ್ಸಿನಲ್ಲಿದೆ. ಯಾವ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತತೆಯ ಪರವಿದೆ ಎಂಬುದು ಜನತೆಗೆ ಚೆನ್ನಾಗಿಯೇ ಗೊತ್ತು. ಕೋಮು ಗಲಭೆಗಳ ಮೂಲಕ ಮತ ಧ್ರುವೀಕರಣ ಮಾಡುವ ಬಿಜೆಪಿಗೆ ನಮ್ಮ ಪಕ್ಷವನ್ನು ಪ್ರಶ್ನಿಸುವ ನೈತಿಕತೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಲ್ಲದೆ, ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ ಎಂದು ಬಿ ಎಲ್‌ ಸಂತೋಷ್‌ ಅವರಿಗೆ ಝಮೀರ್‌ ಖಾನ್‌ ಮನವಿ ಮಾಡಿಕೊಂಡಿದ್ದಾರೆ.

ಮಾನ್ಯ @blsanthosh ಅವರೇ, ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ. 7/7

— B Z Zameer Ahmed Khan (@BZZameerAhmedK) August 13, 2020


ADVERTISEMENT
Tags: ಝಮೀರ್‌ ಅಹಮದ್‌ ಖಾನ್‌ಬಿ ಎಲ್ ಸಂತೋಷ್ಬೆಂಗಳೂರು ಗಲಭೆ
Previous Post

EIA2020; ಕರಡು, ಸೂಟ್-ಬೂಟ್ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ: ಶ್ರೀನಿವಾಸ್ ಬಿ.ವಿ

Next Post

ಭೀಕರ ಗಾಳಿ- ಮಳೆಗೆ ಕೊಡಗಿನ ಹಾನಿ ಪ್ರಮಾಣ ಏನು?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಭೀಕರ ಗಾಳಿ- ಮಳೆಗೆ ಕೊಡಗಿನ ಹಾನಿ ಪ್ರಮಾಣ ಏನು?

ಭೀಕರ ಗಾಳಿ- ಮಳೆಗೆ ಕೊಡಗಿನ ಹಾನಿ ಪ್ರಮಾಣ ಏನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada