• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೊಸ ತಳಿಯ ಕರೋನಾ ವೈರಾಣು ಕುರಿತು ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು – ಪ್ರಿಯಾಂಕ್ ಖರ್ಗೆ

by
December 22, 2020
in ದೇಶ
0
ಹೊಸ ತಳಿಯ ಕರೋನಾ ವೈರಾಣು ಕುರಿತು ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು – ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಕರೋನಾ ಸೋಂಕಿನ ಹೊಸ ತಳಿಯ ವೈರಾಣುಗಳು ಯುಕೆಯಲ್ಲಿ ಪತ್ತೆಯಾದ ಬೆನ್ನಲ್ಲೇ, ಭಾರತಕ್ಕೂ ಸೋಂಕು ತಲುಪಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಿರುವ ಶಾಸಕ ಪ್ರಿಯಾಂಕ್‌ ಖರ್ಗೆ ಅವರು, ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕರೋನಾ ನಿರ್ಲಕ್ಷ್ಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮತ್ತೆ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಕರೋನಾ ಕಂಡುಬಂದ ಆರಂಭದಲ್ಲಿ ಸೋಂಕನ್ನು ಕಡೆಗಣಿಸಿತ್ತು. ತಕ್ಷಣ ಎಚ್ಚೆತ್ತು ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡಿದ್ದರೆ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರಲಿಲ್ಲ. ಕೆಲವರನ್ನು ಕ್ವಾರಂಟೈನ್ ಮಾಡುವ ಅವಕಾಶವನ್ನು ಕೈಚೆಲ್ಲಿದ ಕೇಂದ್ರ ಸರ್ಕಾರ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅವೈಜ್ಞಾನಿಕ ಲಾಕ್ ಡೌನ್ ಜಾರಿ ಮಾಡಿ ದೇಶವನ್ನ ಅಧೋಗತಿಗೆ ತಳ್ಳಿತ್ತು. ಈಗ ಮತ್ತೊಮ್ಮೆ ಅದೇ ರೀತಿಯ ನಿರ್ಲಕ್ಷ್ಯವನ್ನು ಸರ್ಕಾರ ಅನುಸರಿಸಿದೆ. ಸೋಂಕು ಇಳಿಮುಖವಾಗಿದೆ ಎಂದು ಎಲ್ಲಾ ಮುನ್ನೆಚೆರಿಕೆಗಳನ್ನು ಗಾಳಿಗೆ ತೂರಲಾಗಿದೆ,” ಎಂದಿದ್ದಾರೆ.

ಕೊರೊನಾ ನಿರ್ಲಕ್ಷ್ಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮತ್ತೆ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ.

ಕೊರೊನಾ ಕಂಡುಬಂದ ಆರಂಭದಲ್ಲಿ ಸೋಂಕನ್ನು ಕಡೆಗಣಿಸಿತ್ತು. ತಕ್ಷಣ ಎಚ್ಚೆತ್ತು ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡಿದ್ದರೆ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರಲಿಲ್ಲ.
1/n

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 22, 2020


ADVERTISEMENT

ಜನರಿಗೆ ಮಾತ್ರ ಮಾಸ್ಕ್ ಧರಿಸಬೇಕೆಂದು ಒತ್ತಡ ಹೇರಿ ದಂಡ ವಸೂಲಿ ಮಾಡಲಾಗುತ್ತಿದೆ.‌ಆದರೆ ಸರ್ಕಾರ ಮಾತ್ರ ತನ್ನ ಪಾಲಿನ ಜವಾಬ್ದಾರಿಗಳಿಂದ ನುಣಚಿಕೊಳ್ಳುತ್ತಿದೆ. ಶಾಲಾ ಕಾಲೇಜು ಆರಂಭಿಸಲಾಗಿದೆ. ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ಮುಕ್ತವಾಗಿ ತೆರೆದಿಡಲಾಗಿದೆ. ಆದರೆ ಎಲ್ಲಿಯೂ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಕಳೆದ ಸೆಪ್ಟಂಬರ್ ನಿಂದಲೂ ಇಂಗ್ಲೆಂಡ್ ನಲ್ಲಿ ಸಕ್ರಿಯವಾಗಿರುವ ಹೊಸ ತಳಿಯ ವೈರಸ್ ಕೋವಿಡ್ -19ಗಿಂತಲೂ ಶೇ.70ರಷ್ಟು ವೇಗವಾಗಿ ಹರಡುತ್ತಿದೆ ಎಂಬ ವರದಿ ಇದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಬಹಿರಂಗಗೊಂಡು ವಾರವಾಗಿದೆ. ನಮ್ಮ ದೇಶದ ಆರೋಗ್ಯ ಇಲಾಖೆ ನಿನ್ನೆಯವರೆಗೂ ಎಚ್ಚೆತ್ತುಕೊಂಡಿಲ್ಲ, ಎಂದು ಆರೋಗ್ಯ ಇಲಾಖೆಯ ವಿರುದ್ದ ಕಿಡಿಕಾರಿದ್ದಾರೆ.

Also Read: ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ: ವಿಮಾನ ಸಂಚಾರ ನಿರ್ಬಂಧಿಸಿದ ಭಾರತ

“ಇಂಗ್ಲೆಂಡ್ ನಿಂದ 2 ದಿನದಲ್ಲಿ 291 ಮಂದಿ ದೇಶಕ್ಕೆ ಬಂದಿದ್ದಾರೆ. ಅವರಲ್ಲಿ 69 ಮಂದಿ ಬಳಿ ಕರೋನಾ ನೆಗೆಟಿವ್ ವರದಿ ಇಲ್ಲ. ಕರ್ನಾಟಕಕ್ಕೆ 138 ಮಂದಿ ಬಂದಿದ್ದಾರೆ. ಜನರಿಗೆ ಮಾಸ್ಕ್ ಹಾಕಿಲ್ಲ ಎಂದು ದಂಡ ಹಾಕುವ ಸರ್ಕಾರ ವಿದೇಶದಿಂದ ಬರುವವರನ್ನು ಪರೀಕ್ಷಿಸದೆ ಒಳ ಬಿಡುತ್ತಿದೆ. ಅವರಿಗೆ ಕ್ವಾರಂಟೈನ್ ಇಲ್ಲ,” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇಂಗ್ಲೆಂಡ್ ನಿಂದ ಬಂದವರು ದೇಶದ ಒಳಗೆ ಸಂಚರಿಸಲು ಸುಲಭವಾಗಿ ಬಿಡಲಾಗಿದೆ. ಹೊಸ ತಳಿಯ ಸೋಂಕು ಅವರಿಂದ ಹಬ್ಬಿದ್ದರೆ ಅದರ ಹೊಣೆ ಯಾರು ಹೊರುತ್ತಾರೆ? ಮತ್ತೆ ಚಿಕಿತ್ಸೆ ಹೆಸರಿನಲ್ಲಿ ಲೂಟಿ ಹೊಡೆಯಲು ಬೊಕ್ಕಸದಲ್ಲೂ ಹಣ ಇಲ್ಲ. ಹಾಗಿದ್ದೂ ಸರ್ಕಾರ ಜನರ ಪ್ರಾಣದ ಜೊತೆ ಆಟ ಆಡುತ್ತಿರುವುದೇಕೆ?, ಎಂದು ಅವರು ಹೇಳಿದ್ದಾರೆ.

Tags: ಕರೋನಾಪ್ರಿಯಾಂಕ್ ಖರ್ಗೆ
Previous Post

ನ್ಯೂಸ್ 18 ನೆಟ್ವರ್ಕ್ ಸಮೀಕ್ಷೆಯ ಹೆಸರಲ್ಲಿ ರೈತರ ಎದೆಗುಂದಿಸುವ ತಂತ್ರ!

Next Post

ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

Related Posts

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
April 21, 2026
0

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ https://youtu.be/Qq4ttLUbePI?si=fsnxrvw_HfnTQXm3 ತಮಿಳುನಾಡಿನ...

Read moreDetails
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada