• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!

by
February 5, 2020
in ಕರ್ನಾಟಕ
0
ಹೊಸ ದೇಶವನ್ನೇ ನಿರ್ಮಿಸಿದ ನಿತ್ಯಾನಂದನ ಬಂಧನಕ್ಕೆ ವಾರೆಂಟ್!
Share on WhatsAppShare on FacebookShare on Telegram

ನಿತ್ಯಾನಂದ, ಕರುನಾಡು ಮರೆಯದ ಹೆಸರುಗಳ ಪಟ್ಟಿಯಲ್ಲಿ ನಿತ್ಯಾನಂದ ಸ್ವಾಮೀಜಿಗೆ ಪ್ರತ್ಯೇಕವಾದ ಸ್ಥಾನವಿದೆ. ನಿತ್ಯಾನಂದ ಸ್ವಾಮೀಜಿ, ಸ್ವಯಂಘೋಷಿತ ದೇವಮಾನವನಾಗಿ ಬಿಡದಿಯಲ್ಲಿ ಬಿಡಾರ ಹೂಡಿದ ಬಳಿಕ ತನ್ನ ವಿಶೇಷ ಕೆಲಸಗಳಿಂದಲೇ ಗಮನ ಸೆಳೆದಿರುವುದು ಹೆಚ್ಚು. ಸ್ವಾಮೀಜಿಗಳು ಎಂದರೆ ಬಡ ಮಕ್ಕಳÀ ಸೇವೆ, ಸಮಾಜಸೇವೆ, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವುದು. ನೊಂದವರ ಕಣ್ಣಿರು ಒರೆಸುವುದು ಎನ್ನುವ ಆಲೋಚನೆಯನ್ನೇ ದೂರ ಮಾಡಿದ ಕುಖ್ಯಾತಿ ಬಿಡದಿಯ ನಿತ್ಯಾನಂದ ಸ್ವಾಮೀಜಿಗೆ ಸಲ್ಲುತ್ತದೆ. ಈ ನಿತ್ಯಾನಂದ ಸ್ವಾಮೀಜಿ ಸದ್ಯಕ್ಕೆ ನಮ್ಮ ಭಾರತದಲ್ಲಿ ಇಲ್ಲ. ಈತ ಪ್ರತ್ಯೇಕ ದೇಶವನ್ನೇ ನಿರ್ಮಾಣ ಮಾಡಿಕೊಂಡು ಈಕ್ವೆಡಾರ್ ದೀಪರಾಷ್ಟçದಲ್ಲಿ ವಾಸವಾಗಿದ್ದಾನೆ. ಈತನನ್ನು ಬಂಧಿಸಲು ಗುಜರಾತ್ ಸರ್ಕಾರ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ. ಇದೀಗ ಕರ್ನಾಟಕ ಹೈಕೋರ್ಟ್ ಕೂಡ ಬಂಧನ ವಾರೆಂಟ್ ಕೊಟ್ಟಿದೆ.

ADVERTISEMENT

ಬಿಡದಿಯ ಆಶ್ರಮದಲ್ಲಿ ಅತ್ಯಾಚಾರ ನಡೆಸಿದ ಆರೋಪ ನಿತ್ಯಾನಂದ ಸ್ವಾಮೀಜಿ ಮೇಲಿದ್ದು, ಆ ಪ್ರಕರಣದಲ್ಲಿ ಜಾಮೀನು ಕೂಡ ಪಡೆದುಕೊಂಡಿದ್ದ. ಆದರೆ ನಿತ್ಯಾನಂದ ಸ್ವಾಮೀಜಿಗೆ ಕೊಟ್ಟಿರುವ ಜಾಮೀನು ರದ್ದು ಮಾಡಬೇಕೆಂದು ನಿತ್ಯಾನಂದ ವಿರುದ್ಧ ದೂರು ಸಲ್ಲಿಸಿರುವ ಲೆನಿನ್ ಹೈಕೋರ್ಟ್ ಮೊರೆ ಹೋಗಿದ್ದರು. ಲೆನಿನ್ ಪರ ವಕೀಲರ ವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಆದೇಶ ಪ್ರಕಟಗೊಂಡಿದ್ದು, ರಾಸಲೀಲೆ ಪ್ರಕರಣದಲ್ಲಿ ನಿತ್ಯಾನಂದ ಪಡೆದುಕೊಂಡಿದ್ದ ಜಾಮೀನು ರದ್ದು ಮಾಡಲಾಗಿದೆ. ಜೊತೆಗೆ ನಿತ್ಯಾನಂದ ಜಾಮೀನು ಪಡೆದುಕೊಂಡಾಗ ಕೋರ್ಟ್ಗೆ ಸಲ್ಲಿಸಿದ್ದ ಬಾಂಡ್ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಸೂಚನೆ ಕೊಟ್ಟಿದೆ. ಫೆಬ್ರವರಿ 3ರಂದು ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿದ್ದ ಏಕಸದಸ್ಯ ಪೀಠ, ಇಂದು ತೀರ್ಪು ಪ್ರಕಟ ಮಾಡಿದ್ದು, ವಿಚಾರಣೆಗೆ ಹಾಜರಾಗದೆ ನ್ಯಾಯಾಲಯಕ್ಕೆ ಅಗೌರವ ಸೂಚಿಸಿದ್ದು, ಕೂಡಲೇ ಬಂಧನ ಮಾಡಿ ಎಂದು ಕೋರ್ಟ್ ಆದೇಶ ಮಾಡಿದೆ.

ಜೂನ್ 5, 2018ರ ಬಳಿಕ ನಿತ್ಯಾನಂದ ಕೋರ್ಟ್ ಎದುರು ಕೂಡ ಹಾಜರಾಗಿಲ್ಲ. ನಿತ್ಯಾನಂದ ಪಾಸ್‌ಪೋರ್ಟ್ ಅವಧಿ ಕೂಡ ಮುಕ್ತಾಯವಾಗಿದ್ದು, ಬೆಲ್ಲೀಸ್ ದೇಶದ ಪಾಸ್‌ಪೋರ್ಟ್ ಪಡೆದು ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಕೋರ್ಟ್ ನೋಟಿಸ್ ಕೂಡ ನಿತ್ಯಾನಂದ ಸ್ವೀಕಾರ ಮಾಡಿಲ್ಲ. ಬಿಡದಿ ಆಶ್ರಮದಲ್ಲಿ ಶಿಷ್ಯೆ ಅಚಲಾನಂದ ನೋಟಿಸ್ ಪಡೆದುಕೊಂಡಿದ್ದಾರೆ. ಬಿಡದಿಯಲ್ಲಿ ನಿತ್ಯಾನಂದ ಶ್ರೀಗಳು ಇಲ್ಲ ಎಂದು ಉತ್ತರಿಸಿದ್ದಾರೆ. ಈ ಎಲ್ಲಾ ಆಯಾಮಾಗಳಿಂದಲೂ ನಿತ್ಯಾನಂದನಿಗೆ ನೀಡಿರುವ ಜಾಮೀನು ಅರ್ಜಿಯನ್ನು ರದ್ದು ಮಾಡಬೇಕು ಎಂದು ಲೆನಿನ್ ಪರ ವಕೀಲರು ಕೋರಿದ್ದರು. ಲೆನಿನ್ ಪರ ವಕೀಲರ ವಾದ ಮನ್ನಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಜಾಮೀನು ರದ್ದು ಮಾಡಿ ಬಂಧನಕ್ಕೆ ಆದೇಶ ಮಾಡಿದೆ. ಇದೀಗ ಭಾರತ ಬಿಟ್ಟು ಪ್ರತ್ಯೇಕ ದೇಶವನ್ನೇ ಸ್ಥಾಪನೆ ಮಾಡಿ, ಭಾರತದಲ್ಲಿ ಎಲ್ಲವೂ ಸರಿಯಿಲ್ಲ ಎಂದು ವಿಶ್ವಸಂಸ್ಥೆಗೆ ದೂರು ಸಲ್ಲಿಸಿರುವ ಸ್ವಯಂಘೋಷಿತ ದೇವಮಾನವನಿಗೆ ಬಂಧನ ಭೀತಿ ಎದುರಾಗಿದೆ. ಕೋರ್ಟ್ ಎದುರು ಹಾಜರಾಗಿದ್ದ ಡಿಎಸ್‌ಪಿ ಬಾಲರಾಜ್, ನಾವು ನಿತ್ಯಾನಂದ ಸ್ವಾಮೀಜಿಗೆ ನೋಟಿಸ್ ಕೊಡಲು ಸಾಧ್ಯವಾಗ್ತಿಲ್ಲ. ಅವರು ಪ್ರಪಂಚ ರ‍್ಯಾಟನೆಯಲ್ಲಿದ್ದಾರೆ. ಈಕ್ವೇಡರ್ ರಾಷ್ಟçದ ಕೈಲಾಸ ಹೆಸರಿನ ದೀಪ ರಾಷ್ಟçದಲ್ಲಿದ್ದಾರೆ ಎನ್ನಲಾಗಿದೆ ಎಂದು ತಿಳಿಸಿದ್ದಾರೆ.

ನಿತ್ಯಾನಂದ ಸ್ವಾಮೀಜಿ, ಸೆಕ್ಷನ್‌ಗಳಾದ ಕ್ರಮಿನಲ್ ಅಪರಾಧ (114) ಅತ್ಯಾಚಾರ (376) ಸುಳ್ಳು ಮಾಹಿತಿ ನೀಡಿ ಕಣ್ಮರೆ (201), ವಂಚನೆ (420), ಕ್ರಿಮಿನಲ್ ಪಿತೂರಿ (120ಬಿ) ದೂರು ದಾಖಲಾಗಿದೆ. 2010ರಿಂದ 2 ಬಾರಿ ಬಂಧನಕ್ಕೆ ಒಳಪಟ್ಟಿದ್ದ ನಿತ್ಯಾನಂದ ಸ್ವಾಮೀಜಿ ಜಾಮೀನು ಪಡೆದು ಪಾರಾಗಿದ್ದ. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ, ಮತ್ತೆ ಬಂಧನಕ್ಕೆ ಒಳಪಡಿಸಿವಂತೆ ಸೂಚನೆ ಕೊಟ್ಟಿದ್ದು, ಪೊಲೀಸರು ಯಾವ ವಿಧಾನ ಅನುಸರಿಸ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ. ಈಗಾಗಲೇ ಭಾರತದಲ್ಲಿ ಕಾನೂನಿಗೆ ಗೌರವವಿಲ್ಲ. ಸುಖಾಸುಮ್ಮನೆ ಬಂಧನ ಮಾಡ್ತಾರೆ, ದೌರ್ಜನ್ಯ ಮಾಡುವ ಕಾನೂನುಗಳಿವೆ ಎಂದು ವಿಶ್ವಸಂಸ್ಥೆ ಬಾಗಿ ತಟ್ಟಿರುವ ನಿತ್ಯಾನಂದ ವಿರುದ್ಧ ಗುಜರಾತ್ ಸರ್ಕಾರ ಸಿಬಿಐ ಮೊರೆ ಹೋಗುತ್ತಿದೆ. ನಿನ್ನೆಯಷ್ಟೇ ಆದೇಶ ಮಾಡಿರುವ ಗುಜರಾತ್ ಹೈಕೋರ್ಟ್ ಇಬ್ಬರು ಹೆಣ್ಣುಮಕ್ಕಳ ನಾಪತ್ತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸೂಚನೆ ಕೊಟ್ಟಿದೆ. ಇದೀಗ ಕರ್ನಾಟಕ ಪೊಲೀಸರು ಕೂಡ ಸಿಬಿಐ, ಅಥವಾ ಕೇಂದ್ರ ಗೃಹ ಇಲಾಖೆ ಮೂಲಕ ಈಕ್ವೆಡರ್‌ನ ಕೈಲಾಸ ದೇಶದಲ್ಲಿರುವ ನಿತ್ಯಾನಂದನನ್ನು ಬಂಧಿಸುವ ಕೆಲಸ ಮಾಡುತ್ತಾ ಕಾದು ನೋಡ್ಬೇಕು. ಒಟ್ಟಾರೆ, ಪ್ರತ್ಯೇಕ ದೇಶ, ಪ್ರತ್ಯೇಕ ಹಣಕಾಸು, ಪ್ರತ್ಯೇಕ ಕಾನೂನು ರೂಪಿಸುತ್ತಿರುವ ತಮಿಳುನಾಡಿನ ನಿತ್ಯಾನಂದ ಪರಪ್ಪನ ಅಗ್ರಹಾರಕ್ಕೆ ಬರುವ ದಿನಗಳು ದೂರವಿಲ್ಲ ಎನಿಸುತ್ತದೆ.

Tags: BidadiCBIGujarat HighcourtKailasaRape CaseSwamy Nityanandaಕೈಲಾಸಗುಜರಾತ್ ಹೈಕೋರ್ಟ್ನಿತ್ಯಾನಂದನಿತ್ಯಾನಂದ ಸ್ವಾಮೀಜಿವಿಶ್ವಸಂಸ್ಥೆಸಿಬಿಐ
Previous Post

ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

Next Post

ಶಾಹಿನ್‌ಬಾಗ್‌ ಕುರಿತು ಬಿಜೆಪಿ ಬಿಡುಗಡೆ ಮಾಡಿರುವ ವಿಡಿಯೋ ಅಸಲಿಯೋ? ನಕಲಿಯೋ?

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಶಾಹಿನ್‌ಬಾಗ್‌ ಕುರಿತು ಬಿಜೆಪಿ ಬಿಡುಗಡೆ ಮಾಡಿರುವ ವಿಡಿಯೋ ಅಸಲಿಯೋ? ನಕಲಿಯೋ?

ಶಾಹಿನ್‌ಬಾಗ್‌ ಕುರಿತು ಬಿಜೆಪಿ ಬಿಡುಗಡೆ ಮಾಡಿರುವ ವಿಡಿಯೋ ಅಸಲಿಯೋ? ನಕಲಿಯೋ?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada