• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಕ್ಕಳ ಮೇಲೆ ಹಿಂದಿ ಮತ್ತು ಸಂಸ್ಕೃತ ಹೇರಿಕೆ ಸಲ್ಲದು – TS ನಾಗಾಭರಣ

by
November 19, 2020
in ಕರ್ನಾಟಕ
0
ಮಕ್ಕಳ ಮೇಲೆ ಹಿಂದಿ ಮತ್ತು ಸಂಸ್ಕೃತ ಹೇರಿಕೆ ಸಲ್ಲದು - TS ನಾಗಾಭರಣ
Share on WhatsAppShare on FacebookShare on Telegram

ಹಿಂದಿನಿಂದಲೂ ಕೇಂದ್ರ ಸರ್ಕಾರ ಆಯಾ ರಾಜ್ಯದ ಸ್ಥಳೀಯ ಸರ್ಕಾರಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಲೇ ಬಂದಿದೆ. ಇನ್ನು ಅಧಿಕಾರದಲ್ಲಿರುವ ಉತ್ತರ ಭಾರತದವರಂತೂ ತಮ್ಮ ಭಾಷೆಯನ್ನು ದಕ್ಷಿಣ ಭಾರತದ ಮೇಲೆ ಹೇರಲು ಸತತವಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಕೇಂದ್ರ ಹಿಂದಿ ಪರ ನೀತಿಯಿಂದ ಸ್ಥಳೀಯ ಭಾಷೆಗಳು ಬಡವಾಗುತ್ತಿವೆ ಎಂಬ ವಾದ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಈಗಲೂ ಇದು ಪುನರಾವರ್ತಿತವಾಗಿದೆ.

ADVERTISEMENT

ಬ್ಯಾಂಕ್, ಶಿಕ್ಷಣ, ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿಯೂ ಹಿಂದಿಯದ್ದೇ ಕಾರುಬಾರು ಕಳೆದೈದು ವರ್ಷಗಳಿಂದ ಆರಂಭವಾಗಿದೆ. ಹಾಗಾಗಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಸ್ಥಳೀಯ ರಾಜ್ಯ ಸರ್ಕಾರಗಳು ಹೋರಾಟ ಮಾಡುತ್ತಲೇ ಇವೆ. ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳದಲ್ಲಿ ಎಷ್ಟೇ ಹಿಂದಿ ಹೇರಿಕೆ ವಿರುದ್ಧ ಹೋರಾಟ ಮಾಡುತ್ತಿದ್ದರೂ ಕೇಂದ್ರ ಕ್ಯಾರೇ ಎನ್ನುತ್ತಿಲ್ಲ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿದೆ. ನಾವು ಎಷ್ಟೇ ಕೂಗಾಡಿದರೂ ಕೇಂದ್ರ ತನ್ನ ಪಾಡಿಗೆ ಸ್ಥಳೀಯರ ಮೇಲೆ ಹಿಂದಿ ಹೇರಿಕೆ ಬಾಣ ಬಿಡುತ್ತಲೇ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೀಗಿರುವಾಗಲೇ ಆಡಳಿತದಲ್ಲಿ ಸಂಪೂರ್ಣ ಕನ್ನಡ ಅನುಷ್ಠಾನ ಕುರಿತಂತೆ ಬುಧವಾರ ವಿಧಾನಸೌಧದಲ್ಲಿ ಕೇಂದ್ರೀಯ ವಿದ್ಯಾಲಯ ಸಂಘಟನೆಯೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್‌. ನಾಗಾಭರಣ ಅವರು ವರ್ಚುವಲ್‌ ಸಭೆ ನಡೆಸಿದರು. ಈ ವೇಳೆ ರಾಜ್ಯದ ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಕಡೆಗಣಿಸುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳು 2015ರ ಕನ್ನಡ ಭಾಷಾ ಕಲಿಕಾ ಅಧಿ ನಿಯಮ ಅಳವಡಿಸಿಕೊಳ್ಳಬೇಕು. ಇದರ ಅನ್ವಯ ಕನ್ನಡವನ್ನು ದ್ವಿತೀಯ ಭಾಷೆಯಾಗಿ ಬೋಧಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್‌. ನಾಗಾಭರಣ ತಾಕೀತು ಮಾಡಿದರು.

ಕೇಂದ್ರೀಯ ವಿದ್ಯಾಲಯಕ್ಕೆ ಸೇರುವ ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದೆ. ಹೀಗಿದ್ದರೂ ಬಲವಂತವಾಗಿ ಹಿಂದಿ, ಸಂಸ್ಕೃತವನ್ನು ಕಲಿಯುವಂತೆ ಹೇರಿಕೆ ಮಾಡಲಾಗುತ್ತಿದೆ. ಹೀಗೆ ಹಿಂದಿ ಹೇರಿಕೆ ಮಾಡುವುದು ಒಳ್ಳೆಯದಲ್ಲ ಎಂದರು.

ಇನ್ನು ಸಭೆಯಲ್ಲಿ ಶಿಕ್ಷಣ ತಜ್ಞ ಡಾ. ವಿ. ಪಿ ನಿರಂಜನಾ ಆರಾಧ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ ಮುರಳೀಧರ, ಕೇಂದ್ರೀಯ ವಿದ್ಯಾಲಯ ಸಂಘಟನೆಯ ಉಪ ಆಯುಕ್ತರಾದ ಡಾ. ಎನ್‌ ವಸಂತ್‌, ಅಧ್ಯಕ್ಷರ ಅಪ್ತ ಕಾರ್ಯದರ್ಶಿ ಡಾ. ವೀರಶೆಟ್ಟಿ ಮತ್ತಿತರರು ಇದ್ದರು

Tags: TS ನಾಗಾಭರಣಸಂಸ್ಕೃತ ಹೇರಿಕೆಹಿಂದಿ ಹೇರಿಕೆ
Previous Post

ಕಂಬಳಿ ಉದ್ಯಮ ಸಂಕಷ್ಟದಲ್ಲಿ; ಗದಗ್ ಜಿಲ್ಲೆಯ ನೇಕಾರರಿಗೆ ತಪ್ಪದ ಪರದಾಟ

Next Post

“ಕರ್ನಾಟಕ ಅವರಪ್ಪನದ್ದಲ್ಲ, ನಮ್ಮದು” – ಮಹಾರಾಷ್ಟ್ರ DCMಗೆ ರಾಜ್ಯ BJP ಸಚಿವರ ತಿರುಗೇಟು

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
"ಕರ್ನಾಟಕ ಅವರಪ್ಪನದ್ದಲ್ಲ

"ಕರ್ನಾಟಕ ಅವರಪ್ಪನದ್ದಲ್ಲ, ನಮ್ಮದು" - ಮಹಾರಾಷ್ಟ್ರ DCMಗೆ ರಾಜ್ಯ BJP ಸಚಿವರ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada