• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸುಲ್ತಾನ್ ಚಿತ್ರಕ್ಕೆ ಟಿಪ್ಪು ವಿರೋಧಿಗಳ ಅಡ್ಡಿಯ ಹಿಂದಿನ ಅಜ್ಞಾನ

by
September 27, 2019
in ದೇಶ
0
ಸುಲ್ತಾನ್ ಚಿತ್ರಕ್ಕೆ ಟಿಪ್ಪು ವಿರೋಧಿಗಳ ಅಡ್ಡಿಯ ಹಿಂದಿನ ಅಜ್ಞಾನ
Share on WhatsAppShare on FacebookShare on Telegram

ಟಿಪ್ಪು ಸುಲ್ತಾನ್ ಹೆಸರೇ `ಹಿಂದುತ್ವವಾದಿಗಳ’ ನೆಮ್ಮದಿ ಕೆಡಿಸುತ್ತಿದೆ. ತಮಿಳುನಾಡಿನ ದಿಂಡಿಗಲ್ ಎಂಬಲ್ಲಿ ‘ಸುಲ್ತಾನ್’ ಎಂಬ ಹೆಸರಿನ ಸಿನಿಮಾ ಚಿತ್ರೀಕರಣ ಮಾಡುತ್ತಿರುವುದಕ್ಕೆ ಅಲ್ಲಿನ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಮುನ್ನಾಣಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಮೈಸೂರು ಹುಲಿ ಟಿಪ್ಪು ಸುಲ್ತಾನ್ ಇತಿಹಾಸ ಹೊಂದಿರುವ ಸಿನಿಮಾ ಎಂದು ತಪ್ಪಾಗಿ ಅರ್ಥೈಸಿಕೊಂಡು ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು.

ADVERTISEMENT

ತಮಿಳಿನ ಕಾರ್ತಿಕ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಸುಲ್ತಾನ್ ತಮಿಳು ಚಿತ್ರೀಕರಣ ಆಗುತ್ತಿರುವ ವೇಳೆ ಸ್ಥಳಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಚಿತ್ರೀಕರಣ ನಿಲ್ಲಿಸುವಂತೆ ಆಕ್ಷೇಪ ವ್ಯಕ್ತಪಡಿಸಿದರು. ಮೈಸೂರು ಸಾಮ್ರಾಜ್ಯದ ಅಧಿಪತಿಯಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಸುಲ್ತಾನ್ ಕುರಿತಾದ ಸಿನಿಮಾ ಇದ್ದಲ್ಲ ಎಂದು ಚಿತ್ರೀಕರಣ ತಂಡ ಹಲವು ಬಾರಿ ವಿವರಿಸಿದರೂ ಪ್ರತಿಭಟನಾಕಾರರು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಗತ್ಯಂತರವಿಲ್ಲದೆ, ದುಬಾರಿ ಚಿತ್ರೀಕರಣ ಸಾಮಾಗ್ರಿಗಳನ್ನು ಚಿತ್ರ ತಂಡ ಅಲ್ಲಿಂದ ಸಾಗಿಸಿ ಚಿತ್ರೀಕರಣ ನಿಲ್ಲಿಸಿತು.

ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ ಚಿತ್ರ ತಂಡವು ಚಿತ್ರೀಕರಣದ ಕೊನೆಯ ಹಂತದಲ್ಲಿತ್ತು. ಆ ಸಂದರ್ಭದಲ್ಲಿ ಹತ್ತಿರದ ಗ್ರಾಮದಿಂದ ಆಗಮಿಸಿದ ಪ್ರತಿಭಟನಕಾರರು ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದರು. ಚಿತ್ರನಿರ್ದೇಶಕ ಭಾಗ್ಯರಾಜ್ ಕಣ್ಣನ್ ಅವರು ದಿಂಡಿಗಲ್ ಜಿಲ್ಲೆಯ ಪಾರಂಪರಿಕ ತಾಣವೊಂದರಲ್ಲಿ ತಮ್ಮ ಸುಲ್ತಾನ್ ಸಿನಿಮಾದ ಅಂತಿಮ ಹಂತದ ದೃಶ್ಯಗಳ ಚಿತ್ರೀಕರಿಸುತ್ತಿದ್ದರು. ಚಿತ್ರೀಕರಣವು ಹಲವು ದಿವಸಗಳಿಂದ ಅದೇ ಸ್ಥಳದಲ್ಲಿ ನಡೆಯುತ್ತಿತ್ತು. ಸುಲ್ತಾನ್ ಎಂಬ ಹೆಸರೇ ಪ್ರತಿಭಟನಾಕಾರರ ಪ್ರಚೋದನೆಗೆ ಸಾಕಾಗಿತ್ತು. ಸಾಲದ್ದಕ್ಕೆ, ಸ್ಥಳೀಯ ಪತ್ರಿಕೆಯೊಂದು ಚಿತ್ರದ ಹೆಸರು ಸುಲ್ತಾನ್ ಅಲ್ಲ ಟಿಪ್ಪು ಸುಲ್ತಾನ್ ಎಂದು ಬರೆದಿತ್ತು. ಇದರಿಂದಾಗಿ ಪ್ರತಿಭಟನೆ ನಡೆಸಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿದರು ಎನ್ನಲಾಗಿದೆ.

ತದನಂತರ ಸೋಶಿಯಲ್ ಮಿಡಿಯಾದಲ್ಲಿ ಘಟನೆ ಬಗ್ಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರಾದ ಡ್ರೀಮ್ ವಾರಿಯರ್ ಪಿಕ್ಚರ್ಸ್ ಒಂದು ವಿಚಾರದ ಬಗ್ಗೆ ಭಿನ್ನಮತವಿದ್ದರೆ ಸಿನಿಮಾ ಚಿತ್ರೀಕರಣಕ್ಕೆ ಅಡ್ಡಿಪಡಿಸಿರುವುದು ಖಂಡನೀಯ ಎಂದಿದ್ದಾರೆ. ಸಿನಿಮಾದ ವಸ್ತು ಬಗ್ಗೆ ಅಥವ ಯಾವುದೇ ಇತರ ವಿಚಾರಗಳ ಅವಲೋಕನ ಮಾಡಿ ನಿಯಂತ್ರಣ ಹೇರಲು ಸೆನ್ಸಾರ್ ಮಂಡಳಿ ಇದೆ. ಭಿನ್ನಮತ ಇದೆ ಎಂಬ ಕಾರಣಕ್ಕಾಗಿ ಸೃಜನಶೀಲ ನಿರ್ಮಾಪಕನ ಹಕ್ಕನ್ನು ಕಸಿದುಕೊಳ್ಳುವ ಯತ್ನ ಸರಿಯಲ್ಲ ಎಂದು ಚಿತ್ರ ನಿರ್ಮಾಪಕರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿಭಟನಕಾರರು ಸುಲ್ತಾನ್ ಸಿನಿಮಾ ಕುರಿತಾಗಿ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳದೆ ಚಿತ್ರೀಕರಣಕ್ಕೆ ಅಡ್ಡಿಪಡಿಸಿರುವುದು ಸ್ಪಷ್ಟವಾಗಿದೆ. ಪ್ರತಿಭಟನೆಯಿಂದ ಯಾವುದೇ ರೀತಿಯ ಹಾನಿ ಆಗದಿದ್ದರೂ ಶೂಟಿಂಗ್ ಶೆಡ್ಯೂಲ್ ಗೆ ತೊಂದರೆ ಆಗಿದೆ. ಇದರಿಂದಾಗಿ ನಿರ್ಮಾಪಕರಿಗೆ ಆರ್ಥಿಕ ನಷ್ಚ ಆಗಲಿದೆ.

ಇತ್ತೀಚೆಗೆ ದೆಹಲಿಯಲ್ಲಿ ಡಿಮೊನಿಟೈಸೇಷನ್ ಕುರಿತು ಕೇರಳದವರು ನಿರ್ಮಿಸಿದ ಡಾಕ್ಯುಮೆಂಟರಿ ಪ್ರದರ್ಶನಕ್ಕೆ ಕೂಡ ಇದೇ ರೀತಿಯಲ್ಲಿ ಅಡ್ಡಿಪಡಿಸಲಾಗಿತ್ತು. ಚಹ ಮಾರುವ ವ್ಯಕ್ತಿಯೊಬ್ಬನ ಮೇಲೆ ನೋಟು ಅಮಾನ್ಯ ಯಾವ ರೀತಿ ದುಷ್ಪರಿಣಾಮ ಬೀರಿತು ಎಂಬ ಬಗೆಗಿನ ಡಾಕ್ಯುಮೆಂಟರಿಯನ್ನು ವೀಕ್ಷಿಸದೆ ದೆಹಲಿಯ ಕೇಸರಿ ಪಡೆ ದಾಂಧಲೆ ಮಾಡಿತ್ತು.

ನವೆಂಬರ್ 10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು 2015ರಲ್ಲಿ ಅಂದಿನ ಸಿದ್ದರಾಮಯ್ಯ ಸರಕಾರ ಘೋಷಿಸಿದ ಅನಂತರ ಟಿಪ್ಪು ಸುಲ್ತಾನ್ ವಿರುದ್ಧದ ದ್ವೇಷ ರಾಜಕಾರಣದ ತೀವ್ರತೆ ಹೆಚ್ಚಾಗ ತೊಡಗಿತು. ಇತ್ತೀಚೆಗೆ ಬಿಜೆಪಿ ಅಧಿಕಾರಕ್ಕೆ ಬಂದೊಡನೆ ವಿವಾದಿತ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಪ್ರಕಟಿಸಿದೆ.

ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆ

ಟಿಪ್ಪು ಜಯಂತಿ ಆಚರಿಸಿದರೂ, ಆಚರಿಸದೇ ಇದ್ದರೂ ಮೈಸೂರು ಹುಲಿ ನಾಡಿಗೆ ನೀಡಿದ ಕೊಡುಗೆಯಾಗಲಿ ಆತ ಬೆಳಿಸಿದ ತಾಂತ್ರಿಕತೆಗಾಗಲಿ ಯಾವುದೇ ಚ್ಯುತಿ ಆಗುವುದಿಲ್ಲ. ಟಿಪ್ಪು ಸುಲ್ತಾನ್ ಕುರಿತು ಅದಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಿನಿಮಾ, ಟಿವಿ ಧಾರವಾಹಿ, ಡಾಕ್ಯುಮೆಂಟರಿಗಳು ಬಂದಿವೆ. ಟಿಪ್ಪು ಸುಲ್ತಾನ್ ಇಂದಿನ ಪ್ರಚಾರ ಪ್ರಿಯರಿಗಿಂತಲೂ ನೂರು ವರ್ಷಗಳ ಹಿಂದೆಯೇ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿದ್ದು, ಭಾರತವನ್ನು ಆಕ್ರಮಿಸಿದ್ದ ಬ್ರಿಟಿಷರು ಅದೊಂದು ಹೆಸರಿಗೆ ಮಾತ್ರ ಬೆದರುತ್ತಿದ್ದರು.

ಶೃಂಗೇರಿ ಮಠ, ಶ್ರೀರಂಗಪಟ್ಟಣ ದೇವಸ್ಥಾನ, ನಂಜನಗೂಡು ದೇವಸ್ಥಾನ ಸೇರಿದಂತೆ ಹಲವರು ಹಿಂದೂ ಧಾರ್ಮಿಕ ಕೇಂದ್ರಗಳ ಆರಾಧಕನಾಗಿದ್ದ, ಪೋಷಕನಾಗಿದ್ದ. ಇಂದು ಹಿಂದೂಗಳ ಮಹಾನ್ ವೀರನಾಗಿ ಕೊಂಡಾಡಲಾಗುತ್ತಿರುವ ಶಿವಾಜಿಯ ಮರಾಠ ಪಡೆ ಶೃಂಗೇರಿ ಬಳಿ ದಾಳಿ ನಡೆಸಿದಾಗ ಸಹಾಯಕ್ಕೆ ಧಾವಿಸಿದ್ದು ಇದೇ ಟಿಪ್ಪು ಸುಲ್ತಾನ್. ಶೃಂಗೇರಿ ಪೀಠಾಧಿಪತಿಯನ್ನು ಜಗದ್ಗುರು ಎಂದು ಟಿಪ್ಪು ಸಂಬೋಧಿಸುತ್ತಿದ್ದ. ಕೇರಳದಲ್ಲಿ ಹಿಂದೂ ಸಮಾಜದ ಅಸಮಾನತೆಯನ್ನು ಹೋಗಲಾಡಿಸಲು ಕೈಗೊಂಡಿರುವ ಕ್ರಮಗಳನ್ನು ಈಗಲೂ ನೆನಪಿಸಲಾಗುತ್ತಿದೆ. ಹೀಗಿರುವ ವಿಚಾರಗಳನ್ನು ಮರೆ ಮಾಚಿ ಇತಿಹಾಸದ ಪುಟಗಳನ್ನು ಇಂದಿನ ಸಾಮಾಜಿಕ ಪರಿಸ್ಥಿತಿಗೆ ಹೋಲಿಸಿ ರಾಜಕೀಯ ನಡೆಸುವುದು ಯಾವುದೇ ದೇಶ ಭಕ್ತಿಯ ಕೆಲಸವಲ್ಲ ಎಂಬುದು ಸ್ಪಷ್ಟ.

Tags: BJPHindu MunnaniRashmika MandannaSultan Film CrewTipu JayantiTipu Sultanಟಿಪ್ಪು ಜಯಂತಿಟಿಪ್ಪು ಸುಲ್ತಾನ್ಬಿಜೆಪಿರಶ್ಮಿಕಾ ಮಂದಣ್ಣಸುಲ್ತಾನ್ ಚಿತ್ರ ತಂಡಹಿಂದೂ ಮುನ್ನಾಣಿ
Previous Post

‘ಹಿಂದಿ-ಮಂದಿ’ಗಳ ನಡುವಿನ ಕನ್ನಡ ಪತ್ರಕರ್ತ

Next Post

ಕಾಂಗ್ರೆಸ್ ಒಳಜಗಳ: ಯುದ್ಧಕ್ಕೂ ಮೊದಲಿನ ಶಸ್ತ್ರತ್ಯಾಗ

Related Posts

Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
0

ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ...

Read moreDetails

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025
Next Post
ಕಾಂಗ್ರೆಸ್ ಒಳಜಗಳ: ಯುದ್ಧಕ್ಕೂ ಮೊದಲಿನ ಶಸ್ತ್ರತ್ಯಾಗ

ಕಾಂಗ್ರೆಸ್ ಒಳಜಗಳ: ಯುದ್ಧಕ್ಕೂ ಮೊದಲಿನ ಶಸ್ತ್ರತ್ಯಾಗ

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada