• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಾನವ ಗುರಾಣಿ, ಮೋದಿ ಸಮರ್ಥಕ ಜನರಲ್ ರಾವತ್ ಗೆ ಸಿಡಿಎಸ್ ಹುದ್ದೆ ಉಡುಗೊರೆ

by
December 31, 2019
in ದೇಶ
0
ಮಾನವ ಗುರಾಣಿ
Share on WhatsAppShare on FacebookShare on Telegram

ಅಧಿಕಾರಸ್ಥರ ನಡೆ, ನುಡಿ ಹಾಗೂ ನಿಲುವುಗಳನ್ನು ಸಮರ್ಥಿಸುವವರಿಗೆ ಪ್ರತಿಷ್ಠಿತ ಸ್ಥಾನಮಾನ ಸಿಗುವುದು ಸಾಮಾನ್ಯ. ಇದಕ್ಕೆ ನರೇಂದ್ರ ಮೋದಿ ಸರ್ಕಾರವೂ ಹೊರತಲ್ಲ‌ ಎಂಬುದು ಮತ್ತೆಮತ್ತೆ ಸಾಬೀತಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹೋರಾಟ ಮಾಡುತ್ತಿರುವ “ವಿದ್ಯಾರ್ಥಿಗಳು ದಾಂದಲೆ ಸೃಷ್ಟಿಸುತ್ತಿದ್ದು, ಅವರನ್ನು ಮುನ್ನಡೆಸುತ್ತಿರುವವರು ನಾಯಕರಲ್ಲ” ಎಂಬರ್ಥದ ವಿರೋಧ ಪಕ್ಷಗಳನ್ನು ಟೀಕಿಸುವ ಹೇಳಿಕೆ ನೀಡುವ ಮೂಲಕ ಸಾರ್ವಜನಿಕ‌ ಆಕ್ರೋಶಕ್ಕೆ‌ ಗುರಿಯಾಗಿದ್ದ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಮೋದಿ‌ ಸರ್ಕಾರವು ಭೂ, ವಾಯು ಹಾಗೂ ನೌಕಾ ಸೇನೆಯನ್ನೊಳಗೊಂಡ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಹುದ್ದೆ ಕಲ್ಪಿಸಿದೆ.

ನರೇಂದ್ರ ಮೋದಿ ಸರ್ಕಾರಕ್ಕೆ ತಮ್ಮ ನಿಷ್ಠೆ ಶರಣಾಗಿಸಿದ್ದ ಭೂಸೇನೆಯ 27ನೇ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲ ಸಿಡಿಎಸ್ ಆಗಿ ನೇಮಕವಾಗಿದ್ದಾರೆ. ಈ ಮೂಲಕ ಸ್ವಾಮಿನಿಷ್ಠೆಗೆ ದೊಡ್ಡ ಉಡುಗೊರೆಯನ್ನೇ ಪಡೆದಿದ್ದಾರೆ. 15 ಲಕ್ಷ ಸಿಬ್ಬಂದಿಯನ್ನೊಳಗೊಂಡಿರುವ ಭೂಸೇನೆಯ ಮುಖ್ಯಸ್ಥರಾದ ರಾವತ್ ಅವರು ಮಂಗಳವಾರ (ಡಿಸೆಂಬರ್ 31) ನಿವೃತ್ತರಾಗುತ್ತಿದ್ದಾರೆ. ಅಂದೇ ಭೂ, ವಾಯು ಹಾಗೂ ನೌಕಾ ಪಡೆಗಳ ಉಸ್ತುವಾರಿ ವಹಿಸಲಿರುವ ಸಿಡಿಎಸ್ ಆಗಿ ಉತ್ತರಾಖಂಡದ ರಾವತ್ ಅಧಿಕಾರವಹಿಸಿಕೊಳ್ಳಲಿದ್ದಾರೆ. ಸೇನೆಯ ಸೇವಾ ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಮೋದಿ ಸರ್ಕಾರವು ರಾವತ್ ಗೆ ಹೊಸ ವರ್ಷದ ಉಡುಗೊರೆಯನ್ನು‌ ಒಂದು ದಿನ ಮುಂಚಿತವಾಗಿ ನೀಡಿದೆ.

#BipinRawat becomes the first CDS (chief of Defence Staff) one day before his retirement from the post of ARMY chief.
Is it a reward for his political line taken as the ARMY CHIEF? The question is Why him and not someone else?

— Sakshi Joshi (@sakshijoshii) December 30, 2019


ಪಾಕಿಸ್ತಾನ ವಿರುದ್ಧದ 1999ರಲ್ಲಿ ನಡೆದಿದ್ದ ಕಾರ್ಗಿಲ್ ಯುದ್ದದ ಸಂದರ್ಭದಲ್ಲಿ ಭಾರತೀಯ ಸೇನೆಯ ಭೂ, ವಾಯು ಹಾಗೂ ನೌಕಾ ಪಡೆಗಳ ಸಮನ್ವಯದ ಕೊರತೆಯಿಂದ ಸಾಕಷ್ಟು ನಷ್ಟವಾಗಿತ್ತು. ಆ ಸಂದರ್ಭದಲ್ಲಿ ತ್ರಿವಳಿ ಪಡೆಗಳ ಮುಖ್ಯಸ್ಥರೊಬ್ಬರು ಇದ್ದರೆ ಸಾಕಷ್ಟು ಅನಾಹುತ ತಪ್ಪಿಸಬಹುದಿತ್ತು ಎಂಬ ಅಂಶ ಚರ್ಚೆಗೆ ಒಳಗಾಗಿತ್ತು. ಅಲ್ಲದೇ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಭಿನ್ನ ಸೇನಾ ಪಡೆಗಳಿಗೆ ಒಬ್ಬರೇ ಮುಖ್ಯಸ್ಥರಿದ್ದು, ಭಾರತದಲ್ಲೂ ಸಿಡಿಎಸ್ ಅಗತ್ಯವಿದೆ ಎಂದು ಹೇಳಲಾಗಿತ್ತು. ಅಂದಿ‌ನ ವಾಜಪೇಯಿ ಸರ್ಕಾರದ ಅವಧಿಯಿಂದ ನನೆಗುದಿಗೆ ಬಿದ್ದಿದ್ದ ಸಿಡಿಎಸ್ ಹುದ್ದೆ ಸೃಷ್ಟಿಸುವ ತೀರ್ಮಾನವನ್ನು ನರೇಂದ್ರ ಮೋದಿ‌ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಘೋಷಿಸಿದ್ದರು.‌ ಅಂತೆಯೇ ಆ ಹುದ್ದೆ ಸೃಷ್ಟಿಸಿ, ತಮ್ಮ‌ ಬೆಂಬಲಿಗನನ್ನು ಆ ಸ್ಥಾನಕ್ಕೆ ನೇಮಕ ಮಾಡುವ ಮೂಲಕ ಸೇನೆ ಹಾಗೂ ರಾಜಕಾರಣದ ನಡುವಿನ ಸೂಕ್ಷ್ಮ ಗೆರೆಯನ್ನು ಮೋದಿ ಅಳಿಸಿ ಹಾಕಿದ್ದಾರೆ.

Don’t jump into conclusions . While framing the constitution checks and balances have been put in place so that none could be Supreme. Let’s not dilute them and take things for granted . https://t.co/mCwc5Y7cls

— Pramod Madhwaraj (@PMadhwaraj) December 30, 2019


ರಾವತ್ ರಾಜಕೀಯ ಹೇಳಿಕೆ ಹಾಗೂ ಆನಂತರದ ಬೆಳವಣಿಗೆಗಳ ಬಗ್ಗೆ ಸೇನೆಯ ಮಾಜಿ ಅಧಿಕಾರಿಗಳು ಹಾಗೂ ಸಂವಿಧಾನ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಪಾಕಿಸ್ತಾನದಲ್ಲಿ ಸೇನೆಯ ದಬ್ಬಾಳಿಕೆ ನೆನಪಿಸುವ ಮೂಲಕ ಎಚ್ಚರಿಕೆಯ ಹೆಜ್ಜೆ ಇಡಬೇಕಾದ ಅಗತ್ಯವನ್ನು ಮೋದಿ ಸರ್ಕಾರಕ್ಕೆ ಒತ್ತಿ ಹೇಳಿದ್ದಾರೆ. ಆದರೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಮಾನವ ಬಾಂಬ್ ಅಳವಡಿಸಿಕೊಂಡಿದ್ದ ಭಯೋತ್ಪಾದಕನೊಬ್ಬ ಕೇಂದ್ರೀಯ ಮೀಸಲು ಪಡೆ ಪೊಲೀಸರನ್ನು ಒತ್ತೊಯ್ಯುತ್ತಿದ್ದ ವಾಹನಕ್ಕೆ‌ ತನ್ನ ವಾಹನವನ್ನು ಡಿಕ್ಕಿ ಹೊಡೆಸಿ 40ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ.‌ ಇದಕ್ಕೆ ಪ್ರತೀಕಾರವಾಗಿ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಾಲಾಕೋಟ್ ನಲ್ಲಿ ಏರ್ ಸ್ಟ್ರೈಕ್ ನಡೆಸಿದ ಸೇನೆಯ ಶ್ರಮವನ್ನು ತನ್ನ‌ ಸಾಧನೆ ಹಾಗೂ ದೇಶದ ಭದ್ರತೆಗೆ ಬಿಜೆಪಿ ಅಗತ್ಯ ಎಂದು ಹೇಳುವ ಮೂಲಕ ಸೇನಾ ಪಡೆಗಳನ್ನು ಮಧ್ಯವಿಟ್ಟು ರಾಷ್ಟ್ರೀಯತೆಯ ಉನ್ಮಾದದ ಮೂಲಕ ಮೋದಿಯವರು ಚುನಾವಣೆ ಗೆದ್ದಿದ್ದು ಎಲ್ಲರಿಗೂ ತಿಳಿದಿದೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಭಾರತೀಯ ಸೇನೆಯನ್ನು ಮೋದಿ‌ ಸೇನೆ” ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದನ್ನು ನೆನೆಪಿಸಿಕೊಳ್ಳಬಹುದಾಗಿದೆ. ಸೇನೆಯನ್ನು ರಾಜಕೀಯಗೊಳಿಸುವ ಕೆಲಸವನ್ನು ಮೋದಿಯವರು ಬಹುಹಿಂದೆಯೇ ಮಾಡಿದ್ದಾರೆ. ಈಗಿನ ಬೆಳವಣಿಗಗಳು ಅವುಗಳ ಮುಂದುವರಿದ ಭಾಗವಷ್ಟೆ ಎನ್ನುವ ಆರೋಪವನ್ನು ಸುಲಭಕ್ಕೆ ತಳ್ಳಿಹಾಕಲಾಗದು.

A sensitive democracy like India shouldn't have gone for a Chief of Defense Staff – Modi by appointing a 'Sanghi in Uniform' to that post has brought real fear that Army can play a decisive role in Indian politics when it goes tough for Modi! https://t.co/EnyoJfkDkj

— Ashok Swain (@ashoswai) December 30, 2019


ADVERTISEMENT

ಸ್ವಾತಂತ್ರ್ಯ ನಂತರ ಸೇನೆಯನ್ನು ನಾಗರಿಕ ಆಡಳಿತದಲ್ಲಿ ಭಾಗಿಯಾಗದಂತೆ ನೋಡಿಕೊಳ್ಳುವ ಕಟ್ಟುನಿಟ್ಟಿನ ನೀತಿಯನ್ನು ಭಾರತ ಅನುಸರಿಸಿಕೊಂಡು‌ ಬಂದಿದೆ.‌ ಆದರೆ, ಮೋದಿಯವರು ತಮ್ಮ ಅವಧಿಯಲ್ಲಿ ತಟಸ್ಥ ಹಾಗೂ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಬೇಕಾದ ಸಂಸ್ಥೆಗಳ ನಡುವಿನ ಅಂತರವನ್ನು ತೆಗೆದು ಹಾಕುವ ಹಾದಿ ಹಿಡಿಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಶಿಥಿಲಗೊಳಿಸಲು ನಾಂದಿ‌ಯಾಗಬಹುದು. ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಸಂಸ್ಥೆಗಳ ಮುಖ್ಯಸ್ಥರು ಅಧಿಕಾರಸ್ಥರ ಪರವಾಗಿ ಬಹಿರಂಗವಾಗಿ ಮಾತನಾಡುವುದು. ಅದಕ್ಕೆ ಪ್ರತಿರೂಪವಾಗಿ ಮಹತ್ವದ ಹುದ್ದೆ ಪಡೆಯುವುದು ಏನನ್ನು ಸೂಚಿಸುತ್ತದೆ? ಮುಂದೊಮ್ಮೆ ಇದೇ ಪರಂಪರೆ ಮುಂದುವರೆದು ನಾಗರಿಕ ಸರ್ಕಾರವನ್ನು ತನ್ನ ವಶಕ್ಕೆ ಪಡೆಯುವ ಹಂತಕ್ಕೆ ಸೇನೆ ಬಲವಾದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಎಲ್ಲಿರುತ್ತದೆ? ಇದು ನೆರೆಯ ಪಾಕಿಸ್ತಾನದ ಮಾದರಿಗೆ ಅವಕಾಶ ಮಾಡಿಕೊಟ್ಟಂತಾಗುವುದಿಲ್ಲವೇ? ಪಾಕ್ ನಲ್ಲಿ ಸೇನೆಯ ಬೆಂಬಲವಿಲ್ಲದೇ ಚುನಾಯಿತ ಸರ್ಕಾರ ಕೆಲಸ ಮಾಡುವ ಪರಿಸ್ಥಿತಿಯಿಲ್ಲ. ಇಂದಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಂದೊಂದು ದಿನ ಸೇನೆಯು ತನಗೆ ಬೇಕಾದ ಪಕ್ಷವನ್ನು ಅಧಿಕಾರಕ್ಕೆ ತರುವ ವ್ಯವಸ್ಥೆ ಭಾರತದಲ್ಲಿ ವಾಸ್ತವವಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ಜನರ ಸೇವೆಗಷ್ಟೇ ಸೀಮಿತವಾದ ಸೇನೆಯನ್ನು ರಾಜಕಾರಣ ಮುಕ್ತವಾಗಿರುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಕರ್ತವ್ಯವಾಗಬೇಕು ಎಂಬುದು ತಜ್ಞರ ಸಲಹೆ.

ಇನ್ನು, ರಾವತ್ ವಿವಾದಗಳಿಗೆ ಮರಳುವುದಾದರೆ ಅವರಷ್ಟು ರಾಜಕೀಯ ಹೇಳಿಕೆಗಳನ್ನು ನೀಡಿದ ಪ್ರಚಾರಪ್ರಿಯ ಸೇನಾ ಮುಖ್ಯಸ್ಥ ಇರಲಾರರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಕಲ್ಲಿನೇಟು ತಪ್ಪಿಸಿಕೊಳ್ಳಲು ಕಾಶ್ಮೀರಿ ಯುವಕನನ್ನು ಸೇನಾ ಜೀಪ್ ನ ಮುಂಭಾಗಕ್ಕೆ ಕಟ್ಟಿ ‘ಮಾನವ ಗುರಾಣಿ’ಯಾಗಿಸಿ ಸುತ್ತಿದ್ದ ಮೇಜರ್ ಲೀತುಲ್ ಗೊಗೊಯ್ ಅವರನ್ನು ಸಮರ್ಥಿಸುವ ಮೂಲಕ ರಾವತ್ ಅವರು ಮಾನವ ಹಕ್ಕುಗಳ ಸಂಘಟನೆಗಳ ಟೀಕೆಗೆ ಗುರಿಯಾಗಿದ್ದರು. ರಾವತ್ ನಡೆಯನ್ನು ಕಟುವಾಗಿ ಟೀಕಿಸಿದ್ದ ಶಿಕ್ಷಣ ತಜ್ಞ ಪಾರ್ಥಾ ಚಟರ್ಜಿ ಅವರು ತಮ್ಮ ಲೇಖನವೊಂದರಲ್ಲಿ ಜಲಿಯನ್ ವಾಲಾಬಾಗ್ ಘಟನೆ ಸಮರ್ಥಿಸಿದ್ದ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ಗೆ ಜನರಲ್ ರಾವತ್ ಹೋಲಿಸಿದ್ದನ್ನು‌ ಸ್ಮರಿಸಬಹುದಾಗಿದೆ. 1919ರಲ್ಲಿ ಅಮೃತಸರದ ಜಲಿಯನ್ ವಾಲಾಬಾಗ್ ನಲ್ಲಿ ನಿಶ್ಯಸ್ತ್ರರಾದ 350ಕ್ಕೂ ಹೆಚ್ಚು ಮಂದಿಗೆ ಗುಂಡಿಟ್ಟುಕೊಲ್ಲುವ ಆದೇಶ ಹೊರೆಡಿಸಿದ್ದ ಜನರಲ್ ಡಯರ್, ಮಾನವ ಕುಲ‌ ಬೆಚ್ಚಿಬೀಳುವ ರಕ್ತಪಾತಕ್ಕೆ ಕಾರಣವಾಗಿದ್ದನು.

Tags: Amit Shahbipin rawatBJP GovernmentCDSfirst tri-services chiefIndian ArmyNarendra ModiYogi Adityanathಅಮಿತ್ ಶಾನರೇಂದ್ರ ಮೋದಿಬಿಜೆಪಿ ಸರ್ಕಾರಬಿಪನ್ ರಾವತ್ಭಾರತೀಯ ಸೇನೆಯೋಗಿ ಆದಿತ್ಯನಾಥ್ರಕ್ಷಣಾ ಸಿಬ್ಬಂದಿ ಮುಖ್ಯಸ್ಥಸಿಡಿಎಸ್
Previous Post

ಮನೆ ಖರೀದಿ ಮಾಡ್ತೀರಾ? ಇನ್ಮುಂದೆ ಶೇ.7.90 ಬಡ್ಡಿದರಕ್ಕೆ ಗೃಹ ಸಾಲ!

Next Post

ಕೊಡವರಿಗೆ ಬುಡಕಟ್ಟು ಸ್ಥಾನಮಾನ: ಪರ-ವಿರೋಧದ ವಿವಾದ

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಕೊಡವರಿಗೆ ಬುಡಕಟ್ಟು ಸ್ಥಾನಮಾನ: ಪರ-ವಿರೋಧದ ವಿವಾದ

ಕೊಡವರಿಗೆ ಬುಡಕಟ್ಟು ಸ್ಥಾನಮಾನ: ಪರ-ವಿರೋಧದ ವಿವಾದ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada