ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ, ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಕುರಿತು ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು @BSYBJP ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ. 1/2#Pressmeet pic.twitter.com/spm4Ni7O4L
— Siddaramaiah (@siddaramaiah) November 25, 2020
ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು. 2/2#Pressmeet
— Siddaramaiah (@siddaramaiah) November 25, 2020