• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವೈಜಾ಼ಗ್ ವಿಷಾನಿಲ ದುರಂತ: ಸಮಗ್ರ ವರದಿ ಸಲ್ಲಿಸಿದ ಉನ್ನತಾಧಿಕಾರ ಸಮಿತಿ

by
July 7, 2020
in ದೇಶ
0
ವೈಜಾ಼ಗ್ ವಿಷಾನಿಲ ದುರಂತ: ಸಮಗ್ರ ವರದಿ ಸಲ್ಲಿಸಿದ ಉನ್ನತಾಧಿಕಾರ ಸಮಿತಿ
Share on WhatsAppShare on FacebookShare on Telegram

ಸುಮಾರು 12 ಜನರನ್ನು ಬಲಿ ಪಡೆದಿದ್ದ ವೈಜಾ಼ಗ್‌ನ ವಿಷಾನಿಲ ದುರಂತದ ಕುರಿತ ಸಮಗ್ರ ವರದಿಯನ್ನು ಆಂಧ್ರ ಪ್ರದೇಶದ ಉನ್ನತಾಧಿಕಾರ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದೆ. ದುರ್ಬಲ ಸುರಕ್ಷಣಾ ಶಿಷ್ಟಚಾರ ಹಾಗೂ ದೋಷಪೂರಿತ ತುರ್ತು ಸ್ಪಂದನಾ ಪ್ರಕ್ರಿಯೆಗಳು ಈ ಅವಘಡಕ್ಕೆ ಕಾರಣವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ADVERTISEMENT

ಮೇ 7ರಂದು ಎಲ್‌ಜಿ ಪಾಲಿಮರ್ಸ್‌ ಎಂಬ ಕಂಪೆನಿಯ ಕೈಗಾರಿಕಾ ಘಟಕದಿಂದ ಸ್ಟೈರೀನ್‌ ಎಂಬ ವಿಷಾನಿಲವು ಸೋರಿಕೆಯಾಗಿತ್ತು. ಈ ಅನಿಲ ಸೋರಿಕೆ ದೇಶಾದ್ಯಂತ ಸಾಕಷ್ಟು ಸುದ್ದಿಯನ್ನು ಕೂಡಾ ಮಾಡಿತ್ತು. ಸುಮಾರು 12 ಜನರು ಸಾವನ್ನಪ್ಪಿ 585 ಜನರು ತೀವ್ರವಾಗಿ ಅಸ್ವಸ್ಥರಾಗಿದ್ದರು. ಈ ದುರ್ಘಟನೆಯ ಹಿಂದಿನ ಕಾರಣವನ್ನು ತಿಳಿಯಲು ಆಂದ್ರ ಪ್ರದೇಶ ಸರ್ಕಾರವು ಒಂದು ಉನ್ನತಾಧಿಕಾರ ಸಮಿತಿಯನ್ನು ರಚಿಸಿ ತನಿಖೆಯನ್ನು ಶೀಘ್ರವಾಗಿ ಮುಗಿಸುವಂತೆ ಆದೇಶ ನೀಡಿತ್ತು.

ಕಂಪೆನಿಯ ಆಡಳಿತದ ನಿರ್ಲಕ್ಷ್ಯದಿಂದ ಕೈಗಾರಿಕಾ ಘಟಕದಲ್ಲಿ ಸುರಕ್ಷತೆಯು ಸಾಕಷ್ಟು ದುರ್ಬಲವಾಗಿತ್ತು. ಅಲ್ಲಿನ ಕಾರ್ಮಿಕರಲ್ಲಿ ಸುರಕ್ಷತೆಯ ಕುರಿತು ಸಾಕಷ್ಟು ಅರಿವು ಇರಲಿಲ್ಲ. ಇದರಿಂದಾಗಿ ಈ ಘಟನೆಯು ಸಂಭವಿಸಿದೆ, ಎಂದು ಅರಣ್ಯ ಮತ್ತು ಪರಿಸರ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿಯಾದ ನೀರಭ್‌ ಕುಮಾರ್‌ ಪ್ರಸಾದ್‌ ಅವರ ನೇತೃತ್ವದ ಸಮಿತಿಯು ವರದಿಯಲ್ಲಿ ತಿಳಿಸಿದೆ.

ಸುಮಾರು 4‌,000 ಪುಟಗಳ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಆಂಧ್ರ ಮುಖ್ಯಮಂತ್ರಿ ವೈ ಎಸ್‌ ಜಗನ್‌ಮೋಹನ್‌ ರೆಡ್ಡಿ ಅವರಿಗೆ ಸಲ್ಲಿಸಲಾಗಿದೆ.

“ಎಲ್‌ಜಿ ಕೈಗಾರಿಕ ಘಟಕದ M6 ಟ್ಯಾಂಕ್‌ನಿಂದ ವಿಷಾನಿಲ ಸೋರಿಕೆಯಾಗಿದೆ. ಅಪಾಯಕಾರಿ ರಾಸಾಯನಿಕಗಳ ತಯಾರಿಕೆ, ಸಂಗ್ರಹ ಹಾಗು ಆಮದು ನಿಯಮ 1989ರ ಅಡಿಯಲ್ಲಿ ಇದೊಂದು ಗುರುತರವಾದ ಅಪಘಾತವಾಗಿದೆ. ಕಳಪೆ ಅನಿಲ ಸಂಗ್ರಾಹಕಗಳು, ಅಸಮರ್ಪಕ ಶೀತಗೃಹಗಳು, ಸುರಕ್ಷಾ ಕ್ರಮಗಳ ಅಸಮರ್ಪಕ ನಿರ್ವಹಣೆಯಿಂದಾಗಿ ಈ ಘಟನೆ ನಡೆದಿದೆ” ಎಂದು ನೀರಭ್‌ ಕುಮಾರ್‌ ಹೇಳಿದ್ದಾರೆ.

ಇನ್ನು ಅಲ್ಲಿನ ಕಾರ್ಮಿಕರಿಗೆ ಸ್ಟೈರೀನ್‌ ಅನಿಲದ ರಾಸಾಯನಿಕ ಗುಣಗಳ ಕುರಿತು ಮಾಹಿತಿ ಇಲ್ಲದಿರುವ ಅಂಶವನ್ನು ಕೂಡಾ ಸಮಿತಿಯು ವರದಿಯಲ್ಲಿ ದಾಖಲಿಸಿದೆ. ಇನ್ನು ಘಟಕದಲ್ಲಿ 36 ಅಲಾರ್ಮ್‌ ವ್ಯವಸ್ಥೆಗಳಿದ್ದರೂ, ಯಾವುದೂ ಕೂಡಾ ಬಳಸಲ್ಪಟ್ಟಿಲ್ಲ. ಒಂದು ವೇಳೆ ಅವುಗಳನ್ನು ಬಳಸಿದ್ದೇ ಆದಲ್ಲಿ ಸುತ್ತಮುತ್ತಲಿನ ಜನರನ್ನು ಎಚ್ಚರಿಸಿ ಹೆಚ್ಚಿನ ಸಾವುನೋವುಗಳನ್ನು ತಡೆಯಬಹುದಿತ್ತು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಜಗನ್‌ ಅಗತ್ಯವಿದ್ದಲ್ಲಿ ಈಗಿರುವ ಕಾಯ್ದೆಗಳಿಗೆ ತಿದ್ದುಪಡಿಯನ್ನು ತರಲಾಗುವುದು. ಇನ್ನು ಸಮಿತಿಯ ಶಿಫಾರಸ್ಸಿನಂತೆ ಕೈಗಾರಿಕೆಗಳನ್ನು ಹಸಿರು ಮತ್ತು ಬಿಳಿ ಎಂದು ವಿಂಗಡಿಸಿ ಅವುಗಳನ್ನು ಜನವಸತಿ ಪ್ರದೇಶದಿಂದ ದೂರವಿರಿಸಲಾಗುವುದು” ಎಂದು ಹೇಳಿದ್ದಾರೆ.

Tags: ವಿಶಾಖಪಟ್ಟಣಂ
Previous Post

ಕೋವಿಡ್‌-19: ಸಿಎಂ ಭೇಟಿ ಮಾಡಿದ ಕೇಂದ್ರ ತಂಡ

Next Post

ರಾಮರಾಜ್ಯದ ಮುಖವಾಡದಲ್ಲಿ ಯೋಗಿಯ ʼಗೂಂಡಾರಾಜ್ʼ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ರಾಮರಾಜ್ಯದ ಮುಖವಾಡದಲ್ಲಿ ಯೋಗಿಯ ʼಗೂಂಡಾರಾಜ್ʼ

ರಾಮರಾಜ್ಯದ ಮುಖವಾಡದಲ್ಲಿ ಯೋಗಿಯ ʼಗೂಂಡಾರಾಜ್ʼ

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada