• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಓಲೈಕೆ ಭರದಲ್ಲಿ ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದ ಕಂಗನಾ

by
September 21, 2020
in ದೇಶ
0
ಮೋದಿ ಓಲೈಕೆ ಭರದಲ್ಲಿ ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದ ಕಂಗನಾ
Share on WhatsAppShare on FacebookShare on Telegram

ಭಾನುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬ್‌ನಾದ್ಯಂತ ಆಂದೋಲನ ನಡೆಸುತ್ತಿರುವ ರೈತರನ್ನು ಟೀಕಿಸುವ ಅವಸರದಲ್ಲಿ ವಿವಾದಾತ್ಮಕ ನಟಿ ಕಂಗನಾ ರಾನಾವತ್ ಪ್ರತಿಭಟನಾನಿರತಾ ರೈತರನ್ನು ಪರೋಕ್ಷವಾಗಿ ಭಯೋತ್ಪಾದಕರಿಗೆ ಹೋಲಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಭಾನುವಾರ ಸಂಜೆ ಮಾಡಿದ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಟ್ವೀಟ್ ಅನ್ನು ಉಲ್ಲೇಖಿಸಿದ ಕಂಗನಾ, ಪ್ರತಿಭಟನಕಾರರನ್ನು ”ಸಿಎಎ ಕಾರಣದಿಂದಾಗಿ ಯಾವುದೇ ನಾಗರಿಕರ ಪೌರತ್ವ ಕಳೆದುಹೋಗದಿದ್ದರೂ ರಕ್ತಪಾತದಲ್ಲಿ ತೊಡಗಿದ ಭಯೋತ್ಪಾದಕರಂತೆ” ಎಂದು ಬಣ್ಣಿಸಿದ್ದಾರೆ.

ಕಂಗನಾರ ಈ ಟ್ವೀಟ್‌ ಬಾರೀ ವಿವಾದ ಸೃಷ್ಟಿಸಿದ್ದು ಬಿಜೆಪಿಯನ್ನು ಹಾಗೂ ನರೇಂದ್ರ ಮೋದಿಯನ್ನು ಓಲೈಸಲು ರೈತರನ್ನು ಹಾಗೂ ಸಿಎಎ ವಿರೋಧಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆಂದು ಸಾಮಾಜಿಕ ಜಾಲತಾಣ ಬಳಕೆದಾರರು ಕಿಡಿಕಾರಿದ್ದಾರೆ.

प्रधानमंत्री जी कोई सो रहा हो उसे जगाया जा सकता है, जिसे ग़लतफ़हमी हो उसे समझाया जा सकता है मगर जो सोने की ऐक्टिंग करे, नासमझने की ऐक्टिंग करे उसे आपके समझाने से क्या फ़र्क़ पड़ेगा? ये वही आतंकी हैं CAA से एक भी इंसान की सिटिज़ेन्शिप नहीं गयी मगर इन्होंने ख़ून की नदियाँ बहा दी. https://t.co/ni4G6pMmc3

— Kangana Ranaut (@KanganaTeam) September 20, 2020


ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಯ ವಿರುದ್ಧ ಪ್ರತಿಪಕ್ಷಗಳು ಮಾತ್ರವಲ್ಲದೆ, ಆರ್‌ಎಸ್‌ಎಸ್‌ ಅಡಿಯಲ್ಲಿ ಕಾರ್ಯ ನಿರ್ವಹಿಸುವ ರೈತ ಸಂಘಟನೆ ʼಭಾರತೀಯ ಕಿಸಾನ್‌ ಸಂಘ್‌ʼ ವಿರೋಧಿಸಿದೆ, ಅಲ್ಲದೆ ಎನ್‌ಡಿಎ ಮೈತ್ರಿಕೂಟದ ಸಚಿವೆಯೊಬ್ಬರೂ ಖುದ್ದು ರಾಜಿನಾಮೆ ನೀಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ರೈತರು ಸಹಸ್ರ ಸಂಖ್ಯೆಯಲ್ಲಿ ಪ್ರತಿಭಟನೆ ಸಲ್ಲಿಸುತ್ತಿದ್ದಾರೆ. ಹೀಗಿರುವಾಗ ಬಾಲಿವುಡ್‌ ನಟಿ ಕಂಗನಾ ಹೊಸ ಕೃಷಿ ನೀತಿಗೆ ಪೇಲವ ಬೆಂಬಲ ವ್ಯಕ್ತ ಪಡಿಸಿದ್ದು ಮಾತ್ರವಲ್ಲ, ಪ್ರತಿಭಟನಾಕಾರರನ್ನು ಭಯೋತ್ಪಾದಕರೆಂದು ಸಂಬೋಧಿಸಿರುವುದು ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಬಿಜೆಪಿಯ ಓಲೈಕೆಯಲ್ಲಿ ತೊಡಗಿದ ಕಂಗನಾ

ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು ಅದನ್ನು ಗಮನದಲ್ಲಿಟ್ಟು ಕಂಗನಾ ಬಿಜೆಪಿ ಪರವಾಗಿ ಬ್ಯಾಟ್‌ ಬೀಸುತ್ತಿದ್ದಾರೆಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಶಿವಸೇನೆಯನ್ನು ಟೀಕಿಸಿದ್ದ ಕಂಗನಾ, ಮುಂಬೈಯನ್ನು ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು. ಇದೀಗ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನಾಕಾರರನ್ನು ಭಯೋತ್ಪಾದಕರಿಗೆ ಹೋಲಿಸಿದ ಕಂಗನಾ, ʼತನ್ನ ಭಾಷೆಯನ್ನು ಬಿಜೆಪಿ ಪಕ್ಷಕ್ಕೆ ಒಗ್ಗುವ ರೀತಿಯಲ್ಲಿʼ ಸಂಪೂರ್ಣವಾಗಿ ಪರಿವರ್ತಿಸಿಕೊಂಡಿದ್ದಾರೆ.

ಕಂಗನಾ, ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆಂಬ ಆರೋಪ ಹೊಸದೇನಲ್ಲ. ಅತಿಭಾವುಕತನದಿಂದ ಬಳಲುತ್ತಿದ್ದ ಎನ್ನಲಾದ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸುತ್ತೇನೆಂದು ಅಖಾಡಕ್ಕಿಳಿದ ಕಂಗನಾ, ಸಾಮಾಜಿಕ ಜಾಲತಾಣದಲ್ಲಿ ಉಂಟು ಮಾಡಿದ ಸಂಚಲನವನ್ನು ಬಿಜೆಪಿ ಬಿಹಾರ ಚುನಾವಣೆಗೆ ಫಲಪ್ರದವಾಗಿ ಬಳಸಿಕೊಳ್ಳುತ್ತಿದೆ. ಕೇಂದ್ರ ಸರ್ಕಾರದ ವೈಫಲ್ಯವನ್ನು ಮರೆಮಾಚಲು ʼಬಿಜೆಪಿ ಕೃಪಾಪೋಷಿತ ಮಾಧ್ಯಮಗಳುʼ ಈ ವಿಷಯವನ್ನೇ ಪ್ರೈಮ್‌ ಟೈಮ್‌ ಚರ್ಚೆಯಲ್ಲಿಟ್ಟಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯ ವಿರುದ್ಧ ಕೆಂಡಕಾರುವ ಕಂಗನಾರ ಕಛೇರಿಯ ಭಾಗವನ್ನು ಕೆಲವು ದಿನಗಳ ಹಿಂದೆ ಮುಂಬೈ ಪಾಲಿಕೆ ಅನಧಿಕೃತ ಎಂದು ತೆರವುಗೊಳಿಸಿತ್ತು. ಮುಂಬೈ ಪಾಲಿಕೆ ಈ ಹಿಂದೆಯೂ ಹಲವು ಬಾಲಿವುಡ್‌ ನಟ, ನಟಿಯರ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ಇತಿಹಾಸ ಇದೆಯಾದರೂ, ಕಂಗನಾರ ಕಟ್ಟಡ ತೆರವುಗೊಳಿಸುವಿಕೆಯನ್ನು ಶಿವಸೇನೆಯ ಧ್ವೇಷ ರಾಜಕಾರಣವೆಂದು ವಿಶ್ಲೇಷಿಸಲಾಗಿತ್ತು.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿಲ್ಲ- ಕಂಗನಾ

ಸಾಮಾಜಿಕ ಜಾಲತಾಣದಲ್ಲಿ ನಟಿ ಕಂಗನಾರ ಟ್ವೀಟ್‌ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಸ್ಪಷ್ಟನೆ ನೀಡಿದ ಕಂಗನಾ, ತಾನು ರೈತರನ್ನು ಭಯೋತ್ಪಾದಕರೆಂದು ಕರೆದೇ ಇಲ್ಲ, ಹಾಗೆ ಕರೆದಿರುವುದನ್ನು ಸಾಬೀತುಪಡಿಸಿದರೆ ತಾನು ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.

जैसे श्री कृष्ण की नारायणी सेना थी, वैसे ही पप्पु की भी अपनी एक चंपू सेना है जो की सिर्फ़ अफ़वाहों के दम पे लड़ना जानती है, यह है मेरा अरिजिनल ट्वीट अगर कोई यह सिद्ध करदे की मैंने किसानों को आतंकी कहा, मैं माफ़ी माँगकर हमेशा केलिए ट्वीटर छोड़ दूँगी https://t.co/26LwVH1QD9

— Kangana Ranaut (@KanganaTeam) September 21, 2020


ADVERTISEMENT

ಕಂಗನಾ ಇಷ್ಟು ನಿರ್ಭೀತರಾಗಿ ಸವಾಲು ಹಾಕಲೂ ಒಂದು ಕಾರಣವಿದೆ. ಯಾಕೆಂದರೆ ಕಂಗನಾ ನೇರವಾಗಿ ರೈತರನ್ನು ಭಯೋತ್ಪಾದಕರೆಂದು ಕರೆಯದೆ, ಸಿಎಎ ಹೋರಾಟಗಾರರನ್ನು ಭಯೋತ್ಪಾದಕರೆಂದು ಕರೆದಿದ್ದಾರೆ ಹಾಗೂ ಆ “ಭಯೋತ್ಪಾದಕರಿಗೆ” ರೈತ ಹೋರಾಟಗಾರರನ್ನು ಹೋಲಿಸಿದ್ದಾರೆ. ಇದು ಗಣಿತದಲ್ಲಿ ಬರುವ ಟ್ರಾನ್ಸಿಶನ್‌ ಸೂತ್ರ (if A=B and B=C then C=A) ದಂತಿದೆ. ಒಟ್ಟಾರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟದಲ್ಲಿ ತೊಡಗಿರುವವರನ್ನು ಭಯೋತ್ಪಾದರೆಂದು ಕರೆದಿರುವ ಕಂಗನಾ ಮೋದಿ ಹಾಗೂ ಬಿಜೆಪಿಯ ಓಲೈಕೆಯಲ್ಲಿ ತೊಡಗಿರುವುದು ಗಣಿತದ ನಿಯಮಗಳಂತೆ ಸುಳ್ಳಾಗಿಸಲು ಸಾಧ್ಯವಾಗದ ನಿಚ್ಚಳ ಸತ್ಯ.

Tags: ಕಂಗನಾ ರಾಣಾವತ್ಕೃಷಿ ಮಸೂದೆನರೇಂದ್ರ ಮೋದಿಬಿಜೆಪಿ ಪಕ್ಷ
Previous Post

ರಾಜ್ಯಸಭೆಯಲ್ಲಿ ನೂತನ ಕೃಷಿ ಮಸೂದೆ ಅಂಗೀಕಾರ, ವಿಪಕ್ಷಗಳ ವಿರೋಧ!

Next Post

ಕಾರ್ಮಿಕ ಸಾವಿನ ಮಾಹಿತಿ ಬಳಿಕ ಈಗ ಸೀರೋ ಸರ್ವೆ ಡೇಟಾ ಮುಚ್ಚಿಟ್ಟ ಚೌಕಿದಾರ್ ಸರ್ಕಾರ!

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಕಾರ್ಮಿಕ ಸಾವಿನ ಮಾಹಿತಿ ಬಳಿಕ ಈಗ ಸೀರೋ ಸರ್ವೆ ಡೇಟಾ ಮುಚ್ಚಿಟ್ಟ ಚೌಕಿದಾರ್ ಸರ್ಕಾರ!

ಕಾರ್ಮಿಕ ಸಾವಿನ ಮಾಹಿತಿ ಬಳಿಕ ಈಗ ಸೀರೋ ಸರ್ವೆ ಡೇಟಾ ಮುಚ್ಚಿಟ್ಟ ಚೌಕಿದಾರ್ ಸರ್ಕಾರ!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada